AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿ ಗ್ಯಾರೇಜ್‌ನಲ್ಲಿ ಹೈದರಾಬಾದ್‌ ವಿದ್ಯಾರ್ಥಿನಿ ರೇಪ್ ಅಂಡ್ ಮರ್ಡರ್

ಹೈದರಾಬಾದ್: ಅಮೆರಿಕದಲ್ಲಿ ಇಲಿನಾಯ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನ ದಾರುಣವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ರೂತ್ ಜಾರ್ಜ್ ಹತ್ಯೆಯಾದವರು. ಇವರು ಹೈದರಾಬಾದ್‌ ಮೂಲದ ನಿವಾಸಿ. ಕಳೆದ ಶನಿವಾರ ಮಧ್ಯರಾತ್ರಿ ನಡೆದಿರುವ ಈ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಯೂನಿವರ್ಸಿಟಿಯ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ರೂತ್ ಜಾರ್ಜ್ ಶವ ಪತ್ತೆಯಾಗಿದೆ. ಡೊನಾಲ್ಡ್ ಡಿ ತುರಮಾನ್ ವಿರುದ್ಧ ಅತ್ಯಾಚಾರವೆಸಗಿ ಬರ್ಬರ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಇನ್ನು ಮೃತ ರೂತ್ ಜಾರ್ಜ್ ಅಮೆರಿಕದ ಯೂನಿವರ್ಸಿಟಿ ಆಫ್ ಇಲಿನಾಯ್​ನಲ್ಲಿ ಮಾನವ ದೇಹಾಂಗಗಳ ಚಲನವಲನ […]

ವಿವಿ ಗ್ಯಾರೇಜ್‌ನಲ್ಲಿ ಹೈದರಾಬಾದ್‌ ವಿದ್ಯಾರ್ಥಿನಿ ರೇಪ್ ಅಂಡ್ ಮರ್ಡರ್
ಸಾಧು ಶ್ರೀನಾಥ್​
|

Updated on: Nov 26, 2019 | 2:05 PM

Share

ಹೈದರಾಬಾದ್: ಅಮೆರಿಕದಲ್ಲಿ ಇಲಿನಾಯ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನ ದಾರುಣವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ರೂತ್ ಜಾರ್ಜ್ ಹತ್ಯೆಯಾದವರು. ಇವರು ಹೈದರಾಬಾದ್‌ ಮೂಲದ ನಿವಾಸಿ. ಕಳೆದ ಶನಿವಾರ ಮಧ್ಯರಾತ್ರಿ ನಡೆದಿರುವ ಈ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಯೂನಿವರ್ಸಿಟಿಯ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ರೂತ್ ಜಾರ್ಜ್ ಶವ ಪತ್ತೆಯಾಗಿದೆ. ಡೊನಾಲ್ಡ್ ಡಿ ತುರಮಾನ್ ವಿರುದ್ಧ ಅತ್ಯಾಚಾರವೆಸಗಿ ಬರ್ಬರ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.

ಇನ್ನು ಮೃತ ರೂತ್ ಜಾರ್ಜ್ ಅಮೆರಿಕದ ಯೂನಿವರ್ಸಿಟಿ ಆಫ್ ಇಲಿನಾಯ್​ನಲ್ಲಿ ಮಾನವ ದೇಹಾಂಗಗಳ ಚಲನವಲನ ಬಗ್ಗೆ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರು. ಜೊತೆಗೆ ಕಾಲೇಜಿನಲ್ಲಿ ಜಿಮ್ನಾಸ್ಟಿಕ್ ಪಟು ಆಗಿದ್ದರು. ಕೃತ್ಯ ನಡೆದ ದಿನದಿಂದ ನಾಪತ್ತೆಯಾಗಿದ್ದರು. ಮಗಳ ಸಂಪರ್ಕ ಸಿಗದ ಕುಟುಂಬಸ್ಥರು ಪೊಲೀಸರಿಗೆ ಕಂಪ್ಲೆಂಟ್ ನೀಡಿದ್ದಾರೆ. ಮಾಹಿತಿ ಸಂಗ್ರಹಿಸಲು ಮುಂದಾದ ಪೊಲೀಸರು ಸಂತ್ರಸ್ತೆಯ ಮೊಬೈಲ್ ಟ್ರೇಸ್ ಮಾಡುವ ಮೂಲಕ ಯೂನಿವರ್ಸಿಟಿಯ ಪಾರ್ಕಿಂಗ್ ಗ್ಯಾರೇಜ್‌ನಲ್ಲಿ ರೂತ್ ಜಾರ್ಜ್ ಶವ ಪತ್ತೆ ಹಚ್ಚಿದ್ದಾರೆ. ನಂತರ ಸಿಸಿಟಿವಿ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ, ಬಂಧಿಸಲಾಗಿದೆ. ಬಂಧನದ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಹೇಳಿದ್ದಾನೆ.

ಆರೋಪಿ ಹಿನ್ನೆಲೆ: ಆರೋಪಿ ಡೊನಾಲ್ಡ್ ಡಿ ತುರಮಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೂ ಅಲ್ಲ ಮತ್ತು ಸಂತ್ರಸ್ತೆಗೆ ಪರಿಚಿತನೂ ಅಲ್ಲ. ಈತ 2015ರಲ್ಲಿ ದರೋಡೆ ಪ್ರಕರಣದಲ್ಲಿ 6 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದ. ಈತ ಪೆರೋಲ್ ಮೇಲೆ ಹೊರಗೆ ಬಂದಿದ್ದ. ಈ ವೇಳೆ ಈ ಕೃತ್ಯ ಎಸಗಿದ್ದಾನೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ