AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ

ಭಾರತ ತನ್ನ ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ, ಇದಕ್ಕೆ ಯಾವುದೇ ಬೆಲೆ ತೆರಲು ಸಿದ್ಧ ಎಂದು ಪ್ರತಿಪಾದಿಸಿದರು.ಅಮೆರಿಕಕ್ಕೆ ರಫ್ತು ಮಾಡುವ ಭಾರತೀಯ ಉತ್ಪನ್ನಗಳ ಮೇಲೆ ಶೇ. 50 ಸುಂಕ ವಿಧಿಸಲು ಡೊನಾಲ್ಡ್ ಟ್ರಂಪ್ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಭಾರತ-ಯುಎಸ್ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಪ್ರಧಾನಿ ಮೋದಿ ಅವರ ಈ ಬಲವಾದ ಹೇಳಿಕೆ ಬಂದಿದೆ. ಭಾರತೀಯ ಸರಕುಗಳ ಮೇಲಿನ ಸುಂಕದ ಹೆಚ್ಚಳವು ಕೃಷಿ ಉತ್ಪನ್ನಗಳನ್ನು ಒಳಗೊಂಡಿದೆ.

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Aug 07, 2025 | 11:14 AM

Share

ನವದೆಹಲಿ, ಆಗಸ್ಟ್​ 07: ಅಮೆರಿಕ(America)ದೊಂದಿಗಿನ ಸುಂಕ ಯುದ್ಧದ ನಡುವೆ, ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ರೈತ(Farmer)ರ ಪರವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. ‘‘ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ’’ ಎಂದು ಪ್ರಧಾನಿ ಮೋದಿ ಟ್ರಂಪ್​​ಗೆ ಸವಾಲೆಸೆದಿದ್ದಾರೆ. ‘‘ರೈತರ ಹಿತಾಸಕ್ತಿಗಳನ್ನು ರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆ,  ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ’’ ಎಂದರು.

ನವದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿಯ ಮೇಲಿನ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

‘‘ನಮಗೆ ರೈತರ ಹಿತಾಸಕ್ತಿಯೇ ಪ್ರಮುಖ ಆದ್ಯತೆಯಾಗಿದೆ, ಭಾರತವು ತನ್ನ ರೈತರು, ಜಾನುವಾರು ರೈತರು ಮತ್ತು ಮೀನುಗಾರ ಸಹೋದರ ಸಹೋದರಿಯರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಇದಕ್ಕಾಗಿ ನಾನು ವೈಯಕ್ತಿಕವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ ತಿಳಿದಿದೆ ಆದರೆ ನಾನು ಅದಕ್ಕೆ ಸಿದ್ಧನಿದ್ದೇನೆ’’ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ಓದಿ: ನಿಜವಾಯ್ತು ಟ್ರಂಪ್ ಬೆದರಿಕೆ; ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕ ವಿಧಿಸಿದ ಅಮೆರಿಕಾ!

ರೈತರ ಆದಾಯವನ್ನು ಹೆಚ್ಚಿಸುವುದು, ಕೃಷಿ ವೆಚ್ಚವನ್ನು ಕಡಿಮೆ ಮಾಡುವುದು, ಹೊಸ ಆದಾಯದ ಮೂಲಗಳನ್ನು ಸೃಷ್ಟಿಸುವುದು – ಈ ಗುರಿಗಳ ಮೇಲೆ ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ಸರ್ಕಾರವು ರೈತರ ಬಲವನ್ನು ದೇಶದ ಪ್ರಗತಿಯ ಆಧಾರವೆಂದು ಪರಿಗಣಿಸಿದೆ.

ಪ್ರಧಾನಿ ಮೋದಿ ಭಾಷಣ

ಆದ್ದರಿಂದ, ಕಳೆದ ವರ್ಷಗಳಲ್ಲಿ ಮಾಡಿದ ನೀತಿಗಳು ಸಹಾಯವನ್ನು ಮಾತ್ರವಲ್ಲದೆ ರೈತರಲ್ಲಿ ವಿಶ್ವಾಸವನ್ನು ಹೆಚ್ಚಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಸಮ್ಮಾನ್ ನಿಧಿಯಿಂದ ಪಡೆದ ನೆರವು ಸಣ್ಣ ರೈತರಿಗೆ ಆತ್ಮ ವಿಶ್ವಾಸವನ್ನು ನೀಡಿದೆ. ಪ್ರಧಾನಮಂತ್ರಿ ಬೆಳೆ ವಿಮಾ ಯೋಜನೆಯು ರೈತರಿಗೆ ಅಪಾಯದಿಂದ ರಕ್ಷಣೆ ನೀಡಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮೂಲಕ ನೀರಾವರಿಗೆ ಸಂಬಂಧಿಸಿದ ಸಮಸ್ಯೆಯನ್ನು ಪರಿಹರಿಸಲಾಗಿದೆ.

ಸಣ್ಣ ರೈತರ ಸಂಘಟಿತ ಶಕ್ತಿ ಹೆಚ್ಚಾಗಿದೆ. ಸಹಕಾರಿ ಮತ್ತು ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ನೆರವು ಗ್ರಾಮೀಣ ಆರ್ಥಿಕತೆಗೆ ಸಹಾಯ ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಯು ಹೊಸ ಆಹಾರ ಸಂಸ್ಕರಣಾ ಘಟಕಗಳು ಮತ್ತು ಸಂಗ್ರಹಣೆಯನ್ನು ವೇಗಗೊಳಿಸಿದೆ ಎಂದರು. ಅಮೆರಿಕವು ಭಾರತಕ್ಕೆ ಶೇ.50ರಷ್ಟು ಸುಂಕ ವಿಧಿಸಿದೆ. ಮೊದಲು ಶೇ.,25ರಷ್ಟು ವಿಧಿಸಿತ್ತು, ಆದರೆ ರಷ್ಯಾದಿಂದಿಗಿನ ತೈಲ ಒಪ್ಪಂದವನ್ನು ಮುರಿದುಕೊಳ್ಳಲು ನಿರಾಕರಿಸಿದ್ದಕ್ಕೆ ಬುಧವಾರ ಹೆಚ್ಚುವರಿಯಾಗಿ ಶೇ.25ರಷ್ಟು ಸುಂಕವನ್ನು ವಿಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:14 am, Thu, 7 August 25

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ