ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್‌ ಗೆದ್ದಿದೆ: ಕಾಂಗ್ರೆಸ್​ ಬೆಂಬಲಿಗ

ದೇಶದಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್(WorldCup) ಗೆದ್ದಿದೆ ಎಂದು ಕಾಂಗ್ರೆಸ್​ ಬೆಂಬಲಿಗ ಆಶಿಶ್ ಸಿಂಗ್ ಎಂಬುವವರು ಟ್ವಿಟ್ಟರ್​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾತ್ರ ಭಾರತವು ವಿಶ್ವಕಪ್ ಗೆದ್ದಿದೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದಿಲ್ಲ ಎನ್ನುವುದನ್ನು ಬರೆಯಲಾಗಿದೆ. ಅದರ ಜತೆಗೆ ವರ್ಷ ಹಾಗೂ ವಿಶ್ವಕಪ್​ನಲ್ಲಿ ಸೋಲು, ಗೆಲುವು ಎರಡನ್ನೂ ನೀಡಲಾಗಿದೆ.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್‌ ಗೆದ್ದಿದೆ: ಕಾಂಗ್ರೆಸ್​ ಬೆಂಬಲಿಗ
ವಿಶ್ವಕಪ್
Follow us
|

Updated on: Nov 20, 2023 | 3:44 PM

ದೇಶದಲ್ಲಿ ಕಾಂಗ್ರೆಸ್(Congress)​ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್(WorldCup) ಗೆದ್ದಿದೆ ಎಂದು ಕಾಂಗ್ರೆಸ್​ ಬೆಂಬಲಿಗ ಆಶಿಶ್ ಸಿಂಗ್(Ashish Singh) ಎಂಬುವವರು ಟ್ವಿಟ್ಟರ್​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾತ್ರ ಭಾರತವು ವಿಶ್ವಕಪ್ ಗೆದ್ದಿದೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದಿಲ್ಲ ಎನ್ನುವುದನ್ನು ಬರೆಯಲಾಗಿದೆ. ಅದರ ಜತೆಗೆ ವರ್ಷ ಹಾಗೂ ವಿಶ್ವಕಪ್​ನಲ್ಲಿ ಸೋಲು, ಗೆಲುವು ಎರಡನ್ನೂ ನೀಡಲಾಗಿದೆ.

ಈ ಮೂಲಕ ಕ್ರಿಕೆಟ್‌ಗೆ ಹೊಸ ರಾಜಕೀಯ ಲೇಪನ ಶುರುವಾಗಿದೆ. ಮೋದಿ ಹೆಸರಿನ ಕ್ರೀಡಾಂಗಣದಲ್ಲಿ ಭಾರತಕ್ಕೆ ಸೋಲು, ಇದು ಇಂಡಿಯಾ ಒಕ್ಕೂಟದ ಗೆಲುವಿನ ಮುನ್ಸೂಚನೆ ಎಂದೆಲ್ಲ ಕೆಲವರು ಪೋಸ್ಟ್‌ ಹಾಕಿದ್ದರು. ಈಗ ಆಶಿಶ್‌ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಇಂತಹದೊಂದು ಕಾಕತಾಳೀಯ ಘಟನೆಗೆ ರಾಜಕೀಯ ಬಣ್ಣ ನೀಡಿದ್ದಾರೆ.

ಭಾರತವು ಮೊದಲ ಬಾರಿಗೆ ಕಪಿಲ್‌ ದೇವ್‌ ನಾಯಕತ್ವದಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು. ಅದಾದ ಬಳಿಕ ಭಾರತವು ಅಟಲ್‌ ಬಿಹಾರಿ ವಾಜಪೇಯಿ ಕಾಲದಲ್ಲಿಯೂ ಫೈನಲ್‌ನಲ್ಲಿ ಸೋತಿತ್ತು. ನಂತರ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಟಿ20 ಹಾಗೂ ಏಕದಿನ ವಿಶ್ವಕಪ್‌ನ್ನು ಭಾರತ ಗೆದ್ದಿತು. ಇದರ ಜತೆಗೆ ಚಾಂಪಿಯನ್ಸ್‌ ಟ್ರೋಫಿ ಕೂಡ ಭಾರತದ ಪಾಲಾಯಿತು.

ಮತ್ತಷ್ಟು ಓದಿ: ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಯಾವುದೇ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದಿಲ್ಲ ಎಂದು ಅವರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಏಳು ಐಸಿಸಿ ಟೂರ್ನಿಯನ್ನು ಹೆಸರಿಸಿದ್ದಾರೆ. ಅಂದ್ಹಾಗೆ ಅವರು ಎರಡು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ್ನು ಸೇರಿಸಿಲ್ಲ.

ಆಶಿಶ್ ಟ್ವೀಟ್​

ಪ್ರಧಾನಿ ಇಂದಿರಾ ಗಾಂಧಿ ಅವರ ಅವಧಿ

1993 ಐಸಿಸಿ ವಿಶ್ವಕಪ್-ಗೆಲುವು ಪ್ರಧಾನಿ ಡಾ. ಮನ್​ಮೋಹನ್​ ಸಿಂಗ್ 2007 ಟಿ20 ವಿಶ್ವಕಪ್-ಗೆಲುವು 2011 ಒಡಿಐ ವಿಶ್ವಕಪ್​-ಗೆಲುವು 2013 ಚಾಂಪಿಯನ್ಸ್​ ಟ್ರೋಫಿ- ಗೆಲುವು

ಪ್ರಧಾನಿ ನರೇಂದ್ರ ಮೋದಿ ಅವಧಿ

2014ರ ಟಿ20 ವಿಶ್ವಕಪ್-ಸೋಲು 2015ರ ಒಡಿಐ ವಿಶ್ವಕಪ್- ಸೋಲು 2016ರ ಟಿ20 ವಿಶ್ವಕಪ್- ಸೋಲು 2017ರ ಚಾಂಪಿಯನ್ಸ್​ ಕಪ್- ಸೋಲು 2019ರ ಒಡಿಐ ವಿಶ್ವಕಪ್ -ಸೋಲು 2022ರ ಟಿ20 ವಿಶ್ವಕಪ್ -ಸೋಲು 2023ರ ಒಡಿಐ ವಿಶ್ವಕಪ್​- ಸೋಲು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್