ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ. ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ […]

ಉಗ್ರರ ನೆಲೆಗಳ ಮೇಲೆ ಸೇನೆ ದಾಳಿ: 11 ಪಾಕ್ ಸೈನಿಕರು, 22 ಉಗ್ರರು ಮಟಾಶ್
ಸಾಧು ಶ್ರೀನಾಥ್​

Updated on: Oct 20, 2019 | 4:51 PM

ಶ್ರೀನಗರ: ಉಗ್ರರನ್ನ ಛೂ ಬಿಡ್ತಿದ್ದ ಪಾಕ್​ನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಪಿಒಕೆಯ ನೀಲಂ ಕಣಿವೆಯಲ್ಲಿ ಆರ್ಟಿಲರಿ ಗನ್ ಮೂಲಕ ಲಷ್ಕರ್ ಇ ತೋಯ್ಬಾದ ನಾಲ್ಕು ಟೆರರ್ ಲಾಂಚ್ ಪ್ಯಾಡ್​ಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದೆ.

ಕಾಶ್ಮೀರದ ಕುಪ್ವಾರಾದಲ್ಲಿರೋ ತಂಗ್ದರ್ ಸೆಕ್ಟರ್​​ನಲ್ಲಿ ಗಡಿ ನುಸುಳಲು ಯತ್ನಿಸ್ತಿದ್ದ ಉಗ್ರರನ್ನ ಭಾರತೀಯ ಸೇನೆಯು ಹಿಮ್ಮೆಟ್ಟಿಸಿ, ಅಡಗುದಾಣಗಳನ್ನ ಧ್ವಂಸಗೊಳಿಸಿದೆ. ಭಾರತೀಯ ಸೇನೆಯ ದಾಳಿಯಲ್ಲಿ 11 ಪಾಕ್ ಸೈನಿಕರು, 22 ಮಂದಿ ಉಗ್ರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಾಶ್ಮೀರದ ತಗಂಧರ್ ಸೆಕ್ಟರ್​ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಟೆರರ್​ ಲಾಂಚ್​ಗಳನ್ನು ಉಡೀಸ್ ಮಾಡಿದೆ.

Published On - 4:50 pm, Sun, 20 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us