AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಭಾರತ ಹಿಂದೆಂದೂ ಕಂಡರಿಯದ ಬಜೆಟ್​ ನಿಮ್ಮ ಮುಂದಿರಲಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಗೂಗ್ಲಿ!

ಈ ಬಗ್ಗೆ ಸಿಐಐ ಪಾಲುದಾರಿಕೆ ಶೃಂಗಸಭೆ 2020ರಲ್ಲಿ ಮಾತನಾಡಿದ ನಿರ್ಮಲಾ, ಈ ಬಾರಿಯ ಬಜೆಟ್​ ತುಂಬಾನೇ ವಿಶೇಷವಾಗಿರಲಿದೆ. ಈ ರೀತಿಯ ಮುಂಗಡಪತ್ರವನ್ನು ಭಾರತ ಹಿಂದೇಂದೂ ಕಂಡಿರಲಿಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

Budget 2021 ಭಾರತ ಹಿಂದೆಂದೂ ಕಂಡರಿಯದ ಬಜೆಟ್​ ನಿಮ್ಮ ಮುಂದಿರಲಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಗೂಗ್ಲಿ!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
Follow us
ರಾಜೇಶ್ ದುಗ್ಗುಮನೆ
| Updated By: guruganesh bhat

Updated on:Jan 30, 2021 | 1:04 PM

ನವದೆಹಲಿ: ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಭಾರತದ ಆರ್ಥಿಕತೆ ಮೈನಸ್​ 23ಕ್ಕೆ ಕುಸಿತ ಕಂಡಿತ್ತು. ಈಗ ನಿಧಾನವಾಗಿ ಆರ್ಥಿಕತೆ ಚೇತರಿಕೆ ಕಾಣಲು ಆರಂಭಿಸಿದೆ. ಈ ಮಧ್ಯೆ, ಮುಂದಿನ ಫೆಬ್ರವರಿಯಲ್ಲಿ ಘೋಷಣೆ ಆಗಲಿರುವ ಬಜೆಟ್​ ಬಗ್ಗೆ ಸಾಕಷ್ಟು ನಿರೀಕ್ಷೆ ಕೂಡ ಮೂಡಿದೆ. ಹೀಗಿರುವಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಈ ಬಾರಿಯ ಬಜೆಟ್​ ವಿಶೇಷವಾಗಿರಲಿದೆ ಎನ್ನುವ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸಿಐಐ ಪಾಲುದಾರಿಕೆ ಶೃಂಗಸಭೆ 2020ರಲ್ಲಿ ಮಾತನಾಡಿದ ನಿರ್ಮಲಾ, ಈ ಬಾರಿಯ ಬಜೆಟ್​ ತುಂಬಾನೇ ವಿಶೇಷವಾಗಿರಲಿದೆ. ಈ ರೀತಿಯ ಮುಂಗಡಪತ್ರವನ್ನು ಭಾರತ ಹಿಂದೇಂದೂ ಕಂಡಿರಲಿಕ್ಕೆ ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಈ ಬಾರಿಯ ಬಜೆಟ್​ನಲ್ಲಿ ಆರ್ಥಿಕತೆಗೆ ಉತ್ತೇಜನ ನೀಡುವ ಸಾಕಷ್ಟು ಅಂಶಗಳು ಇರಲಿವೆ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ನಿಮ್ಮ ಸೂಚನೆಗಳನ್ನು ನನಗೆ ಕಳುಹಿಸಿ. ಇದರಿಂದ ಬಜೆಟ್​ ಸಿದ್ಧಪಡಿಸಲು ನಮಗೆ ತುಂಬಾನೇ ಸಹಕಾರಿಯಾಗಲಿದೆ. 100 ವರ್ಷಗಳ ಭಾರತದ ಇತಿಹಾಸದಲ್ಲಿ ಈ ರೀತಿಯ ಬಜೆಟ್​ಅನ್ನು ಯಾರು ನೋಡಿರಬಾರದು. ಆ ರೀತಿಯ ಮುಂಗಡ ಪತ್ರವನ್ನು ಸಿಧ್ಧಗೊಳಿಸಲಿದ್ದೇವೆ. ಆದರೆ, ಇದಕ್ಕೆ ನಿಮ್ಮ ಪ್ರತಿಕ್ರಿಯೆ ಅತ್ಯಗತ್ಯ ಎಂದಿದ್ದಾರೆ.

2021-22ನೇ ಸಾಲಿನ ಬಜೆಟ್​ ಫೆಬ್ರವರಿ 1ರಂದು ಮಂಡನೆ ಆಗಲಿದೆ. ಬಜೆಟ್​ ಅಧಿವೇಶನ ಫೆಬ್ರವರಿಯಲ್ಲಿ ಆರಂಭವಾಗಲಿದೆ. ಈಗಾಗಲೇ ಬಹುತೇಕ ಕ್ಷೇತ್ರಗಳು ಕೊರೊನಾ ವೈರಸ್​ ಹೊಡೆತಕ್ಕೆ ಸಿಲುಕಿ ನಲುಗಿ ಹೋಗಿವೆ. ಬಜೆಟ್​ನಲ್ಲಿ ಈ ಕ್ಷೇತ್ರಗಳಿಗೆ ಚೈತನ್ಯ ನೀಡುವ ಕೆಲಸ ಆಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಆಪ್ತ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್​ ನಿಯೋಜನೆ

Published On - 5:09 pm, Sat, 19 December 20

ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ