AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ

Ranjit Sagar Dam Helicopter Crash: ಪತಾನ್​ಕೋಟ್​ ಬಳಿ ಇರುವ ರಂಜಿತ್ ಸಾಗರ್ ಡ್ಯಾಂನಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಪಂಜಾಬ್​ನ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 03, 2021 | 12:47 PM

Share

ಪತಾನ್​​ಕೋಟ್: ಪಂಜಾಬ್​ ರಾಜ್ಯದ ಪತಾನ್​ಕೋಟ್ ಬಳಿ ಇರುವ ರಂಜಿತ್ ಸಾಗರ್ ಡ್ಯಾಂನಲ್ಲಿ (Ranjit Sagar Dam) ಭಾರತೀಯ ಸೇನೆಯ (Indian Army) ಹೆಲಿಕಾಪ್ಟರ್ ಪತನವಾಗಿದೆ. ರಂಜಿತ್ ಸಾಗರ್ ಡ್ಯಾಂನ ನೀರಿನೊಳಗೆ ಇಂದು ಬೆಳಗ್ಗೆ ಹೆಲಿಕಾಪ್ಟರ್ ಬಿದ್ದಿದ್ದು, ಈ ಬಗ್ಗೆ ಇಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಂಜಾಬ್​ನ ಪತಾನ್​ಕೋಟ್​ನಿಂದ (Pathankot) 30 ಕಿ.ಮೀ. ದೂರದಲ್ಲಿ ಈ ಡ್ಯಾಂ ಇದೆ. ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಾಣಾಪಾಯದ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಜಮ್ಮು ಕಾಶ್ಮೀರ ಮತ್ತು ಪಂಜಾಬ್ ರಾಜ್ಯಗಳ ಗಡಿಯಲ್ಲಿರುವ ರಂಜಿತ್ ಸಾಗರ್ ಡ್ಯಾಂ ಜಮ್ಮು ಕಾಶ್ಮೀರದ ಕಥುವಾ ಹಾಗೂ ಪಂಜಾಬ್​ನ ಪತಾನ್​ಕೋಟ್​ ಬಳಿ ಇದೆ. ಇಲ್ಲಿರುವ ಕೆರೆಯೊಳಗೆ ಹೆಲಿಕಾಪ್ಟರ್ ಪತನವಾಗಿದೆ. ಇಂದು ಬೆಳಗ್ಗೆ 10.43ಕ್ಕೆ ಹೆಲಿಕಾಪ್ಟರ್ ಪತನವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆ ಹೆಲಿಕಾಪ್ಟರ್ ಒಳಗೆ ಎಷ್ಟು ಜನರಿದ್ದರು, ಅವರ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಭಾರತೀಯ ಸೇನೆಯ 254 ಎಎ (254 AA) ಹೆಲಿಕಾಪ್ಟರ್ ಪತನವಾಗಿದ್ದು, ಮೂಲಗಳ ಪ್ರಕಾರ ಪೈಲಟ್ ಮತ್ತು ಸಹ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎನ್​ಡಿಆರ್​ಎಫ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ….

ಇದನ್ನೂ ಓದಿ: Aircraft Crash: ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಟ್ರೈನಿ ಪೈಲಟ್ ಪ್ರಾಣಾಪಾಯದಿಂದ ಪಾರು

ಗಡಿಯಿಂದ ಹಿಂದೆ ಸರಿಯಲು ಅಸ್ಸಾಂ- ನಾಗಾಲ್ಯಾಂಡ್ ಒಪ್ಪಿಗೆ; ಇದು ಐತಿಹಾಸಿಕ ನಿರ್ಧಾರ ಎಂದ ಸಿಎಂ ಹಿಮಾಂತ ಬಿಸ್ವಾ

(Indian Army helicopter crashes near Ranjit Sagar Dam in Punjabs Pathankot Rescue Operation Underway)

Published On - 12:25 pm, Tue, 3 August 21

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್