AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

Indian Army: ಸೇನೆಯಲ್ಲಿ ಈವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್​ (SMC), ಜಡ್ಜ್​ ಅಡ್ವೋಕೇಟ್​​ (JAG) ಮತ್ತು ಆರ್ಮಿ ಶೈಕ್ಷಣಿಕ ಕಾರ್ಪ್ಸ್​ (AEC)ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್​ ಶ್ರೇಣಿ ಪ್ರಮೋಶನ್​ ನೀಡಲಾಗುತ್ತಿತ್ತು.

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 23, 2021 | 5:25 PM

Share

ಭಾರತ ಸೇನೆಯ ಆಯ್ಕೆ ಮಂಡಳಿ ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳನ್ನು ಕರ್ನಲ್​ ದರ್ಜೆಯ (Time Scale) ಬಡ್ತಿಗೆ ಆಯ್ಕೆ ಮಾಡುವ ಮೂಲಕ, ಕಾರ್ಪ್ಸ್ ಆಫ್​ ಸಿಗ್ನಲ್​, ಕಾರ್ಪ್ಸ್​ ಆಫ್​ ಎಲೆಕ್ಟ್ರಾನಿಕ್​ ಮತ್ತು ಮೆಕ್ಯಾನಿಕಲ್​ ಇಂಜಿನಿಯರ್ಸ್ (EME) ​ಮತ್ತು ಕಾರ್ಪ್ಸ್​ ಆಫ್​ ಇಂಜಿನಿಯರ್​​ ಶ್ರೇಣಿಯ ಮಹಿಳಾ ಅಧಿಕಾರಿಗಳಿಗೆ ಟೈಂ ಸ್ಕೇಲ್​​ನ ಕರ್ನಲ್​ ದರ್ಜೆ ಬಡ್ತಿ ನೀಡುವ ಮಾರ್ಗವನ್ನು ಸುಗಮಗೊಳಿಸಿದೆ. ಸೇನೆಯಲ್ಲಿ ಈವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್​ (SMC), ಜಡ್ಜ್​ ಅಡ್ವೋಕೇಟ್​​ (JAG) ಮತ್ತು ಆರ್ಮಿ ಶೈಕ್ಷಣಿಕ ಕಾರ್ಪ್ಸ್​ (AEC)ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್​ ಶ್ರೇಣಿ ಪ್ರಮೋಶನ್​ ನೀಡಲಾಗುತ್ತಿತ್ತು. ಈ ಕಾರಣಕ್ಕೆ ಸೇನಾ ಆಯ್ಕೆ ಮಂಡಳಿಯ ನಿರ್ಧಾರ ಬಹುಮಹತ್ವ ಪಡೆದುಕೊಂಡಿದೆ.

ಸೇನೆಯ ಕಾರ್ಪ್ಸ್ ಆಫ್​ ಸಿಗ್ನಲ್​ (ಸಂಕೇತ ದಳ)ನ ಲೆಫ್ಟಿನಂಟ್​ ಕರ್ನಲ್​ ಸಂಗೀತಾ ಸರ್ದಾನಾ, ಇಎಂಇ ವಿಭಾಗದ ಲೆಫ್ಟಿನೆಂಟ್​ ಕರ್ನಲ್​ಗಳಾದ ಸೋನಿಯಾ ಆನಂದ್​ ಮತ್ತು ನವನೀತ್​ ದುಗ್ಗಾಲ್​, ಇಂಜಿಯರಿಂಗ್​ ಕಾರ್ಪ್ಸ್​ನ ಲೆಫ್ಟಿನೆಂಟ್​ ಕರ್ನಲ್​ಗಳಾದ ರೀನು ಖನ್ನಾ ಮತ್ತು ರಿಚಾ ಸಾಗರ್​ ಅವರಿಗೆ ಸದ್ಯ ಟೈಂ ಸ್ಕೇಲ್​​ನ ಕರ್ನಲ್​ ಶ್ರೇಣಿಗೆ ಬಡ್ತಿ ನೀಡಲಾಗಿದ್ದು, ಇವರೆಲ್ಲರೂ ತಮ್ಮ ತಮ್ಮ ವಿಭಾಗ, ದಳದಲ್ಲಿ 26 ವರ್ಷ ಸೇವೆ ಸಂಪೂರ್ಣಗೊಳಿಸಿದವರಾಗಿದ್ದಾರೆ.

ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಶಾಶ್ವತ ಆಯೋಗ ರಚಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿತ್ತು. ಹೀಗಾಗಿ ಸೇನೆಯ ಬಹುತೇಕ ವಿಭಾಗಗಳಲ್ಲಿ ಶಾಶ್ವತ ಆಯೋಗ ರಚಿಸುವ ಜತೆ, ಉನ್ನತ ಶ್ರೇಣಿಗಳಿಗೆ ಬಡ್ತಿ ನೀಡುವುದನ್ನೂ ಹೆಚ್ಚೆಚ್ಚು ವಿಭಾಗಗಳಿಗೆ ವಿಸ್ತರಿಸುವ ಮೂಲಕ, ಸೇನೆಯಲ್ಲಿ ಲಿಂಗ ತಟಸ್ಥ ನೀತಿ ಅನುಸರಣೆಗೆ ಮುಂದಡಿ ಇಡಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.

ಇದನ್ನೂ ಓದಿ: Panjshir: ತಾಲಿಬಾನ್ ಪಾಲಿಗೆ ಈವರೆಗೆ ಸವಾಲಾಗಿಯೇ ಉಳಿದಿರುವ ಅಫ್ಘಾನಿಸ್ತಾನದ ಪ್ರತಿರೋಧದ ಕಣಿವೆ ಪಂಜ್​ಶೀರ್​

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

Published On - 5:15 pm, Mon, 23 August 21

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್