AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

Indian Army: ಸೇನೆಯಲ್ಲಿ ಈವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್​ (SMC), ಜಡ್ಜ್​ ಅಡ್ವೋಕೇಟ್​​ (JAG) ಮತ್ತು ಆರ್ಮಿ ಶೈಕ್ಷಣಿಕ ಕಾರ್ಪ್ಸ್​ (AEC)ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್​ ಶ್ರೇಣಿ ಪ್ರಮೋಶನ್​ ನೀಡಲಾಗುತ್ತಿತ್ತು.

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 23, 2021 | 5:25 PM

Share

ಭಾರತ ಸೇನೆಯ ಆಯ್ಕೆ ಮಂಡಳಿ ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳನ್ನು ಕರ್ನಲ್​ ದರ್ಜೆಯ (Time Scale) ಬಡ್ತಿಗೆ ಆಯ್ಕೆ ಮಾಡುವ ಮೂಲಕ, ಕಾರ್ಪ್ಸ್ ಆಫ್​ ಸಿಗ್ನಲ್​, ಕಾರ್ಪ್ಸ್​ ಆಫ್​ ಎಲೆಕ್ಟ್ರಾನಿಕ್​ ಮತ್ತು ಮೆಕ್ಯಾನಿಕಲ್​ ಇಂಜಿನಿಯರ್ಸ್ (EME) ​ಮತ್ತು ಕಾರ್ಪ್ಸ್​ ಆಫ್​ ಇಂಜಿನಿಯರ್​​ ಶ್ರೇಣಿಯ ಮಹಿಳಾ ಅಧಿಕಾರಿಗಳಿಗೆ ಟೈಂ ಸ್ಕೇಲ್​​ನ ಕರ್ನಲ್​ ದರ್ಜೆ ಬಡ್ತಿ ನೀಡುವ ಮಾರ್ಗವನ್ನು ಸುಗಮಗೊಳಿಸಿದೆ. ಸೇನೆಯಲ್ಲಿ ಈವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್​ (SMC), ಜಡ್ಜ್​ ಅಡ್ವೋಕೇಟ್​​ (JAG) ಮತ್ತು ಆರ್ಮಿ ಶೈಕ್ಷಣಿಕ ಕಾರ್ಪ್ಸ್​ (AEC)ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್​ ಶ್ರೇಣಿ ಪ್ರಮೋಶನ್​ ನೀಡಲಾಗುತ್ತಿತ್ತು. ಈ ಕಾರಣಕ್ಕೆ ಸೇನಾ ಆಯ್ಕೆ ಮಂಡಳಿಯ ನಿರ್ಧಾರ ಬಹುಮಹತ್ವ ಪಡೆದುಕೊಂಡಿದೆ.

ಸೇನೆಯ ಕಾರ್ಪ್ಸ್ ಆಫ್​ ಸಿಗ್ನಲ್​ (ಸಂಕೇತ ದಳ)ನ ಲೆಫ್ಟಿನಂಟ್​ ಕರ್ನಲ್​ ಸಂಗೀತಾ ಸರ್ದಾನಾ, ಇಎಂಇ ವಿಭಾಗದ ಲೆಫ್ಟಿನೆಂಟ್​ ಕರ್ನಲ್​ಗಳಾದ ಸೋನಿಯಾ ಆನಂದ್​ ಮತ್ತು ನವನೀತ್​ ದುಗ್ಗಾಲ್​, ಇಂಜಿಯರಿಂಗ್​ ಕಾರ್ಪ್ಸ್​ನ ಲೆಫ್ಟಿನೆಂಟ್​ ಕರ್ನಲ್​ಗಳಾದ ರೀನು ಖನ್ನಾ ಮತ್ತು ರಿಚಾ ಸಾಗರ್​ ಅವರಿಗೆ ಸದ್ಯ ಟೈಂ ಸ್ಕೇಲ್​​ನ ಕರ್ನಲ್​ ಶ್ರೇಣಿಗೆ ಬಡ್ತಿ ನೀಡಲಾಗಿದ್ದು, ಇವರೆಲ್ಲರೂ ತಮ್ಮ ತಮ್ಮ ವಿಭಾಗ, ದಳದಲ್ಲಿ 26 ವರ್ಷ ಸೇವೆ ಸಂಪೂರ್ಣಗೊಳಿಸಿದವರಾಗಿದ್ದಾರೆ.

ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಶಾಶ್ವತ ಆಯೋಗ ರಚಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿತ್ತು. ಹೀಗಾಗಿ ಸೇನೆಯ ಬಹುತೇಕ ವಿಭಾಗಗಳಲ್ಲಿ ಶಾಶ್ವತ ಆಯೋಗ ರಚಿಸುವ ಜತೆ, ಉನ್ನತ ಶ್ರೇಣಿಗಳಿಗೆ ಬಡ್ತಿ ನೀಡುವುದನ್ನೂ ಹೆಚ್ಚೆಚ್ಚು ವಿಭಾಗಗಳಿಗೆ ವಿಸ್ತರಿಸುವ ಮೂಲಕ, ಸೇನೆಯಲ್ಲಿ ಲಿಂಗ ತಟಸ್ಥ ನೀತಿ ಅನುಸರಣೆಗೆ ಮುಂದಡಿ ಇಡಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.

ಇದನ್ನೂ ಓದಿ: Panjshir: ತಾಲಿಬಾನ್ ಪಾಲಿಗೆ ಈವರೆಗೆ ಸವಾಲಾಗಿಯೇ ಉಳಿದಿರುವ ಅಫ್ಘಾನಿಸ್ತಾನದ ಪ್ರತಿರೋಧದ ಕಣಿವೆ ಪಂಜ್​ಶೀರ್​

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

Published On - 5:15 pm, Mon, 23 August 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?