AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Helicopter Crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನ

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.

Army Helicopter Crash: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಬಳಿ ಪತನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Mar 16, 2023 | 2:51 PM

Share

ಭಾರತೀಯ ಸೇನೆಯ (Indian Army) ಚೀತಾ ಹೆಲಿಕಾಪ್ಟರ್ (Cheetah helicopter) ಗುರುವಾರ ಅರುಣಾಚಲ ಪ್ರದೇಶದ (Arunachal Pradesh) ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆ 09:15ರ ಸುಮಾರಿಗೆ ಅರುಣಾಚಲ ಪ್ರದೇಶದ ಬೊಮ್‌ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಬಳಿ ಅಪಘಾತ ಸಂಭವಿಸಿದ್ದು ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು  ಗುವಾಹಟಿ ಡಿಫೆನ್ಸ್ ಪಿಆರ್​​ಒ  ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಈ ದುರ್ಘಟನೆಯಲ್ಲಿ  ಒಬ್ಬ ಲೆಫ್ಟಿನೆಂಟ್ ಕರ್ನಲ್  ಮೇಜರ್  ಕಾಣೆಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ವಾಯುಪಡೆ  ಮತ್ತು ಸೇನೆಯಲ್ಲಿರುವ ಚೇತಕ್ ಮತ್ತು ಚೀತಾ ಹೆಲಿಕಾಪ್ಟರ್‌ಗಳು ಅತಿ ಎತ್ತರದ ಪ್ರದೇಶಗಳಲ್ಲಿ ಪಡೆಗಳ ಜೀವಸೆಲೆಯಾಗಿ ರೂಪುಗೊಂಡಿದ್ದರೂ ಸಹ, ಅವುಗಳಿಗೆ ಬದಲಿ ಅಗತ್ಯವಿದೆ. ಪ್ರಸ್ತುತ ಸುಮಾರು 200 ಚೀತಾ ಮತ್ತು ಚೇತಕ್ ಹೆಲಿಕಾಪ್ಟರ್‌ಗಳು ಸೇವೆಯಲ್ಲಿವೆ ಕಳೆದ ತಿಂಗಳು, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಸೇನೆಯು ತನ್ನ ಒಟ್ಟಾರೆ ಯುದ್ಧ ವಿಮಾನಯಾನ ಪ್ರೊಫೈಲ್ ಅನ್ನು ಹೆಚ್ಚಿಸುವ ಭಾಗವಾಗಿ ಭವಿಷ್ಯದಲ್ಲಿ ಸುಮಾರು 95 ಲಘು ಯುದ್ಧ ಹೆಲಿಕಾಪ್ಟರ್‌ಗಳು ಮತ್ತು 110 ಲೈಟ್ ಯುಟಿಲಿಟಿ ಹೆಲಿಕಾಪ್ಟರ್‌ಗಳ (LUH) ಸೇರ್ಪಡೆಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Thu, 16 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!