AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ

Corona Virus: ಆರೋಗ್ಯ ಸೇವೆಗಳನ್ನು ಸುಲಭವಾಗಿ ನೀಡಬಹುದಾದ ಮಟ್ಟಿಗೆ ಕೊರೊನಾ ಬಾಧೆ ಕುಗ್ಗಲಿದೆ ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿವೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕೊವಿಡ್ ಸೋಂಕು ಎಂಡೆಮಿಕ್ ಹಂತವನ್ನು ತಲುಪಲಿದೆ; ತಜ್ಞರ ಅಭಿಪ್ರಾಯವೇನು? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 15, 2021 | 7:50 PM

Share

ದೆಹಲಿ: ಕೊರೊನಾ ಸೋಂಕು ಭಾರತದಲ್ಲಿ ಮುಂದಿನ ಆರು ತಿಂಗಳಿನಲ್ಲಿ ಎಂಡೆಮಿಕ್ ಹಂತವನ್ನು ತಲುಪಲಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದರೆ, ಕೊವಿಡ್19 ಹೊಸ ರೂಪಾಂತರಿಗಳು ಕೊರೊನಾ ಮೂರನೇ ಅಲೆಯನ್ನು ತರಲಾರವು ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಸುಜೀತ್ ಸಿಂಗ್ ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕೊವಿಡ್ ಸೋಂಕು ಎಂಡೆಮಿಕ್ ಹಂತ ತಲುಪುತ್ತಿದೆ. ಅಂದರೆ, ಕೊರೊನಾ ಸೋಂಕನ್ನು ಇನ್ನು ಹೆಚ್ಚು ಉತ್ತಮವಾಗಿ ನಿರ್ವಹಿಸಬಹುದು. ಆರೋಗ್ಯ ಸೇವೆಗಳನ್ನು ಸುಲಭವಾಗಿ ನೀಡಬಹುದಾದ ಮಟ್ಟಿಗೆ ಕೊರೊನಾ ಬಾಧೆ ಕುಗ್ಗಲಿದೆ ಎಂದು ತಿಳಿಸಿದ್ದಾರೆ. ಕೇರಳದಲ್ಲಿ ಕೂಡ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿವೆ ಎಂದು ಅವರು ಹೇಳಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ ಆಗಲಿದೆ.

ಕೊವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಮುಖ್ಯ ಅಸ್ತ್ರವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಭಾರತದಲ್ಲಿ ಸುಮಾರು 75 ಕೋಟಿ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಲಸಿಕೆಯ ಪರಿಣಾಮಕಾರಿತ್ವ ಶೇಕಡಾ 70 ಆದರೆ, ಭಾರತದಲ್ಲಿ ಸುಮಾರು 50 ಕೋಟಿ ಮಂದಿ ರೋಗನಿರೋಧಕ ಶಕ್ತಿ ಪಡೆದಂತೆ ಎಂದು ಅವರು ತಿಳಿಸಿದ್ದಾರೆ.

ಕೊವಿಡ್ ಲಸಿಕೆಯ ಸಿಂಗಲ್ ಡೋಸ್ 30 ರಿಂದ 31 ಶೇಕಡಾ ರೋಗನಿರೋಧಕ ಶಕ್ತಿ ನೀಡುತ್ತದೆ. ಹಾಗಾಗಿ, ಲಸಿಕೆಯ ಮೊದಲ ಡೋಸ್ ಪಡೆದಿರುವ 30 ಕೋಟಿ ಮಂದಿ ಕೂಡ ರೋಗನಿರೋಧಕ ಶಕ್ತಿ ಪಡೆದುಕೊಂಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಆದರೆ, ಲಸಿಕೆ ಪಡೆದ ಬಳಿಕವೂ ಜನರು ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. ಒಮ್ಮೆ ಸೋಂಕಿಗೆ ಒಳಗಾದವರಿಗೆ ಅಥವಾ ಲಸಿಕೆ ಪಡೆದವರೂ ಕೊರೊನಾಗೆ ತುತ್ತಾಗುವ ಸಾಧ್ಯತೆಯ ಪ್ರಮಾಣ 20 ರಿಂದ 30 ಶೇಕಡಾ ಇದೆ ಎಂದು ಡಾ. ಸಿಂಗ್ ತಿಳಿಸಿದ್ದಾರೆ.

ಹೊಸ ಅಥವಾ ರೂಪಾಂತರಿ ಕೊರೊನಾ ವೈರಾಣುಗಳಿಂದ ಕೊವಿಡ್​ಗೆ ಮರಳಿ ತುತ್ತಾಗುವ ಸಾಧ್ಯತೆ ಇರುತ್ತದೆ ಎಂದು ಅವರು ವಿವರಿಸಿದ್ದಾರೆ. ಅಷ್ಟೇ ಅಲ್ಲದೆ, ಲಸಿಕೆಯ ರೋಗನಿರೋಧಕ ಶಕ್ತಿ ಲಸಿಕೆ ಪಡೆದ 70 ರಿಂದ 100 ದಿನಗಳ ಅವಧಿಯ ನಂತರ ಕುಂಠಿತವಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ.

ಸುಜೀತ್ ಸಿಂಗ್ ಪ್ರಕಾರ ಭಾರತದಲ್ಲಿ ಯಾವುದೇ ಹೊಸ ರೂಪಾಂತರಿ ಕೊರೊನಾ ವೈರಾಣು ಕಂಡುಬಂದಿಲ್ಲ. ಸದ್ಯ ಜಗತ್ತಿನಲ್ಲಿ ಕೊಂಚ ಆತಂಕ ಸೃಷ್ಟಿಸಿರುವ C1.2 ಮತ್ತು Mu ಕೊರೊನಾ ವೈರಾಣುಗಳು ಭಾರತದಲ್ಲಿ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹೊಸ ಕೊರೊನಾ ರೂಪಾಂತರಿ ಒಂದೇ ಮೂರನೇ ಅಲೆ ಸೃಷ್ಟಿಸಲು ಸಾಧ್ಯವಿಲ್ಲ. ಆದರೆ, ಹಬ್ಬಗಳ ಸೀಸನ್ ಇರುವುದರಿಂದ ಸ್ವಲ್ಪ ಎಚ್ಚರಿಕೆಯೂ ಅಗತ್ಯ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಕೊರೊನಾ ಇನ್ನು ಸ್ಥಳೀಯ ಜಾಡ್ಯ: ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿ ಸೌಮ್ಯ ಸ್ವಾಮಿನಾಥನ್

ಇದನ್ನೂ ಓದಿ: ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ