AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉರಿ ವಲಯದ ಬಳಿ ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ; ಮೊನ್ನೆಯಷ್ಟೇ ಒಳನುಸುಳಿದ್ದ ಭಯೋತ್ಪಾದಕರು

ಉರಿ ವಲಯದ ಗಡಿ ನಿಯಂತ್ರಣಾ ರೇಖೆ ಬಳಿ ಉಗ್ರರು ಒಳನುಸುಳುವುದನ್ನು ಭಾರತೀಯ ಸೇನೆ ತಡೆಯುತ್ತಿದೆ. ಆದರೆ ಈ ಮೂವರು ಉಗ್ರರು ಸೋಮವಾರವೇ ಭಾರತದತ್ತ ಬಂದಿದ್ದರು.

ಉರಿ ವಲಯದ ಬಳಿ ಮೂವರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ; ಮೊನ್ನೆಯಷ್ಟೇ ಒಳನುಸುಳಿದ್ದ ಭಯೋತ್ಪಾದಕರು
ಭಾರತೀಯ ಯೋಧರು
Follow us
TV9 Web
| Updated By: Lakshmi Hegde

Updated on: Sep 23, 2021 | 5:59 PM

ಇಂದು ಭಾರತೀಯ ಸೇನೆ ಮೂವರು ಪಾಕ್​ ಉಗ್ರ (Pakistani Terrorists)ರನ್ನು ಉರಿ (Uri Sector) ಬಳಿಯ ಗಡಿನಿಯಂತ್ರಣ ರೇಖೆಯಲ್ಲಿರುವ ರಾಂಪುರ ಸೆಕ್ಟರ್​​ನ ಬಳಿ ಹತ್ಯೆಗೈದಿದ್ದಾರೆ. ಈ ಭಯೋತ್ಪಾದಕರು ಇತ್ತೀಚೆಗಷ್ಟೇ ಪಾಕ್ ಆಕ್ರಮಿತ ಕಾಶ್ಮೀರ (POK)ದಿಂದ ಭಾರತದ ಕಡೆಗೆ ನುಸುಳಿದ್ದರು.  ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ, ಅವರಿಂದ 5 ಎಕೆ 47 ಬಂದೂಕುಗಳು, 8 ಪಿಸ್ತೂಲ್​  ಮತ್ತು 70 ಹ್ಯಾಂಡ್​ ಗ್ರೆನೇಡ್​ಗಳನ್ನು ವಶಪಡಿಸಿಕೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.  

ಉರಿ ವಲಯದ ಗಡಿ ನಿಯಂತ್ರಣಾ ರೇಖೆ ಬಳಿ ಉಗ್ರರು ಒಳನುಸುಳುವುದನ್ನು ಭಾರತೀಯ ಸೇನೆ ತಡೆಯುತ್ತಿದೆ. ಆದರೆ ಈ ಮೂವರು ಉಗ್ರರು ಸೋಮವಾರವೇ ಭಾರತದತ್ತ ಬಂದಿದ್ದರು. ಅವರ ಮೇಲೆ ಒಂದು ಕಣ್ಣಿಟ್ಟಿದ್ದ ಭದ್ರತಾ ಪಡೆ ಇಂದು ಮೂವರನ್ನೂ ಕೊಂದು ಹಾಕಿದೆ.  ಒಳನುಸುಳುವ ಭಯೋತ್ಪಾದಕ ವಿರುದ್ಧ ಕಾರ್ಯಾಚರಣೆ ಸತತವಾಗಿ ನಡೆಯುತ್ತಿದೆ. ಕಳೆದ 30 ತಾಸುಗಳಿಂದಲೂ ಇಲ್ಲಿ ಭದ್ರತಾ ಪಡೆಗಳು ಕಾರ್ಯನಿರತವಾಗಿವೆ. ಈ ಸ್ಥಳವನ್ನು ಸುತ್ತುವರಿದಿವೆ.

ಅಫ್ಘಾನ್ ಉಗ್ರರು ಭಾರತಕ್ಕೆ ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ಬಳಿಕ ಅಫ್ಘಾನ್​ ಉಗ್ರರೂ ಕೂಡ ಭಾರತಕ್ಕೆ ನುಸುಳುತ್ತಿದ್ದಾರೆ ಎಂಬ ಎಚ್ಚರಿಕೆಯನ್ನು ಗುಪ್ತಚರ ದಳ ನೀಡಿದೆ. ಭಾರತದಲ್ಲಿ ಅಫ್ಘಾನಿಸ್ತಾನದ ಭಯೋತ್ಪಾದಕರೂ ಕೂಡ ದೊಡ್ಡಮಟ್ಟದ ದಾಳಿ ನಡೆಸಬಹುದು. ದೊಡ್ಡ ಸೇನಾ ಶಿಬಿರಗಳು ಅಥವಾ ಸರ್ಕಾರಿ ಸಂಸ್ಥೆಗಳೇ ಟಾರ್ಗೆಟ್​ ಆಗಲಿವೆ. ಈ ಉಗ್ರರಿಗೆ ಭಾರತಕ್ಕೆ ನುಸುಳಲು ಪಾಕಿಸ್ತಾನ ಸಹಕಾರ ನೀಡುತ್ತಿದೆ ಎಂದೂ ಹೇಳಿದೆ.

ಇದನ್ನೂ ಓದಿ: ಗೆಲಾಕ್ಸಿ ಎ73 ಸರಣಿ ಫೋನ್​​ಗಳ ಬಿಡುಗಡೆಗೆ ಸಿದ್ಧತೆ ನಡೆಸಿರುವ ಸ್ಯಾಮ್ಸಂಗ್, ಇವು 108 ಎಮ್ ಪಿ ಮೇನ್ ಕೆಮೆರಾ ಹೊಂದಿರಲಿವೆ

ಅಪಘಾತಕ್ಕೆ ಪರಿಹಾರ ನೀಡಿಲ್ಲ; ದಾವಣಗೆರೆಯಲ್ಲಿ ಎರಡು ಸರ್ಕಾರಿ ಬಸ್​ಗಳು ಜಪ್ತಿ

(Indian Army kills 3 Pakistani terrorists in LoC near Uri sector)

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್