AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಮತ್ತೆ ಕೊರೊನಾತಂಕ: ನಿನ್ನೆಗಿಂತಲೂ ಇಂದು ಹೆಚ್ಚು ಕೇಸ್​ಗಳು ದಾಖಲು..ಸಾವಿನ ಸಂಖ್ಯೆಯಲ್ಲೂ ಏರಿಕೆ

24 ಗಂಟೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರುವಲ್ಲಿ ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಪಂಜಾಬ್​, ಕರ್ನಾಟಕ, ಗುಜರಾತ್​ ರಾಜ್ಯಗಳ ಪಾಲು ಜಾಸ್ತಿ ಇದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಮತ್ತೆ ಕೈ ಮೀರುತ್ತಿದ್ದು, ಈಗಾಗಲೇ ಹಲವು ನಗರಗಳಲ್ಲ ಲಾಕ್​ಡೌನ್​ ಹೇರಲಾಗಿದೆ.

ದೇಶದಲ್ಲಿ ಮತ್ತೆ ಕೊರೊನಾತಂಕ: ನಿನ್ನೆಗಿಂತಲೂ ಇಂದು ಹೆಚ್ಚು ಕೇಸ್​ಗಳು ದಾಖಲು..ಸಾವಿನ ಸಂಖ್ಯೆಯಲ್ಲೂ ಏರಿಕೆ
ಕೊರೊನಾ ಟೆಸ್ಟ್​
Lakshmi Hegde
|

Updated on:Mar 14, 2021 | 2:20 PM

Share

ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕಳೆದ 24 ಗಂಟೆಯಲ್ಲಿ 25,320 ಹೊಸ ಕೇಸ್​​ಗಳು ಪತ್ತೆಯಾಗಿದ್ದು, ನಿನ್ನೆ (ಶನಿವಾರ)ಗೆ ಹೋಲಿಸಿದರೆ ಇಂದು ಸುಮಾರು 500ರಷ್ಟು ಹೆಚ್ಚಾಗಿದೆ. ನಿನ್ನೆ ಒಟ್ಟು 24,882ಕೇಸ್​ಗಳು ದಾಖಲಾಗಿದ್ದವು. ಈ ವರ್ಷದಲ್ಲೇ ಇದು ಹೆಚ್ಚು ಎಂದು ಆರೋಗ್ಯ ಇಲಾಖೆ ಹೇಳಿತ್ತು. ಆದರೆ ಇಂದು ನಿನ್ನೆಗಿಂತಲೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಒಂದು ದಿನದಲ್ಲಿ ಇಷ್ಟು 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇಂದು ಪತ್ತೆಯಾದಂತಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1,13,59,048ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಯಲ್ಲಿ 161 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,58,607ಕ್ಕೆ ಏರಿಕೆಯಾಗಿದೆ. ಕಳೆದ 44 ದಿನಗಳಲ್ಲಿ ಒಂದು ದಿನದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇಂದೇ ಹೆಚ್ಚು ಎಂದೂ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು 2,10,544ಕ್ಕೆ ತಲುಪಿದ್ದು, ಚೇತರಿಕೆಯ ಪ್ರಮಾಣ ಶೇ.96.7 ಇದೆ. 2021ರ ಡಿಸೆಂಬರ್​ 20ರಂದು 26,624 ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಅದಾದ ಮೇಲೆ ಇಳಿಕೆಯಾಗುತ್ತ ಬಂದಿತ್ತು. ಆದರೆ ಇಂದು ಮತ್ತೆ 25ಸಾವಿರಕ್ಕೂ ಹೆಚ್ಚು ಕೊವಿಡ್​ ಸೋಂಕಿತರು ಪತ್ತೆಯಾಗಿದ್ದಾರೆ.

24 ಗಂಟೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರುವಲ್ಲಿ ಮುಖ್ಯವಾಗಿ ಮಹಾರಾಷ್ಟ್ರ, ಕೇರಳ, ಪಂಜಾಬ್​, ಕರ್ನಾಟಕ, ಗುಜರಾತ್​ ರಾಜ್ಯಗಳ ಪಾಲು ಜಾಸ್ತಿ ಇದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಮತ್ತೆ ಕೈ ಮೀರುತ್ತಿದ್ದು, ಈಗಾಗಲೇ ಹಲವು ನಗರಗಳಲ್ಲ ಲಾಕ್​ಡೌನ್​ ಹೇರಲಾಗಿದೆ. ನೈಟ್​ ಕರ್ಫ್ಯೂ ಕೂಡ ಜಾರಿ ಮಾಡಲಾಗಿದೆ. ಇನ್ನೂ ಕೆಲವು ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಿಧಿಸಲು ಮುಂದಾಗುತ್ತಿವೆ.

ಇದನ್ನೂ ಓದಿ: ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ.. ಕೊರೊನಾ ತಡೆಯಲು ಜನರ ಸಹಕಾರ ಬೇಕು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೊರೊನಾ​ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳು; ಕೊವಿಡ್​-19 ತಾಂತ್ರಿಕ ಸಲಹಾ ಸಮಿತಿಯಿಂದ ಅಧಿಕಾರಿಗಳಿಗೆ ಹೊಸ ಸುತ್ತೋಲೆ

Published On - 2:18 pm, Sun, 14 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್