AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಹ್ಯಾಕಾಶಕ್ಕೆ ಸ್ತ್ರೀ ರೋಬೋಟ್ ವ್ಯೋಮ್​​ಮಿತ್ರ ಕಳಿಸಲು ಸರ್ಕಾರ ಚಿಂತನೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಸಾಂಕ್ರಾಮಿಕ ರೋಗದಿಂದಾಗಿ ಗಗನ್‌ಯಾನ್‌ ಯೋಜನೆಯು ವಿಳಂಬವಾಗಿದೆ. ಈಗ ನಾವು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಮೊದಲ ಪ್ರಾಯೋಗಿಕ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದೇವೆ. ಗಗನಯಾತ್ರಿಗಳನ್ನು ಮರಳಿ ಕರೆತರುವುದು ಅವರನ್ನು ಕಳುಹಿಸುವಷ್ಟೇ ಮುಖ್ಯವಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಬಾಹ್ಯಾಕಾಶಕ್ಕೆ ಸ್ತ್ರೀ ರೋಬೋಟ್ ವ್ಯೋಮ್​​ಮಿತ್ರ ಕಳಿಸಲು ಸರ್ಕಾರ ಚಿಂತನೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಜಿತೇಂದ್ರ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 26, 2023 | 7:29 PM

Share

ದೆಹಲಿ ಆಗಸ್ಟ್ 26: ಭಾರತವು ಗಗನ್‌ಯಾನ್‌ ಮಿಷನ್‌ನಲ್ಲಿ  (Gaganyaan mission)ಮಹಿಳಾ ರೋಬೋಟ್ ” ವ್ಯೋಮ್​​ಮಿತ್ರ “(Vyommitra) ಅನ್ನು ಕಳುಹಿಸಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ (Jitendra Singh) ಎನ್‌ಡಿಟಿವಿ ಜಿ20 ಕಾನ್ಕ್ಲೇವ್‌ನಲ್ಲಿ ತಿಳಿಸಿದ್ದಾರೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾಯೋಗಿಕ ಬಾಹ್ಯಾಕಾಶ ಹಾರಾಟವನ್ನು ಪ್ರಯತ್ನಿಸಲಾಗುವುದು. ನಂತರದ ಕಾರ್ಯಾಚರಣೆಯಲ್ಲಿ ಮಹಿಳಾ ರೋಬೋಟ್ “ವ್ಯೋಮ್​​ಮಿತ್ರ” ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ಗಗನ್‌ಯಾನ್‌ ಯೋಜನೆಯು ವಿಳಂಬವಾಗಿದೆ. ಈಗ ನಾವು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಮೊದಲ ಪ್ರಾಯೋಗಿಕ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದೇವೆ. ಗಗನಯಾತ್ರಿಗಳನ್ನು ಮರಳಿ ಕರೆತರುವುದು ಅವರನ್ನು ಕಳುಹಿಸುವಷ್ಟೇ ಮುಖ್ಯವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಎರಡನೇ ಕಾರ್ಯಾಚರಣೆಯಲ್ಲಿ, ಮಹಿಳಾ ರೋಬೋಟ್ ಇರುತ್ತದೆ. ಅವರು ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸುತ್ತಾರೆ. ಎಲ್ಲವೂ ಪರಿಪೂರ್ಣವಾಗಿದ್ದರೆ, ನಾವು ಮುಂದುವರಿಯಬಹುದು ಎಂದಿದ್ದಾರೆ ಸಿಂಗ್.

ಚಂದ್ರಯಾನ-3 ಲ್ಯಾಂಡರ್ ಅಂತಿಮವಾಗಿ ಚಂದ್ರನ ದಕ್ಷಿಣ ಧ್ರುವದ ಬಳಿ ಸ್ಪರ್ಶಿಸಿದ ಹೊತ್ತಿನ ಅನುಭವವನ್ನು ವಿವರಿಸಿದ ಅವರು ಇಸ್ರೋ ತಂಡದೊಂದಿಗೆ ನಿಕಟ ಸಂಬಂಧ ಹೊಂದಿರುವವರು, ನಾವು ಆತಂಕಗೊಂಡಿದ್ದೆವು. ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆಯಿಂದ ಚಂದ್ರನ ಕಕ್ಷೆಗೆ ಹೊರಟಾಗ ನನ್ನ ಮೊದಲ ಆತಂಕದ ಕ್ಷಣವಾಗಿತ್ತು.ಲ್ಯಾಂಡಿಂಗ್ ತುಂಬಾ ಸುಗಮವಾಗಿತ್ತು ಎಂದು ಸಿಂಗ್ ಹೇಳಿದ್ದಾರೆ. ಚಂದ್ರನ ಇಳಿಯುವಿಕೆಯು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ದೇಶದ ಪ್ರಯಾಣದಲ್ಲಿ ಕ್ವಾಂಟಮ್ ಜಿಗಿತವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿಯವರ ಭಾಷಣಗಳ ಸಂಕಲನಸಬ್​​​ ಕಾ ಸಾಥ್, ಸಬ್​​​ ಕಾ ವಿಕಾಸ್, ಸಬ್​​​ ಕಾ ವಿಶ್ವಾಸ್ ಸಂಚಿಕೆ 2 ಮತ್ತು 3 ಬಿಡುಗಡೆ

“ಪ್ರಧಾನಿ ನರೇಂದ್ರ ಮೋದಿ ಅವರು ಬಾಹ್ಯಾಕಾಶ ಕ್ಷೇತ್ರವನ್ನು ಚುರುಕುಗೊಳಿಸಿದ್ದರಿಂದ ಇದು ಸಂಭವಿಸಿದೆ. ಸುಮಾರು 2019 ರವರೆಗೆ ಶ್ರೀಹರಿಕೋಟಾದ ಗೇಟ್‌ಗಳನ್ನು ಮುಚ್ಚಲಾಗಿತ್ತು, ಆದರೆ ಈ ಬಾರಿ ಮಾಧ್ಯಮಗಳು ಮತ್ತು ಶಾಲಾ ಮಕ್ಕಳನ್ನು ಆಹ್ವಾನಿಸಲಾಗಿದೆ. ಈ ಬಾರಿ ಅದು ಜನರ ಒಡೆತನದಲ್ಲಿದೆ ಎಂದು ಕೇಂದ್ರ ಸಚಿವರು ಹೇಳಿದರು. ಅದೇ ವೇಳೆ ಬಾಹ್ಯಾಕಾಶ ಯೋಜನೆಗಳಿಗೆ ಧನಸಹಾಯವನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತವು ಚಂದ್ರನ ದಕ್ಷಿಣ ಧ್ರುವದ ಬಳಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ರಾಷ್ಟ್ರವಾಗಿದೆ. ಯುಎಸ್ಎಸ್ಆರ್, ಯುಎಸ್ ಮತ್ತು ಚೀನಾ ನಂತರ ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಅನ್ನು ಇಳಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ