AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಗ್ನಿವೀರ್ ನೇಮಕಾತಿ ಯೋಜನೆಗೆ ಅಧಿಸೂಚನೆ ಹೊರಡಿಸಿದ ಸೇನೆ, ಜುಲೈನಲ್ಲಿ ನೋಂದಣಿ ಪ್ರಾರಂಭ

ಭಾರತೀಯ ಸೇನೆಯು ಬಿಡುಗಡೆ ಮಾಡಿದ ಅಧಿಸೂಚನೆಯು ಸೇವಾ ನಿಯಮಗಳು ಮತ್ತು ಷರತ್ತುಗಳು, ಅರ್ಹತೆ, ಬಿಡುಗಡೆ ಮತ್ತು ಅಗ್ನಿವೀರ್ ಯೋಜನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಯನ್ನು ವಿವರಸಿದೆ.

ಅಗ್ನಿವೀರ್ ನೇಮಕಾತಿ ಯೋಜನೆಗೆ ಅಧಿಸೂಚನೆ ಹೊರಡಿಸಿದ ಸೇನೆ, ಜುಲೈನಲ್ಲಿ ನೋಂದಣಿ ಪ್ರಾರಂಭ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 20, 2022 | 3:32 PM

Share

ದೆಹಲಿ: ಅಗ್ನಿಪಥ್ ನೇಮಕಾತಿ (Agnipath) ಯೋಜನೆಗಳ ಅಡಿಯಲ್ಲಿ ‘ಅಗ್ನಿವೀರರ’ ನೇಮಕಾತಿಗೆ ಭಾರತೀಯ ಸೇನೆಗೆ (Indian Army )ಸೋಮವಾರ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಈ ಅಧಿಸೂಚನೆ ಹೊರಡಿಸಲಾಗಿದೆ. ಅಗ್ನಿವೀರ್ (Agniveer) ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟೆಕ್ನಿಕಲ್ (ವಿಮಾನಯಾನ/ಮದ್ದುಗುಂಡು ಪರೀಕ್ಷಕ), ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‌ಮ್ಯಾನ್ (10 ನೇ ಪಾಸ್) ಮತ್ತು ಅಗ್ನಿವೀರ್ ಟ್ರೇಡ್ಸ್‌ಮ್ಯಾನ್‌ (ಎಆರ್ ಒ ರ್ಯಾಲಿ ವೇಳಾಪಟ್ಟಿಯ ಪ್ರಕಾರ 8 ನೇ ಪಾಸ್) ನೋಂದಣಿಗಳನ್ನು ಜುಲೈನಿಂದ ಆಯಾ ಸೇನಾ ನೇಮಕಾತಿ ಕಚೇರಿಗಳಲ್ಲಿ (ARO) ಆರಂಭವಾಗಲಿದೆ. ಭಾರತೀಯ ಸೇನೆಯು ಬಿಡುಗಡೆ ಮಾಡಿದ ಅಧಿಸೂಚನೆಯು ಸೇವಾ ನಿಯಮಗಳು ಮತ್ತು ಷರತ್ತುಗಳು, ಅರ್ಹತೆ, ಬಿಡುಗಡೆ ಮತ್ತು ಅಗ್ನಿವೀರ್ ಯೋಜನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಯನ್ನು ವಿವರಸಿದೆ. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ತರಬೇತಿ ಅವಧಿ ಸೇರಿದಂತೆ ನಾಲ್ಕು ವರ್ಷಗಳ ಅವಧಿಯ ಸೇವೆಗಾಗಿ ಸೇನಾ ಕಾಯಿದೆ 1950 ರ ಅಡಿಯಲ್ಲಿ ದಾಖಲಾಗುತ್ತಾರೆ. ಅಗ್ನಿವೀರರು ಭೂಸೇನೆ, ನೌಕಾಪಡೆಅಥವಾ ವಾಯುಸೇನೆ ಮೂಲಕ ಆದೇಶಿಸಿದಲ್ಲೆಲ್ಲಾ ಹೋಗುವುದು ಕಡ್ಡಾಯ. ಅಗ್ನಿವೀರರು ಯಾವುದೇ ರೀತಿಯ ಪಿಂಚಣಿ ಅಥವಾ ಗ್ರಾಚ್ಯುಟಿಗೆ ಅರ್ಹರಾಗಿರುವುದಿಲ್ಲ.

ಅಗ್ನಿವೀರರ ಸೇವೆಯು ದಾಖಲಾತಿ ದಿನಾಂಕದಿಂದ ಪ್ರಾರಂಭವಾಗುತ್ತದೆ. ಅವರು ಸೈನ್ಯದಲ್ಲಿ ವಿಭಿನ್ನ ಶ್ರೇಣಿಯಲ್ಲಿರಲಿದ್ದು ಇದು ಅಸ್ತಿತ್ವದಲ್ಲಿರುವ ಇತರ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ.  ಕಾಲಕಾಲಕ್ಕೆ ಭಾರತ ಸರ್ಕಾರ ಹೊರಡಿಸಿದ ಆದೇಶಗಳು ಮತ್ತು ಸೂಚನೆಗಳಿಂದ ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ರಜೆ, ಸಮವಸ್ತ್ರ, ವೇತನ ಮತ್ತು ಭತ್ಯೆಗಳು ನಿಯಂತ್ರಿಸಲ್ಪಡುತ್ತವೆ ಎಂದು ಸೇನೆ ಹೇಳಿದೆ.

ಸಾಂಸ್ಥಿಕ ಹಿತಾಸಕ್ತಿಯಲ್ಲಿ ಯಾವುದೇ ಕರ್ತವ್ಯವನ್ನು ನಿಯೋಜಿಸಲು ‘ಅಗ್ನಿವೀರರು’ ಹೊಣೆಗಾರರಾಗಿರುತ್ತಾರೆ. ಈ ಯೋಜನೆಯಡಿ ದಾಖಲಾದ ಸಿಬ್ಬಂದಿ ಆದೇಶಗಳ ಪ್ರಕಾರ ದೈಹಿಕ/ಲಿಖಿತ/ಕ್ಷೇತ್ರ ಪರೀಕ್ಷೆಗಳೊಂದಿಗೆ ನಿಯತಕಾಲಿಕವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕಾಗುತ್ತದೆ. ಹೀಗೆ ಪ್ರದರ್ಶಿಸಿದ ಕಾರ್ಯಕ್ಷಮತೆಯನ್ನು ರೆಗ್ಯುಲರ್ ಕೇಡರ್‌ಗೆ ದಾಖಲಾತಿಗಾಗಿ ಪರಿಗಣಿಸಲಾಗುತ್ತದೆ. ಅಗ್ನಿವೀರರನ್ನು ಯಾವುದೇ ರೆಜಿಮೆಂಟ್/ಯುನಿಟ್‌ಗೆ ಪೋಸ್ಟ್ ಮಾಡಬಹುದು ಮತ್ತು ಸಾಂಸ್ಥಿಕ ಆಸಕ್ತಿ ಪ್ರಕಾರ ವರ್ಗಾವಣೆ ಮಾಡಬಹುದು.

ಇದನ್ನೂ ಓದಿ
Image
ಇದೇ ಮೊದಲ ಬಾರಿ ಸರ್ಕಾರದ ನೀತಿ ನಿರ್ಧಾರ ಸಮರ್ಥಿಸಲು ಸೇವಾ ಮುಖ್ಯಸ್ಥರು ಮುಂದಾಗಿದ್ದಾರೆ: ಅಗ್ನಿಪಥ್​​ ಬಗ್ಗೆ ಖರ್ಗೆ ವಾಗ್ದಾಳಿ
Image
Agnipath Protest: ಅಗ್ನಿಪಥ್ ಯೋಜನೆಯಡಿ ನೇಮಕಗೊಳ್ಳುವ ಅಗ್ನಿವೀರರಿಗೆ ಸ್ಪೆಷಲ್ ಆಫರ್ ನೀಡಿದ ಆನಂದ್ ಮಹೀಂದ್ರಾ
Image
ಅಗ್ನಿಪಥ್ ಯೋಜನೆ ವಿರೋಧಿಸಿ ಇಂದು ಬೆಳಗಾವಿ ಬಂದ್, ಪ್ರತಿಭಟನೆ ತಡೆಯಲು ಕ್ಷಿಪ್ರ ಕಾರ್ಯಪಡೆ ನಿಯೋಜಿಸಿದ ಪೊಲೀಸರು
Image
Agnipath Protests: ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ದೇಶದ ವಿವಿಧೆಡೆ 1000 ಮಂದಿ ಬಂಧನ

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:30 pm, Mon, 20 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ