AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಭಾರತ ಹಿಂದೆಂದೂ ಕಂಡರಿಯದ ಬಜೆಟ್​ ನಿಮ್ಮ ಮುಂದಿರಲಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಗೂಗ್ಲಿ!

ಈ ಬಗ್ಗೆ ಸಿಐಐ ಪಾಲುದಾರಿಕೆ ಶೃಂಗಸಭೆ 2020ರಲ್ಲಿ ಮಾತನಾಡಿದ ನಿರ್ಮಲಾ, ಈ ಬಾರಿಯ ಬಜೆಟ್​ ತುಂಬಾನೇ ವಿಶೇಷವಾಗಿರಲಿದೆ. ಈ ರೀತಿಯ ಮುಂಗಡಪತ್ರವನ್ನು ಭಾರತ ಹಿಂದೇಂದೂ ಕಂಡಿರಲಿಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

Budget 2021 ಭಾರತ ಹಿಂದೆಂದೂ ಕಂಡರಿಯದ ಬಜೆಟ್​ ನಿಮ್ಮ ಮುಂದಿರಲಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಗೂಗ್ಲಿ!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
ರಾಜೇಶ್ ದುಗ್ಗುಮನೆ
| Edited By: |

Updated on:Jan 30, 2021 | 1:04 PM

Share

ನವದೆಹಲಿ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಭಾರತದ ಆರ್ಥಿಕತೆ ಮೈನಸ್​ 23ಕ್ಕೆ ಕುಸಿತ ಕಂಡಿತ್ತು. ಈಗ ನಿಧಾನವಾಗಿ ಆರ್ಥಿಕತೆ ಚೇತರಿಕೆ ಕಾಣಲು ಆರಂಭಿಸಿದೆ. ಈ ಮಧ್ಯೆ, ಮುಂದಿನ ಫೆಬ್ರವರಿಯಲ್ಲಿ ಘೋಷಣೆ ಆಗಲಿರುವ ಬಜೆಟ್​ ಬಗ್ಗೆ ಸಾಕಷ್ಟು ನಿರೀಕ್ಷೆ ಕೂಡ ಮೂಡಿದೆ. ಹೀಗಿರುವಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಈ ಬಾರಿಯ ಬಜೆಟ್​ ವಿಶೇಷವಾಗಿರಲಿದೆ ಎನ್ನುವ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಿಐಐ ಪಾಲುದಾರಿಕೆ ಶೃಂಗಸಭೆ 2020ರಲ್ಲಿ ಮಾತನಾಡಿದ ನಿರ್ಮಲಾ, ಈ ಬಾರಿಯ ಬಜೆಟ್​ ತುಂಬಾನೇ ವಿಶೇಷವಾಗಿರಲಿದೆ. ಈ ರೀತಿಯ ಮುಂಗಡಪತ್ರವನ್ನು ಭಾರತ ಹಿಂದೇಂದೂ ಕಂಡಿರಲಿಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಈ ಬಾರಿಯ ಬಜೆಟ್​ನಲ್ಲಿ ಆರ್ಥಿಕತೆಗೆ ಉತ್ತೇಜನ ನೀಡುವ ಸಾಕಷ್ಟು ಅಂಶಗಳು ಇರಲಿವೆ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ನಿಮ್ಮ ಸೂಚನೆಗಳನ್ನು ನನಗೆ ಕಳುಹಿಸಿ. ಇದರಿಂದ ಬಜೆಟ್​ ಸಿದ್ಧಪಡಿಸಲು ನಮಗೆ ತುಂಬಾನೇ ಸಹಕಾರಿಯಾಗಲಿದೆ. 100 ವರ್ಷಗಳ ಭಾರತದ ಇತಿಹಾಸದಲ್ಲಿ ಈ ರೀತಿಯ ಬಜೆಟ್​ಅನ್ನು ಯಾರು ನೋಡಿರಬಾರದು. ಆ ರೀತಿಯ ಮುಂಗಡ ಪತ್ರವನ್ನು ಸಿಧ್ಧಗೊಳಿಸಲಿದ್ದೇವೆ. ಆದರೆ, ಇದಕ್ಕೆ ನಿಮ್ಮ ಪ್ರತಿಕ್ರಿಯೆ ಅತ್ಯಗತ್ಯ ಎಂದಿದ್ದಾರೆ.

2021-22ನೇ ಸಾಲಿನ ಬಜೆಟ್​ ಫೆಬ್ರವರಿ 1ರಂದು ಮಂಡನೆ ಆಗಲಿದೆ. ಬಜೆಟ್​ ಅಧಿವೇಶನ ಫೆಬ್ರವರಿಯಲ್ಲಿ ಆರಂಭವಾಗಲಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳು ಕೊರೊನಾ ವೈರಸ್​ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಬಜೆಟ್​ನಲ್ಲಿ ಈ ಕ್ಷೇತ್ರಗಳಿಗೆ ಚೈತನ್ಯ ನೀಡುವ ಕೆಲಸ ಆಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

Published On - 5:09 pm, Sat, 19 December 20

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ