AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳಲ್ಲಿ ಭಾರತ ಬೃಹತ್ ಪರಿವರ್ತನೆಗೆ ಸಾಕ್ಷಿಯಾಗಿದೆ; ನ್ಯೂಸ್ 9 ಜಾಗತಿಕ ಶೃಂಗಸಭೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ

ನ್ಯೂಸ್ 9 ಗ್ಲೋಬಲ್ ಶೃಂಗಸಭೆಯ 2ನೇ ದಿನವಾದ ಇಂದು ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದಿ ಬಿಗ್ಗೆಸ್ಟ್ ಟರ್ನ್​ ರೌಂಡ್ ಸ್ಟೋರಿ ಎಂಬ ವಿಷಯದ ಕುರಿತು ಮಾತನಾಡಿದ್ದಾರೆ. ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಬೃಹತ್ ಪರಿವರ್ತನೆಯನ್ನು ಕಂಡಿದೆ ಎಂದು ಹೇಳಿದ್ದಾರೆ.

10 ವರ್ಷಗಳಲ್ಲಿ ಭಾರತ ಬೃಹತ್ ಪರಿವರ್ತನೆಗೆ ಸಾಕ್ಷಿಯಾಗಿದೆ; ನ್ಯೂಸ್ 9 ಜಾಗತಿಕ ಶೃಂಗಸಭೆಯಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ
ಸುಷ್ಮಾ ಚಕ್ರೆ
|

Updated on:Nov 23, 2024 | 12:36 AM

Share

ಸ್ಟಟ್‌ಗಾರ್ಟ್: ಜರ್ಮನಿಯ ಸ್ಟಟ್‌ಗಾರ್ಟ್‌ನಲ್ಲಿ ನ್ಯೂಸ್ 9 ಜಾಗತಿಕ ಶೃಂಗಸಭೆಯ 2ನೇ ದಿನವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕಳೆದ ಹತ್ತು ವರ್ಷಗಳಿಂದ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಬೃಹತ್ ಪರಿವರ್ತನಾ ಯಾತ್ರೆಗೆ ಸಾಕ್ಷಿಯಾಗಿದೆ. ಇದು ಏಷ್ಯಾ ಪೆಸಿಫಿಕ್‌ನಿಂದ ಇಂಡೋ-ಪೆಸಿಫಿಕ್‌ಗೆ ಏರಿದೆ. ಇದು ಭಾರತದ ಬೆಳವಣಿಗೆಯನ್ನು ಹೇಳುತ್ತದೆ. ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಭಾರತ ಹೊಸ ಎತ್ತರಕ್ಕೆ ಏರಿದೆ. ಅವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೇಶದ ಅಭಿವೃದ್ಧಿಯಲ್ಲಿ 180 ಡಿಗ್ರಿ ತಿರುವು ಉಂಟಾಗಿದೆ. ಭಾರತವು ಪ್ರಮಾಣ ಮತ್ತು ವೇಗ ಎರಡರಲ್ಲೂ ತನ್ನನ್ನು ತಾನು ಪರಿವರ್ತಿಸಿಕೊಂಡಿದೆ ಎಂದು ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ಭಾರತವು ಹೆಚ್ಚು ಪರಿಣಾಮಕಾರಿಯಾಗಿದೆ. ನಾವು ವೇಗದ ಪರಿಕಲ್ಪನೆಯ ಬಗ್ಗೆ ಮಾತನಾಡುವಾಗ ಅದನ್ನು ಗಮನಿಸಲೇಬೇಕಾಗುತ್ತದೆ. ಇಂದು ಭಾರತೀಯ ಕಂಪನಿಗಳು, ಭಾರತೀಯ ಬ್ರ್ಯಾಂಡ್‌ಗಳು ಹೊಸ ಎತ್ತರವನ್ನು ತಲುಪಿವೆ. ಪೂರೈಕೆ ಸರಪಳಿಯು ಪ್ರಪಂಚದಾದ್ಯಂತ ವಿಸ್ತರಿಸಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಸಂಬಂಧ, ಗೌರವ, ಜವಾಬ್ದಾರಿ ಬಗ್ಗೆ ಕಲಿತಿದ್ದೇನೆ; ನ್ಯೂಸ್​9 ಶೃಂಗಸಭೆಯಲ್ಲಿ ಟಿವಿ9 ನೆಟ್​ವರ್ಕ್ ಎಂಡಿ, ಸಿಇಒ ಬರುಣ್ ದಾಸ್

ಭಾರತದ ಬೆಳವಣಿಗೆಯ ಬಗ್ಗೆ ಮಾತನಾಡಿದ ಜ್ಯೋತಿರಾದಿತ್ಯ ಸಿಂಧಿಯಾ, ಭಾರತವು 4 ಟ್ರಿಲಿಯನ್ ಆರ್ಥಿಕತೆಗೆ ಹತ್ತಿರದಲ್ಲಿದೆ. ಭಾರತ 4ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. 2027ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯನ್ನು ತಲುಪಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಬೆಳವಣಿಗೆ ಎಂದರೆ ಕೇವಲ ಸಂಖ್ಯೆಗಳ ಬಗ್ಗೆ ಅಲ್ಲ. ಇದು ಭಾರತದಲ್ಲಿ ಜೀವನವನ್ನು ಪರಿವರ್ತಿಸುವಲ್ಲಿ ಸಹಾಯ ಮಾಡಿದ ಕಲ್ಯಾಣ ಯೋಜನೆಗಳನ್ನು ಗುರಿಯಾಗಿಸಿಕೊಂಡಿದೆ. ನಮ್ಮ ಜನರ ಸಬಲೀಕರಣವು ನಮ್ಮ ಖಂಡವನ್ನು ಪರಿವರ್ತಿಸಲು ಸಹಾಯ ಮಾಡಿದೆ. ಕಳೆದ 10 ವರ್ಷಗಳಲ್ಲಿ ನಾವು 10 ಮಿಲಿಯನ್ ಮನೆಗಳನ್ನು ನಿರ್ಮಿಸಿದ್ದೇವೆ. ದೇಶಾದ್ಯಂತ 120 ಮಿಲಿಯನ್ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಭಾರತದ ಆರ್ಥಿಕತೆ, ಕಲ್ಯಾಣ ಕಾರ್ಯಕ್ರಮಗಳು ಎಲ್ಲವನ್ನೂ ಡಿಜಿಟಲ್ ವ್ಯವಸ್ಥೆಗೆ ಸ್ಥಳಾಂತರಿಸಲಾಗಿದೆ ಎಂದು ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ-ಜರ್ಮನ್ ಸಂಬಂಧದಲ್ಲಿ ಹೊಸ ಅಧ್ಯಾಯ ಆರಂಭ; ನ್ಯೂಸ್​9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

ಜರ್ಮನಿಯ ಪ್ರಸಿದ್ಧ ಎಂಎಚ್‌ಪಿ ಅರೆನಾದಲ್ಲಿ ಮೂರು ದಿನಗಳ ಶೃಂಗಸಭೆ ನಡೆಯುತ್ತಿದೆ. ಎರಡೂ ದೇಶಗಳ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಜ್ಯೋತಿರಾದಿತ್ಯ ಸಿಂಧಿಯಾ ಅವರಲ್ಲದೆ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಉದ್ಯಮಿ ಸಮುದಾಯದ ಉನ್ನತ ನಾಯಕರು ಮತ್ತು ಇತರ ಕ್ಷೇತ್ರಗಳ ಮುಖಂಡರು ಕೂಡ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 pm, Fri, 22 November 24

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್