AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್‌ ಗೆದ್ದಿದೆ: ಕಾಂಗ್ರೆಸ್​ ಬೆಂಬಲಿಗ

ದೇಶದಲ್ಲಿ ಕಾಂಗ್ರೆಸ್​ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್(WorldCup) ಗೆದ್ದಿದೆ ಎಂದು ಕಾಂಗ್ರೆಸ್​ ಬೆಂಬಲಿಗ ಆಶಿಶ್ ಸಿಂಗ್ ಎಂಬುವವರು ಟ್ವಿಟ್ಟರ್​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾತ್ರ ಭಾರತವು ವಿಶ್ವಕಪ್ ಗೆದ್ದಿದೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದಿಲ್ಲ ಎನ್ನುವುದನ್ನು ಬರೆಯಲಾಗಿದೆ. ಅದರ ಜತೆಗೆ ವರ್ಷ ಹಾಗೂ ವಿಶ್ವಕಪ್​ನಲ್ಲಿ ಸೋಲು, ಗೆಲುವು ಎರಡನ್ನೂ ನೀಡಲಾಗಿದೆ.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್‌ ಗೆದ್ದಿದೆ: ಕಾಂಗ್ರೆಸ್​ ಬೆಂಬಲಿಗ
ವಿಶ್ವಕಪ್
ನಯನಾ ರಾಜೀವ್
|

Updated on: Nov 20, 2023 | 3:44 PM

Share

ದೇಶದಲ್ಲಿ ಕಾಂಗ್ರೆಸ್(Congress)​ ಅಧಿಕಾರದಲ್ಲಿದ್ದಾಗ ಮಾತ್ರ ಭಾರತ ವಿಶ್ವಕಪ್(WorldCup) ಗೆದ್ದಿದೆ ಎಂದು ಕಾಂಗ್ರೆಸ್​ ಬೆಂಬಲಿಗ ಆಶಿಶ್ ಸಿಂಗ್(Ashish Singh) ಎಂಬುವವರು ಟ್ವಿಟ್ಟರ್​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್​ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾತ್ರ ಭಾರತವು ವಿಶ್ವಕಪ್ ಗೆದ್ದಿದೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದಿಲ್ಲ ಎನ್ನುವುದನ್ನು ಬರೆಯಲಾಗಿದೆ. ಅದರ ಜತೆಗೆ ವರ್ಷ ಹಾಗೂ ವಿಶ್ವಕಪ್​ನಲ್ಲಿ ಸೋಲು, ಗೆಲುವು ಎರಡನ್ನೂ ನೀಡಲಾಗಿದೆ.

ಈ ಮೂಲಕ ಕ್ರಿಕೆಟ್‌ಗೆ ಹೊಸ ರಾಜಕೀಯ ಲೇಪನ ಶುರುವಾಗಿದೆ. ಮೋದಿ ಹೆಸರಿನ ಕ್ರೀಡಾಂಗಣದಲ್ಲಿ ಭಾರತಕ್ಕೆ ಸೋಲು, ಇದು ಇಂಡಿಯಾ ಒಕ್ಕೂಟದ ಗೆಲುವಿನ ಮುನ್ಸೂಚನೆ ಎಂದೆಲ್ಲ ಕೆಲವರು ಪೋಸ್ಟ್‌ ಹಾಕಿದ್ದರು. ಈಗ ಆಶಿಶ್‌ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಇಂತಹದೊಂದು ಕಾಕತಾಳೀಯ ಘಟನೆಗೆ ರಾಜಕೀಯ ಬಣ್ಣ ನೀಡಿದ್ದಾರೆ.

ಭಾರತವು ಮೊದಲ ಬಾರಿಗೆ ಕಪಿಲ್‌ ದೇವ್‌ ನಾಯಕತ್ವದಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗ, ಇಂದಿರಾ ಗಾಂಧಿ ಪ್ರಧಾನಿ ಆಗಿದ್ದರು. ಅದಾದ ಬಳಿಕ ಭಾರತವು ಅಟಲ್‌ ಬಿಹಾರಿ ವಾಜಪೇಯಿ ಕಾಲದಲ್ಲಿಯೂ ಫೈನಲ್‌ನಲ್ಲಿ ಸೋತಿತ್ತು. ನಂತರ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಟಿ20 ಹಾಗೂ ಏಕದಿನ ವಿಶ್ವಕಪ್‌ನ್ನು ಭಾರತ ಗೆದ್ದಿತು. ಇದರ ಜತೆಗೆ ಚಾಂಪಿಯನ್ಸ್‌ ಟ್ರೋಫಿ ಕೂಡ ಭಾರತದ ಪಾಲಾಯಿತು.

ಮತ್ತಷ್ಟು ಓದಿ: ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ಆದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಯಾವುದೇ ಐಸಿಸಿ ಟ್ರೋಫಿಯನ್ನು ಭಾರತ ಗೆದ್ದಿಲ್ಲ ಎಂದು ಅವರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಏಳು ಐಸಿಸಿ ಟೂರ್ನಿಯನ್ನು ಹೆಸರಿಸಿದ್ದಾರೆ. ಅಂದ್ಹಾಗೆ ಅವರು ಎರಡು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ್ನು ಸೇರಿಸಿಲ್ಲ.

ಆಶಿಶ್ ಟ್ವೀಟ್​

ಪ್ರಧಾನಿ ಇಂದಿರಾ ಗಾಂಧಿ ಅವರ ಅವಧಿ

1993 ಐಸಿಸಿ ವಿಶ್ವಕಪ್-ಗೆಲುವು ಪ್ರಧಾನಿ ಡಾ. ಮನ್​ಮೋಹನ್​ ಸಿಂಗ್ 2007 ಟಿ20 ವಿಶ್ವಕಪ್-ಗೆಲುವು 2011 ಒಡಿಐ ವಿಶ್ವಕಪ್​-ಗೆಲುವು 2013 ಚಾಂಪಿಯನ್ಸ್​ ಟ್ರೋಫಿ- ಗೆಲುವು

ಪ್ರಧಾನಿ ನರೇಂದ್ರ ಮೋದಿ ಅವಧಿ

2014ರ ಟಿ20 ವಿಶ್ವಕಪ್-ಸೋಲು 2015ರ ಒಡಿಐ ವಿಶ್ವಕಪ್- ಸೋಲು 2016ರ ಟಿ20 ವಿಶ್ವಕಪ್- ಸೋಲು 2017ರ ಚಾಂಪಿಯನ್ಸ್​ ಕಪ್- ಸೋಲು 2019ರ ಒಡಿಐ ವಿಶ್ವಕಪ್ -ಸೋಲು 2022ರ ಟಿ20 ವಿಶ್ವಕಪ್ -ಸೋಲು 2023ರ ಒಡಿಐ ವಿಶ್ವಕಪ್​- ಸೋಲು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ