AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poonch Encounter: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿನಿಂದ ಸೇನಾ ಅಧಿಕಾರಿ, ನಾಲ್ವರು ಯೋಧರು ಸಾವು

Indian Army: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆಯಿಂದ ಉಗ್ರರು ಮತ್ತು ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಇದರಲ್ಲಿ ಸೇನೆಯ ಒಟ್ಟು ಐವರು ಸಾವನ್ನಪ್ಪಿದ್ದಾರೆ.

Poonch Encounter: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಗುಂಡೇಟಿನಿಂದ ಸೇನಾ ಅಧಿಕಾರಿ, ನಾಲ್ವರು ಯೋಧರು ಸಾವು
ಭಾರತೀಯ ಸೈನಿಕರು (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 11, 2021 | 2:38 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಯ ಸಿಬ್ಬಂದಿ ಮತ್ತು ಉಗ್ರರ ನಡುವೆ ನಡೆದ ಎನ್​ಕೌಂಟರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ (ಜೆಸಿಒ) ಮತ್ತು ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇಂದು ಬೆಳಗ್ಗೆಯಿಂದ ಉಗ್ರರು ಮತ್ತು ಸೇನಾಪಡೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿತ್ತು. ಇದರಲ್ಲಿ ಸೇನೆಯ ಒಟ್ಟು ಐವರು ಸಾವನ್ನಪ್ಪಿದ್ದಾರೆ.

ಪೂಂಚ್ ಜಿಲ್ಲೆಯ ಡಿಕೆಜಿ ಬಳಿ ಇರುವ ಗ್ರಾಮವೊಂದರಲ್ಲಿ ಮುಂಜಾನೆಯಿಂದ ಕಾರ್ಯಾಚರಣೆ ನಡೆಯುತ್ತಿತ್ತು. ಗುಪ್ತಚರ ಇಲಾಖೆಯಿಂದ ಆ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಯೋಧರು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಎನ್​ಕೌಂಟರ್ ಕಾರ್ಯಾಚರಣೆ ನಡೆಸಲಾಗಿತ್ತು. ಆಗ ಉಗ್ರರ ಗುಂಡೇಟಿಗೆ ಸೇನಾ ಅಧಿಕಾರಿ ಸೇರಿದಂತೆ ಐವರು ಹುತಾತ್ಮರಾಗಿದ್ದಾರೆ.

ಭಾರತೀಯ ಯೋಧರು ಶೋಧ ಕಾರ್ಯ ನಡೆಸುತ್ತಿದ್ದಾಗ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ಕಿರಿಯ ನಿಯೋಜಿತ ಅಧಿಕಾರಿ ಹಾಗೂ ನಾಲ್ವರು ಸೈನಿಕರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಬದುಕುಳಿಯಲಿಲ್ಲ. ಗಡಿ ನಿಯಂತ್ರಣ ರೇಖೆಯನ್ನು ದಾಟಿ ಒಳಗೆ ನುಸುಳಿದ್ದ ಉಗ್ರರ ಮೇಲೆ ಗುಂಡಿನ ದಾಳಿ ನಡೆಸುವಾಗ ಉಗ್ರರ ಗುಂಡೇಟಿಗೆ ಐವರು ಯೋಧರು ಬಲಿಯಾಗಿದ್ದಾರೆ.

ಇದರ ಜೊತೆಗೆ ಜಮ್ಮು-ಕಾಶ್ಮೀರದ ಬಂಡಿಪೊರದಲ್ಲಿ ಕಾಶ್ಮೀರದ ಪೊಲೀಸರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಉಗ್ರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್ ಮೂಲಕ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಎನ್​ಕೌಂಟರ್​ನಲ್ಲಿ ಉಗ್ರ ಲಷ್ಕರ್-ಇ-ತೊಯ್ಬಾ (ಎಲ್​​ಇಟಿ) ಸಂಘಟನೆಯ ಉಗ್ರ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿದೆ. ಆತ ಬಂಡಿಪೊರದಲ್ಲಿ ನಡೆದ ನಾಗರಿಕನ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Terrorist Encounter: ಜಮ್ಮು ಕಾಶ್ಮೀರದಲ್ಲಿ ಪೊಲೀಸರಿಂದ ಎಲ್​ಇಟಿ ಉಗ್ರನ ಎನ್​ಕೌಂಟರ್

ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ: ಉಗ್ರರ ನಿಗ್ರಹಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಅಮಿತ್ ಶಾ

Published On - 2:33 pm, Mon, 11 October 21

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!