AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Pharmacy Hub ಮಾನವನ ಇತಿಹಾಸದಲ್ಲೇ ಭಾರತದ ಸಾಧನೆ ಅನನ್ಯ; ಈ ಗೆಲವು ಯಾವುದೇ ಒಂದು ವ್ಯಕ್ತಿಗೆ ಸಲ್ಲುವುದಿಲ್ಲ- ಪ್ರಧಾನಿ ಮೋದಿ ಭಾಷಣ

Corona Virus ವಿರುದ್ಧದ ಹೋರಾಟವನ್ನು ಗೇಲಿ ಮಾಡಲಾಯಿತು, ಕೊರೊನಾ ವ್ಯಾಕ್ಸಿನ್ ವಿಚಾರದಲ್ಲೂ ಅನೇಕ ಪ್ರಶ್ನೆಗಳನ್ನು ಎತ್ತಿದರು. ಆದರೆ, ಈಗ ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುತ್ತಿದೆ. PM Modi Speech in Rajya Sabha

India Pharmacy Hub ಮಾನವನ ಇತಿಹಾಸದಲ್ಲೇ ಭಾರತದ ಸಾಧನೆ ಅನನ್ಯ; ಈ ಗೆಲವು ಯಾವುದೇ ಒಂದು ವ್ಯಕ್ತಿಗೆ ಸಲ್ಲುವುದಿಲ್ಲ- ಪ್ರಧಾನಿ ಮೋದಿ ಭಾಷಣ
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ
Skanda
| Edited By: |

Updated on:Feb 08, 2021 | 12:07 PM

Share

ಕೊರೊನಾ (Corona Virus) ವಿರುದ್ಧದ ಹೋರಾಟದಲ್ಲಿ ಭಾರತ ಮಾಡಿರುವ ಸಾಧನೆ ಮಾನವನ ಇತಿಹಾಸದಲ್ಲೇ ಅನನ್ಯವಾದದ್ದು. ಈ ಗೆಲವು ಯಾವುದೇ ಒಂದು ವ್ಯಕ್ತಿಗೆ ಸಲ್ಲುವುದಿಲ್ಲ. ಇಡೀ ಹಿಂದೂಸ್ತಾನ ಕೊರೊನಾ ವಿರುದ್ಧ ಗೆದ್ದಿದೆ ಎಂದು ಹೇಳಲು ಹೆಮ್ಮೆಯಾಗುತ್ತದೆ. ನಾವು ದೀಪ ಹಚ್ಚಿದ್ದನ್ನು ವ್ಯಂಗ್ಯ ಮಾಡಲಾಯಿತು, ಕೊರೊನಾ ವಿರುದ್ಧದ ಹೋರಾಟವನ್ನು ಗೇಲಿ ಮಾಡಲಾಯಿತು, ಕೊರೊನಾ ವ್ಯಾಕ್ಸಿನ್ ವಿಚಾರದಲ್ಲೂ ಅನೇಕ ಪ್ರಶ್ನೆಗಳನ್ನು ಎತ್ತಿದರು. ಆದರೆ, ಈಗ ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ಮೋದಿ (PM Modi) ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ವಿಶ್ವದಲ್ಲೇ ಅತೀ ಹೆಚ್ಚು ಲಸಿಕೆ ನೀಡಿದ ದೇಶ ಭಾರತ ಎನ್ನುವುದು ಹೆಮ್ಮೆಯ ಸಂಗತಿ. ಭಾರತ ಇಡೀ ವಿಶ್ವದ ಫಾರ್ಮಸಿ ಹಬ್ (Pharmacy Hub) ಆಗಿ ಪರಿವರ್ತನೆ ಹೊಂದಿದೆ. ವಿಶ್ವದ ಅನೇಕ ದೇಶಗಳು ಭಾರತದ ಲಸಿಕೆ ಬಂದಿದೆ‌ ಎಂದು ಖುಷಿಯಿಂದ ಹೇಳಿಕೊಂಡಿವೆ. ಈ ವಿಚಾರಕ್ಕಾಗಿ ಇಡೀ ದೇಶದ ಜನರು ಗರ್ವ ಪಡಬೇಕು ಎಂದು ಪ್ರಧಾನಿ ಹೇಳಿಕೆ ನೀಡಿದ್ದಾರೆ.

ಕೊರೊನಾವನ್ನು ನಮ್ಮ ರಾಜ್ಯಗಳೂ ಯಶಸ್ವಿಯಾಗಿ ನಿಯಂತ್ರಿಸಿವೆ. ಸಾಂಕ್ರಾಮಿಕ ರೋಗಾಣುವಿನ ವಿರುದ್ಧ ರಾಜ್ಯಗಳು ನಡೆಸಿದ ಹೋರಾಟ ಶ್ಲಾಘನೀಯವಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಿಗೂ ಧನ್ಯವಾದ ಸಮರ್ಪಿಸುತ್ತೇನೆ. ನಮ್ಮನ್ನು ಯಾರು ಎಷ್ಟೇ ಟೀಕೆ ಮಾಡಿದ್ದರೂ ಈಗ ನಾವು ಹೋರಾಟದಲ್ಲಿ ಗೆಲ್ಲುವ ಮೂಲಕ ಸಾಧಿಸಿ ತೋರಿಸಿದ್ದೇವೆ ಎಂಬ ತೃಪ್ತಿ ಇದೆ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ಚಾಟಿ ಬೀಸಿದರು.

MSP ಇತ್ತು, MSP ಇದೆ ಮತ್ತು MSP ಮುಂದೆಯೂ ಇರಲಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ

Published On - 12:06 pm, Mon, 8 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ