AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ

ಭಾರತ ತನ್ನ ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ, ಇದಕ್ಕೆ ಯಾವುದೇ ಬೆಲೆ ತೆರಲು ಸಿದ್ಧ ಎಂದು ಪ್ರತಿಪಾದಿಸಿದರು.ಅಮೆರಿಕಕ್ಕೆ ರಫ್ತು ಮಾಡುವ ಭಾರತೀಯ ಉತ್ಪನ್ನಗಳ ಮೇಲೆ ಶೇ. 50 ಸುಂಕ ವಿಧಿಸಲು ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಭಾರತ-ಯುಎಸ್ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಪ್ರಧಾನಿ ಮೋದಿ ಅವರ ಈ ಬಲವಾದ ಹೇಳಿಕೆ ಬಂದಿದೆ. ಭಾರತೀಯ ಸರಕುಗಳ ಮೇಲಿನ ಸುಂಕದ ಹೆಚ್ಚಳವು ಕೃಷಿ ಉತ್ಪನ್ನಗಳನ್ನು ಒಳಗೊಂಡಿದೆ.

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Aug 07, 2025 | 11:14 AM

Share

ನವದೆಹಲಿ, ಆಗಸ್ಟ್​ 07: ಅಮೆರಿಕ(America)ದೊಂದಿಗಿನ ಸುಂಕ ಯುದ್ಧದ ನಡುವೆ, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ರೈತ(Farmer)ರ ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. ‘‘ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ’’ ಎಂದು ಪ್ರಧಾನಿ ಮೋದಿ ಟ್ರಂಪ್​​ಗೆ ಸವಾಲೆಸೆದಿದ್ದಾರೆ. ‘‘ರೈತರ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆ,  ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ’’ ಎಂದರು.

ನವದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿಯ ಮೇಲಿನ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

‘‘ನಮಗೆ ರೈತರ ಹಿತಾಸಕ್ತಿಯೇ ಪ್ರಮುಖ ಆದ್ಯತೆಯಾಗಿದೆ, ಭಾರತವು ತನ್ನ ರೈತರು, ಜಾನುವಾರು ರೈತರು ಮತ್ತು ಮೀನುಗಾರ ಸಹೋದರ ಸಹೋದರಿಯರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಇದಕ್ಕಾಗಿ ನಾನು ವೈಯಕ್ತಿಕವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ ಆದರೆ ನಾನು ಅದಕ್ಕೆ ಸಿದ್ಧನಿದ್ದೇನೆ’’ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ಓದಿ: ನಿಜವಾಯ್ತು ಟ್ರಂಪ್ ಬೆದರಿಕೆ; ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕ ವಿಧಿಸಿದ ಅಮೆರಿಕಾ!

ರೈತರ ಆದಾಯವನ್ನು ಹೆಚ್ಚಿಸುವುದು, ಕೃಷಿ ವೆಚ್ಚವನ್ನು ಕಡಿಮೆ ಮಾಡುವುದು, ಹೊಸ ಆದಾಯದ ಮೂಲಗಳನ್ನು ಸೃಷ್ಟಿಸುವುದು – ಈ ಗುರಿಗಳ ಮೇಲೆ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ಸರ್ಕಾರವು ರೈತರ ಬಲವನ್ನು ದೇಶದ ಪ್ರಗತಿಯ ಆಧಾರವೆಂದು ಪರಿಗಣಿಸಿದೆ.

ಪ್ರಧಾನಿ ಮೋದಿ ಭಾಷಣ

ಆದ್ದರಿಂದ, ಕಳೆದ ವರ್ಷಗಳಲ್ಲಿ ಮಾಡಿದ ನೀತಿಗಳು ಸಹಾಯವನ್ನು ಮಾತ್ರವಲ್ಲದೆ ರೈತರಲ್ಲಿ ವಿಶ್ವಾಸವನ್ನು ಹೆಚ್ಚಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಸಮ್ಮಾನ್ ನಿಧಿಯಿಂದ ಪಡೆದ ನೆರವು ಸಣ್ಣ ರೈತರಿಗೆ ಆತ್ಮ ವಿಶ್ವಾಸವನ್ನು ನೀಡಿದೆ. ಪ್ರಧಾನಮಂತ್ರಿ ಬೆಳೆ ವಿಮಾ ಯೋಜನೆಯು ರೈತರಿಗೆ ಅಪಾಯದಿಂದ ರಕ್ಷಣೆ ನೀಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮೂಲಕ ನೀರಾವರಿಗೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲಾಗಿದೆ.

ಸಣ್ಣ ರೈತರ ಸಂಘಟಿತ ಶಕ್ತಿ ಹೆಚ್ಚಾಗಿದೆ. ಸಹಕಾರಿ ಮತ್ತು ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ನೆರವು ಗ್ರಾಮೀಣ ಆರ್ಥಿಕತೆಗೆ ಸಹಾಯ ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯು ಹೊಸ ಆಹಾರ ಸಂಸ್ಕರಣಾ ಘಟಕಗಳು ಮತ್ತು ಸಂಗ್ರಹಣೆಯನ್ನು ವೇಗಗೊಳಿಸಿದೆ ಎಂದರು. ಅಮೆರಿಕವು ಭಾರತಕ್ಕೆ ಶೇ.50ರಷ್ಟು ಸುಂಕ ವಿಧಿಸಿದೆ. ಮೊದಲು ಶೇ.,25ರಷ್ಟು ವಿಧಿಸಿತ್ತು, ಆದರೆ ರಷ್ಯಾದಿಂದಿಗಿನ ತೈಲ ಒಪ್ಪಂದವನ್ನು ಮುರಿದುಕೊಳ್ಳಲು ನಿರಾಕರಿಸಿದ್ದಕ್ಕೆ ಬುಧವಾರ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕವನ್ನು ವಿಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:14 am, Thu, 7 August 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ