AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜತಾಂತ್ರಿಕ ಕಲಹ ಉಲ್ಬಣ; ಕೆನಡಾದಲ್ಲಿರುವ ರಾಯಭಾರಿಯನ್ನು ವಾಪಸ್ ಕರೆಸಲು ಭಾರತ ನಿರ್ಧಾರ

ಉಗ್ರವಾದ ಮತ್ತು ಹಿಂಸಾಚಾರದ ವಾತಾವರಣದಲ್ಲಿ, ಟ್ರುಡೊ ಸರ್ಕಾರದ ಕ್ರಮಗಳು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡಿದೆ ಎಂದು ಒತ್ತಿಹೇಳಲಾಗಿದೆ. ಅವರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಸ್ತುತ ಕೆನಡಾದ ಸರ್ಕಾರದ ಬದ್ಧತೆಯ ಬಗ್ಗೆ ನಮಗೆ ಯಾವುದೇ ನಂಬಿಕೆಯಿಲ್ಲ. ಆದ್ದರಿಂದ, ಭಾರತ ಸರ್ಕಾರವು ಹೈಕಮಿಷನರ್ ಮತ್ತು ಇತರ ಉದ್ದೇಶಿತ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ವಾಪಸ್ ಕರೆಸಲು ನಿರ್ಧರಿಸಿದೆ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ

ರಾಜತಾಂತ್ರಿಕ ಕಲಹ ಉಲ್ಬಣ; ಕೆನಡಾದಲ್ಲಿರುವ ರಾಯಭಾರಿಯನ್ನು ವಾಪಸ್ ಕರೆಸಲು ಭಾರತ ನಿರ್ಧಾರ
ಪಿಎಂ ಮೋದಿ-ಟ್ರುಡೊ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Oct 14, 2024 | 8:51 PM

Share

ದೆಹಲಿ ಅಕ್ಟೋಬರ್ 14: ಭಾರತವು ಕೆನಡಾದಲ್ಲಿನ ತನ್ನ ಹೈಕಮಿಷನರ್ ಮತ್ತು ಇತರ ಉದ್ದೇಶಿತ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ತಿಳಿಸಿದೆ. “ಕೆನಡಾದ ರಾಯಭಾರಿಯನ್ನು ಕಾರ್ಯದರ್ಶಿ ಅವರು ಇಂದು ಸಂಜೆ ಕರೆದಿದ್ದು, ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ಮತ್ತು ಅಧಿಕಾರಿಗಳ ವಿರುದ್ಧದ ಆಧಾರರಹಿತ  ಆರೋಪಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಅವರಿಗೆ ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

“ಉಗ್ರವಾದ ಮತ್ತು ಹಿಂಸಾಚಾರದ ವಾತಾವರಣದಲ್ಲಿ, ಟ್ರುಡೊ ಸರ್ಕಾರದ ಕ್ರಮಗಳು ಅವರ ಸುರಕ್ಷತೆಗೆ ಅಪಾಯವನ್ನುಂಟುಮಾಡಿದೆ ಎಂದು ಒತ್ತಿಹೇಳಲಾಗಿದೆ. ಅವರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರಸ್ತುತ ಕೆನಡಾದ ಸರ್ಕಾರದ ಬದ್ಧತೆಯ ಬಗ್ಗೆ ನಮಗೆ ಯಾವುದೇ ನಂಬಿಕೆಯಿಲ್ಲ. ಆದ್ದರಿಂದ, ಭಾರತ ಸರ್ಕಾರವು ಹೈಕಮಿಷನರ್ ಮತ್ತು ಇತರ ಉದ್ದೇಶಿತ ರಾಜತಾಂತ್ರಿಕರು ಮತ್ತು ಅಧಿಕಾರಿಗಳನ್ನು ವಾಪಸ್ ಕರೆಸಲು ನಿರ್ಧರಿಸಿದೆ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

“ಭಾರತದ ವಿರುದ್ಧ ಉಗ್ರವಾದ, ಹಿಂಸಾಚಾರ ಮತ್ತು ಪ್ರತ್ಯೇಕತಾವಾದಕ್ಕೆ ಟ್ರುಡೊ ಸರ್ಕಾರದ ಬೆಂಬಲಕ್ಕೆ ಪ್ರತಿಕ್ರಿಯೆಯಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಭಾರತ ಹೊಂದಿದೆ ಎಂದು ತಿಳಿಸಲಾಗಿದೆ” ಎಂದು ಸಚಿವಾಲಯದ ಹೇಳಿಕೆಯಲ್ಲಿದೆ.

ಕೆನಡಾದ ರಾಯಭಾರಿ ಸ್ಟೀವರ್ಟ್ ವೀಲರ್ಸ್ ಸುದ್ದಿಗಾರರೊಂದಿಗೆ ಮಾತನಾಡಿದ್ದು “ಭಾರತ ಸರ್ಕಾರದ ಏಜೆಂಟರ ನಡುವಿನ ಸಂಬಂಧಗಳು ಮತ್ತು ಕೆನಡಾದ ನೆಲದಲ್ಲಿ ಕೆನಡಾದ ಪ್ರಜೆಯ ಹತ್ಯೆಗೆ ಕೆನಡಾ ನಂಬಲರ್ಹವಾದ, ನಿರಾಕರಿಸಲಾಗದ ಪುರಾವೆಗಳನ್ನು ಒದಗಿಸಿದೆ. ಈಗ ಭಾರತವು ತಾನು ಏನು ಮಾಡುವುದಾಗಿ ಹೇಳಿತ್ತೋ ಅದನ್ನು ಅನುಸರಿಸಬೇಕು. ಆ ಎಲ್ಲಾ ಆರೋಪಗಳನ್ನು ಪರಿಶೀಲಿಸುವ ಸಮಯ ಬಂದಿದೆ. ಕೆನಡಾ ಭಾರತದೊಂದಿಗೆ ಸಹಕರಿಸಲು ಸಿದ್ಧವಾಗಿದೆ ಎಂದು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ತನಿಖೆಯಲ್ಲಿ ಭಾರತೀಯ ಹೈಕಮಿಷನರ್ ಅವರನ್ನು ‘ಆಸಕ್ತಿಯ ವ್ಯಕ್ತಿ’ ಎಂದು ಸೇರಿಸಿಕೊಳ್ಳುವ ಕೆನಡಾದ ಕ್ರಮದ ನಂತರ ಭಾರತ ಮತ್ತು ಕೆನಡಾ ನಡುವಿನ ಉದ್ವಿಗ್ನತೆ ಉಲ್ಬಣಗೊಂಡಿತು.

ಇದನ್ನೂ ಓದಿ: ನಿಜ್ಜಾರ್ ಪ್ರಕರಣ: ಕೆನಡಾದ ಟ್ರುಡೊ ಸರ್ಕಾರದ ನಡೆ ವಿರುದ್ಧ ಭಾರತ ಗರಂ

ಕೆನಡಾಕ್ಕೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ

“ನಾವು ನಿನ್ನೆ ಕೆನಡಾದಿಂದ ರಾಜತಾಂತ್ರಿಕ ಸಂವಹನವನ್ನು ಸ್ವೀಕರಿಸಿದ್ದೇವೆ, ಆ ದೇಶದಲ್ಲಿನ ತನಿಖೆಗೆ ಸಂಬಂಧಿಸಿದ ವಿಷಯದಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರು ‘ಆಸಕ್ತಿಯ ವ್ಯಕ್ತಿಗಳು’ ಎಂದು ಸೂಚಿಸಲಾಗಿದೆ. ಭಾರತ ಸರ್ಕಾರವು ಈ ಅಸಂಬದ್ಧ ಆರೋಪಗಳನ್ನು ಬಲವಾಗಿ ತಿರಸ್ಕರಿಸುತ್ತದೆ ಎಂದು ಎಂಇಎ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ