AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ

Ranjit Sagar Dam Helicopter Crash: ಪತಾನ್​ಕೋಟ್​ ಬಳಿ ಇರುವ ರಂಜಿತ್ ಸಾಗರ್ ಡ್ಯಾಂನಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಪಂಜಾಬ್​ನ ರಂಜಿತ್ ಸಾಗರ್ ಡ್ಯಾಂ ಬಳಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 03, 2021 | 12:47 PM

Share

ಪತಾನ್​​ಕೋಟ್: ಪಂಜಾಬ್​ ರಾಜ್ಯದ ಪತಾನ್​ಕೋಟ್ ಬಳಿ ಇರುವ ರಂಜಿತ್ ಸಾಗರ್ ಡ್ಯಾಂನಲ್ಲಿ (Ranjit Sagar Dam) ಭಾರತೀಯ ಸೇನೆಯ (Indian Army) ಹೆಲಿಕಾಪ್ಟರ್ ಪತನವಾಗಿದೆ. ರಂಜಿತ್ ಸಾಗರ್ ಡ್ಯಾಂನ ನೀರಿನೊಳಗೆ ಇಂದು ಬೆಳಗ್ಗೆ ಹೆಲಿಕಾಪ್ಟರ್ ಬಿದ್ದಿದ್ದು, ಈ ಬಗ್ಗೆ ಇಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಂಜಾಬ್​ನ ಪತಾನ್​ಕೋಟ್​ನಿಂದ (Pathankot) 30 ಕಿ.ಮೀ. ದೂರದಲ್ಲಿ ಈ ಡ್ಯಾಂ ಇದೆ. ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪ್ರಾಣಾಪಾಯದ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಜಮ್ಮು ಕಾಶ್ಮೀರ ಮತ್ತು ಪಂಜಾಬ್ ರಾಜ್ಯಗಳ ಗಡಿಯಲ್ಲಿರುವ ರಂಜಿತ್ ಸಾಗರ್ ಡ್ಯಾಂ ಜಮ್ಮು ಕಾಶ್ಮೀರದ ಕಥುವಾ ಹಾಗೂ ಪಂಜಾಬ್​ನ ಪತಾನ್​ಕೋಟ್​ ಬಳಿ ಇದೆ. ಇಲ್ಲಿರುವ ಕೆರೆಯೊಳಗೆ ಹೆಲಿಕಾಪ್ಟರ್ ಪತನವಾಗಿದೆ. ಇಂದು ಬೆಳಗ್ಗೆ 10.43ಕ್ಕೆ ಹೆಲಿಕಾಪ್ಟರ್ ಪತನವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆ ಹೆಲಿಕಾಪ್ಟರ್ ಒಳಗೆ ಎಷ್ಟು ಜನರಿದ್ದರು, ಅವರ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಭಾರತೀಯ ಸೇನೆಯ 254 ಎಎ (254 AA) ಹೆಲಿಕಾಪ್ಟರ್ ಪತನವಾಗಿದ್ದು, ಮೂಲಗಳ ಪ್ರಕಾರ ಪೈಲಟ್ ಮತ್ತು ಸಹ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎನ್​ಡಿಆರ್​ಎಫ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ….

ಇದನ್ನೂ ಓದಿ: Aircraft Crash: ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಟ್ರೈನಿ ಪೈಲಟ್ ಪ್ರಾಣಾಪಾಯದಿಂದ ಪಾರು

ಗಡಿಯಿಂದ ಹಿಂದೆ ಸರಿಯಲು ಅಸ್ಸಾಂ- ನಾಗಾಲ್ಯಾಂಡ್ ಒಪ್ಪಿಗೆ; ಇದು ಐತಿಹಾಸಿಕ ನಿರ್ಧಾರ ಎಂದ ಸಿಎಂ ಹಿಮಾಂತ ಬಿಸ್ವಾ

(Indian Army helicopter crashes near Ranjit Sagar Dam in Punjabs Pathankot Rescue Operation Underway)

Published On - 12:25 pm, Tue, 3 August 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ