AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ವಾಯುಸೇನೆ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ; ಐಎಎಫ್​ ಲೆಫ್ಟಿನೆಂಟ್​ ಬಂಧನ

ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಫ್ಲೈಟ್ ಲೆಫ್ಟಿನೆಂಟ್​ ಅಮರಿಂದರ್​ ಅವರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು.ಇವರು ಚತ್ತೀಸ್​ಗಡ್​ನವರೆಂದು ಹೇಳಲಾಗಿದೆ.

ಭಾರತೀಯ ವಾಯುಸೇನೆ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ; ಐಎಎಫ್​ ಲೆಫ್ಟಿನೆಂಟ್​ ಬಂಧನ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Sep 27, 2021 | 8:49 AM

Share

ಭಾರತೀಯ ವಾಯುಸೇನೆಯ ಮಹಿಳಾ ಅಧಿಕಾರಿಯನ್ನು ಅತ್ಯಾಚಾರ ಮಾಡಿದ ಆರೋಪದಡಿ ಐಎಎಫ್​​ನ ಫ್ಲೈಟ್​ ಲೆಫ್ಟಿನೆಂಟ್​​ ಒಬ್ಬರನ್ನು ಬಂಧಿಸಲಾಗಿದ್ದು, ಭಾರತೀಯ ದಂಡಸಂಹಿತೆ ಕಾಯ್ದೆಯ ಸೆಕ್ಷನ್​ 376ರಡಿ ಪ್ರಕರಣ ದಾಖಲಿಸಲಾಗಿದೆ. ಈ ಲೆಫ್ಟಿನೆಂಟ್​ ಅಧಿಕಾರಿ ತಮಿಳುನಾಡಿನ ಕೊಯಮತ್ತೂರ್​​ನಲ್ಲಿರುವ ರೆಡ್​ಫೀಲ್ಡ್​ ಏರ್​ ಫೋರ್ಸ್​​ ಕಾಲೇಜಿನವರು. ಸದ್ಯ ಇವರನ್ನು ಉದುಮಲಪೇಟ್​ ಜೈಲಿಗೆ ಹಾಕಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಕೊಯಮತ್ತೂರ್​ ಪೊಲೀಸರು ತಿಳಿಸಿದ್ದಾರೆ.  

ಐಎಎಫ್​ ಮಹಿಳಾ ಅಧಿಕಾರಿಯ ಮೇಲೆ ಕೊಯಮತ್ತೂರ್​ ಏರ್​ಪೋರ್ಸ್​ ಆಡಳಿತಾತ್ಮಕ ಕಾಲೇಜಿನಲ್ಲಿ ಅತ್ಯಾಚಾರ ನಡೆದಿದೆ. ಎರಡು ವಾರಗಳ ಹಿಂದೆಯೇ ಕೃತ್ಯ ನಡೆದಿದ್ದು, ಅಧಿಕಾರಿ ಐಎಫ್​ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಆದರೆ ಇದುವರೆಗೂ ಅವರು ಲೆಫ್ಟಿನೆಂಟ್​ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ. ಅದಾದ ನಂತರ ಕೊಯಮತ್ತೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ ಮಹಿಳಾ ಅಧಿಕಾರಿ, ಲೆಫ್ಟಿನೆಂಟ್​​ ವಿಚಾರಣೆಯನ್ನು ಐಎಎಫ್​ ಹಿರಿಯ ಅಧಿಕಾರಿಗಳು ಮಾಡಿದ್ದಾರೆ. ಆದರೆ ನನಗೆ ಅದು ತೃಪ್ತಿ ತಂದಿಲ್ಲ ಎಂದು ಹೇಳಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳಾ ಅಧಿಕಾರಿಗೆ 29 ವರ್ಷ ವಯಸ್ಸಾಗಿದೆ. ಇವರು ಕೊಯಮತ್ತೂರಿನ ಏರ್​ಫೋರ್ಸ್​ ಕಾಲೇಜಿನ ವಸತಿ ಸೌಲಭ್ಯದಲ್ಲಿಯೇ ವಾಸವಾಗಿದ್ದರು. ಇಲ್ಲಿ ಒಟ್ಟು 30 ಅಧಿಕಾರಿಗಳು ಕಳೆದ ತಿಂಗಳಿಂದಲೂ ಇಲ್ಲಿ ತರಬೇತಿಯಲ್ಲಿದ್ದಾರೆ.  ತಮ್ಮ ಮೇಲೆ ಅತ್ಯಾಚಾರ ನಡೆದ ಘಟನೆ ಬಗ್ಗೆ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ನಾನು ಸೆಪ್ಟೆಂಬರ್​ 10ರಂದು ಕ್ರೀಡೆಯೊಂದರಲ್ಲಿ ಭಾಗವಹಿಸಿದ್ದಾಗ ಬಿದ್ದು ಏಟಾಗಿತ್ತು. ನಂತರ ನಾನು ಔಷಧ ತೆಗೆದುಕೊಂಡು ಹೋಗಿ ಕೋಣೆಯಲ್ಲಿ ಮಲಗಿದ್ದೆ. ಆದರೆ ಮಧ್ಯ ರಾತ್ರಿ ಎಚ್ಚರವಾದಾಗ ನನ್ನ ಮೇಲೆ ಅತ್ಯಾಚಾರ ಆಗಿದ್ದು ಗೊತ್ತಾಯ್ತು ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿ ಕೊಯಮತ್ತೂರು ಪೊಲೀಸ್ ಆಯುಕ್ತರ ಕಚೇರಗೆ ನೇರವಾಗಿ ದೂರು ನೀಡಿದ್ದಾರೆ. ಅದಾದ ಬಳಿಕ ಪೊಲೀಸ್​ ಆಯುಕ್ತರು ಗಾಂಧಿಪುರಂನಲ್ಲಿರುವ ಮಹಿಳಾ ಪೊಲೀಸ್ ಠಾಣೆಗೆ ನಿರ್ದೇಶನ ನೀಡಿ, ತನಿಖೆ ನಡೆಸಲು ಹೇಳಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಫ್ಲೈಟ್ ಲೆಫ್ಟಿನೆಂಟ್​ ಅಮರಿಂದರ್​ ಅವರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು.ಇವರು ಚತ್ತೀಸ್​ಗಡ್​ನವರೆಂದು ಹೇಳಲಾಗಿದೆ. ಇನ್ನು ಲೆಫ್ಟಿನೆಂಟ್​ ವಿರುದ್ಧ ತನಿಖೆ ನಡೆಸಲು ಕೊಯಮತ್ತೂರ್​ ಪೊಲೀಸರಿಗೆ ಯಾವುದೇ ಅಧಿಕಾರ ಇಲ್ಲ ಎಂದು ಅಮರಿಂದರ್ ಪರ ವಕೀಲರು ನ್ಯಾಯಾಧೀಶರಿಗೆ ವರದಿ ಸಲ್ಲಿಸಿದ್ದಾರೆ. ಇನ್ನು ವಿಚಾರಣೆ ರಕ್ಷಣಾ ನ್ಯಾಯಾಲಯದಲ್ಲೇ ನಡೆಯಬೇಕು ಎಂದೂ ಹೇಳಿದ್ದಾರೆ. ಇದಕ್ಕೆ ಪ್ರತಿ ಅಫಿಡಿವಿಟ್​ ಸಲ್ಲಿಸಲು ಕಾಲಾವಕಾಶ ಕೊಡುವಂತೆ ಕೊಯಮತ್ತೂರು ಪೊಲೀಸರು ನ್ಯಾಯಾಧೀಶರ ಬಳಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Redmi 9 Activ: ಸದ್ದಿಲ್ಲದೆ ಹೊಸ ಸ್ಮಾರ್ಟ್​ಫೋನ್ ರಿಲೀಸ್ ಮಾಡಿ ಮಾರಾಟ ಕೂಡ ಶುರು ಮಾಡಿದ ರೆಡ್ಮಿ

ಆರ್​ಎಸ್​ಎಸ್​ನಲ್ಲಿ ಯಾರು ದೇಶ ಭಕ್ತರಿಲ್ಲ, ದೇಶಕ್ಕಾಗಿ ಒಬ್ಬರು ಸತ್ತಿಲ್ಲ; ಬಿಜೆಪಿಯವರೇ ತಾಲಿಬಾನಿಗಳು ಎಂದ ಸಿದ್ದರಾಮಯ್ಯ

Published On - 2:14 pm, Sun, 26 September 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?