AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​​ನಿಂದ ಭಾರತೀಯರ ಸ್ಥಳಾಂತರಕ್ಕೆ ಪಾಕಿಸ್ತಾನ ವಾಯುಮಾರ್ಗ ಬಳಕೆ ಮಾಡಿಕೊಳ್ಳದ ವಾಯುಸೇನೆ

ಈ ಹಿಂದೆ ಲಡಾಖ್​​ನಲ್ಲಿ ಚೀನಾದೊಂದಿಗೆ ಸಂಘರ್ಷ ಹೆಚ್ಚಾಗಿದ್ದಾಗ ಅಲ್ಲಿಗೆ ಯುದ್ಧ ಟ್ಯಾಂಕ್​​ಗಳನ್ನು ಸಾಗಿಸಿದ್ದು ಇದೇ ಸಿ-17 ಗ್ಲೋಬ್​ ಮಾಸ್ಟರ್​ ಏರ್​ಕ್ರಾಫ್ಟ್​. ಅಷ್ಟೇ ಅಲ್ಲ, ಕೊವಿಡ್​ 19 ಎರಡನೇ ಅಲೆಯಲ್ಲಿ ದೇಶದಲ್ಲಿ ಆಕ್ಸಿಜನ್​ ಕೊರತೆಯಾದಾಗ ವಿವಿಧ ದೇಶಗಳಿಂದ ಆಕ್ಸಿಜನ್​ ಟ್ಯಾಂಕರ್​ ಹೊತ್ತು ತಂದಿದೆ.

ಉಕ್ರೇನ್​​ನಿಂದ ಭಾರತೀಯರ ಸ್ಥಳಾಂತರಕ್ಕೆ ಪಾಕಿಸ್ತಾನ ವಾಯುಮಾರ್ಗ  ಬಳಕೆ ಮಾಡಿಕೊಳ್ಳದ ವಾಯುಸೇನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Mar 03, 2022 | 10:18 AM

Share

ಉಕ್ರೇನ್​ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರ ಮಾಡುತ್ತಿರುವ ಭಾರತೀಯ ವಾಯುಪಡೆ (Air Force) ತನ್ನ ವಿಮಾನ ಸಂಚಾರಕ್ಕೆ ಪಾಕಿಸ್ತಾನ ವಾಯುಮಾರ್ಗವನ್ನು ಬಳಸುತ್ತಿಲ್ಲ ಎಂದು ಹೇಳಲಾಗಿದೆ. ಐಎಎಫ್​​ನ ಸಿ-17 ಗ್ಲೋಬ್​ಮಾಸ್ಟರ್​ ಟ್ರಾನ್ಸ್​ಪೋರ್ಟ್​ನ ನಾಲ್ಕು ವಿಮಾನಗಳು ಯುದ್ಧ ಪೀಡಿತ ಉಕ್ರೇನ್​​ನಿಂದ  (Ukraine)ಭಾರತೀಯರನ್ನು ವಾಪಸ್​ ಕರೆತರುವ ಕೆಲಸ ಮಾಡುತ್ತಿವೆ. ಈಗಾಗಲೇ ಏರ್​​ಫೋರ್ಸ್​ ವಿಮಾನಗಳು 800 ಭಾರತೀಯರನ್ನು ಕರೆತಂದಿವೆ. ಆದರೆ ಇವು ಪಾಕಿಸ್ತಾನದ ಏರ್​ಸ್ಪೇಸ್​ ಬಳಸಿಕೊಳ್ಳುತ್ತಿಲ್ಲ. ಇಂಥ ಸಂದರ್ಭದಲ್ಲಿ ನಾವ್ಯಾಕೆ ಪಾಕಿಸ್ತಾನದಿಂದ ಸಹಾಯ ಕೇಳಬೇಕು? ಆ ದೇಶದಿಂದ ಮಿಲಿಟರಿ ಸಹಕಾರವನ್ನು ಕೇಳಬೇಕು? ಪಾಕಿಸ್ತಾನ ವಾಯುಮಾರ್ಗ ಬಳಸಿಕೊಳ್ಳದೆ ಇದ್ದರೆ 25-30 ನಿಮಿಷ ಹೆಚ್ಚು ಸಮಯ ಬೇಕಾಗಬಹುದು ಹೊರತು ಇನ್ನೇನೂ ವ್ಯತ್ಯಾಸ ಆಗುವುದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ಉಕ್ರೇನ್​​ನಲ್ಲಿ ಪರಿಸ್ಥತಿ ಹದಗೆಟ್ಟಿದೆ. ಭಾರತೀಯರು ಸೇರಿ ಹಲವು ದೇಶಗಳ ಪ್ರಜೆಗಳನ್ನು ಬಂಕರ್​​ನಲ್ಲಿ, ಹಾಸ್ಟೆಲ್​ನ ಬೇಸ್​​ಮೆಂಟ್​ಗಳಲ್ಲಿ ಅವಿತಿಟ್ಟುಕೊಂಡು ಜೀವ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಅಲ್ಲಿಂದ ವಾಪಸ್​ ಕರೆತರಲು ಕೇಂದ್ರ ಸರ್ಕಾರ ಆಪರೇಶನ್​ ಗಂಗಾ ಎಂಬ ಕಾರ್ಯಾಚರಣೆ ನಡೆಸುತ್ತಿದೆ. ಇನ್ನಿತರ ಕಮರ್ಷಿಯಲ್​ ವಿಮಾನಗಳ ಜತೆ ಭಾರತೀಯ ವಾಯುಪಡೆಯೂ ಕೈಜೋಡಿಸಿದೆ. ಈ ಹಿಂದೆ ಲಡಾಖ್​​ನಲ್ಲಿ ಚೀನಾದೊಂದಿಗೆ ಸಂಘರ್ಷ ಹೆಚ್ಚಾಗಿದ್ದಾಗ ಅಲ್ಲಿಗೆ ಯುದ್ಧ ಟ್ಯಾಂಕ್​​ಗಳನ್ನು ಸಾಗಿಸಿದ್ದು ಇದೇ ಸಿ-17 ಗ್ಲೋಬ್​ ಮಾಸ್ಟರ್​ ಏರ್​ಕ್ರಾಫ್ಟ್​. ಅಷ್ಟೇ ಅಲ್ಲ, ಕೊವಿಡ್​ 19 ಎರಡನೇ ಅಲೆಯಲ್ಲಿ ದೇಶದಲ್ಲಿ ಆಕ್ಸಿಜನ್​ ಕೊರತೆಯಾದಾಗ ವಿವಿಧ ದೇಶಗಳಿಂದ ಆಕ್ಸಿಜನ್​ ಟ್ಯಾಂಕರ್​ ಹೊತ್ತು ತಂದಿದೆ. ಇತ್ತೀಚೆಗೆ ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡಾಗ ಅಲ್ಲಿರುವವ ಭಾರತೀಯರು, ಅಲ್ಪಸಂಖ್ಯಾತರನ್ನೂ ಹೊತ್ತು ತಂದಿದ್ದು ಇದೇ ವಿಮಾನವಾಗಿದೆ. ಸುಮಾರು 80 ಟನ್​​ಗಳಷ್ಟು ತೂಕವನ್ನು ಹೊರಬಲ್ಲ ಸಾಮರ್ಥ್ಯ ಇರುವ ಸಿ-17 ಗ್ಲೋಬ್​ ಮಾಸ್ಟರ್​ ಸದ್ಯ ಉಕ್ರೇನ್​ನಿಂದ ಭಾರತೀಯರನ್ನು ಏರ್​​ಲಿಫ್ಟ್ ಮಾಡಲು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ರಷ್ಯಾ ಅಧ್ಯಕ್ಷ ಪುಟಿನ್​ ಜತೆ ಫೋನ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ; ಭಾರತೀಯರ ಸ್ಥಳಾಂತರದ ಬಗ್ಗೆ ಚರ್ಚೆ

Published On - 9:57 am, Thu, 3 March 22

Follow Us
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ಜಲ ವಿವಾದ: ಮಂಡ್ಯದ ಕೆಆರ್​​ಎಸ್​​ ಬಳಿ ಬಿಜೆಪಿಗರ ಪ್ರತಿಭಟನೆ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕಾವೇರಿ ನೀರು ಹಂಚಿಕೆ ವಿವಾದ: CWMA ನಿರ್ಧಾರಕ್ಕೆ ಕುಮಾರಸ್ವಾಮಿ ಆಕ್ರೋಶ
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡೋ ಆರೋಪಕ್ಕೆ ಏನಂದ್ರು ಸಚಿವ?
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ