AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

Indian Army: ಸೇನೆಯಲ್ಲಿ ಈವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್​ (SMC), ಜಡ್ಜ್​ ಅಡ್ವೋಕೇಟ್​​ (JAG) ಮತ್ತು ಆರ್ಮಿ ಶೈಕ್ಷಣಿಕ ಕಾರ್ಪ್ಸ್​ (AEC)ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್​ ಶ್ರೇಣಿ ಪ್ರಮೋಶನ್​ ನೀಡಲಾಗುತ್ತಿತ್ತು.

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Aug 23, 2021 | 5:25 PM

Share

ಭಾರತ ಸೇನೆಯ ಆಯ್ಕೆ ಮಂಡಳಿ ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳನ್ನು ಕರ್ನಲ್​ ದರ್ಜೆಯ (Time Scale) ಬಡ್ತಿಗೆ ಆಯ್ಕೆ ಮಾಡುವ ಮೂಲಕ, ಕಾರ್ಪ್ಸ್ ಆಫ್​ ಸಿಗ್ನಲ್​, ಕಾರ್ಪ್ಸ್​ ಆಫ್​ ಎಲೆಕ್ಟ್ರಾನಿಕ್​ ಮತ್ತು ಮೆಕ್ಯಾನಿಕಲ್​ ಇಂಜಿನಿಯರ್ಸ್ (EME) ​ಮತ್ತು ಕಾರ್ಪ್ಸ್​ ಆಫ್​ ಇಂಜಿನಿಯರ್​​ ಶ್ರೇಣಿಯ ಮಹಿಳಾ ಅಧಿಕಾರಿಗಳಿಗೆ ಟೈಂ ಸ್ಕೇಲ್​​ನ ಕರ್ನಲ್​ ದರ್ಜೆ ಬಡ್ತಿ ನೀಡುವ ಮಾರ್ಗವನ್ನು ಸುಗಮಗೊಳಿಸಿದೆ. ಸೇನೆಯಲ್ಲಿ ಈವರೆಗೆ ಆರ್ಮಿ ವೈದ್ಯಕೀಯ ಕಾರ್ಪ್ಸ್​ (SMC), ಜಡ್ಜ್​ ಅಡ್ವೋಕೇಟ್​​ (JAG) ಮತ್ತು ಆರ್ಮಿ ಶೈಕ್ಷಣಿಕ ಕಾರ್ಪ್ಸ್​ (AEC)ನ ಮಹಿಳಾ ಅಧಿಕಾರಿಗಳಿಗೆ ಮಾತ್ರ ಕರ್ನಲ್​ ಶ್ರೇಣಿ ಪ್ರಮೋಶನ್​ ನೀಡಲಾಗುತ್ತಿತ್ತು. ಈ ಕಾರಣಕ್ಕೆ ಸೇನಾ ಆಯ್ಕೆ ಮಂಡಳಿಯ ನಿರ್ಧಾರ ಬಹುಮಹತ್ವ ಪಡೆದುಕೊಂಡಿದೆ.

ಸೇನೆಯ ಕಾರ್ಪ್ಸ್ ಆಫ್​ ಸಿಗ್ನಲ್​ (ಸಂಕೇತ ದಳ)ನ ಲೆಫ್ಟಿನಂಟ್​ ಕರ್ನಲ್​ ಸಂಗೀತಾ ಸರ್ದಾನಾ, ಇಎಂಇ ವಿಭಾಗದ ಲೆಫ್ಟಿನೆಂಟ್​ ಕರ್ನಲ್​ಗಳಾದ ಸೋನಿಯಾ ಆನಂದ್​ ಮತ್ತು ನವನೀತ್​ ದುಗ್ಗಾಲ್​, ಇಂಜಿಯರಿಂಗ್​ ಕಾರ್ಪ್ಸ್​ನ ಲೆಫ್ಟಿನೆಂಟ್​ ಕರ್ನಲ್​ಗಳಾದ ರೀನು ಖನ್ನಾ ಮತ್ತು ರಿಚಾ ಸಾಗರ್​ ಅವರಿಗೆ ಸದ್ಯ ಟೈಂ ಸ್ಕೇಲ್​​ನ ಕರ್ನಲ್​ ಶ್ರೇಣಿಗೆ ಬಡ್ತಿ ನೀಡಲಾಗಿದ್ದು, ಇವರೆಲ್ಲರೂ ತಮ್ಮ ತಮ್ಮ ವಿಭಾಗ, ದಳದಲ್ಲಿ 26 ವರ್ಷ ಸೇವೆ ಸಂಪೂರ್ಣಗೊಳಿಸಿದವರಾಗಿದ್ದಾರೆ.

ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಶಾಶ್ವತ ಆಯೋಗ ರಚಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿತ್ತು. ಹೀಗಾಗಿ ಸೇನೆಯ ಬಹುತೇಕ ವಿಭಾಗಗಳಲ್ಲಿ ಶಾಶ್ವತ ಆಯೋಗ ರಚಿಸುವ ಜತೆ, ಉನ್ನತ ಶ್ರೇಣಿಗಳಿಗೆ ಬಡ್ತಿ ನೀಡುವುದನ್ನೂ ಹೆಚ್ಚೆಚ್ಚು ವಿಭಾಗಗಳಿಗೆ ವಿಸ್ತರಿಸುವ ಮೂಲಕ, ಸೇನೆಯಲ್ಲಿ ಲಿಂಗ ತಟಸ್ಥ ನೀತಿ ಅನುಸರಣೆಗೆ ಮುಂದಡಿ ಇಡಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.

ಇದನ್ನೂ ಓದಿ: Panjshir: ತಾಲಿಬಾನ್ ಪಾಲಿಗೆ ಈವರೆಗೆ ಸವಾಲಾಗಿಯೇ ಉಳಿದಿರುವ ಅಫ್ಘಾನಿಸ್ತಾನದ ಪ್ರತಿರೋಧದ ಕಣಿವೆ ಪಂಜ್​ಶೀರ್​

Viral Video: ರಾಖಿ ಕಟ್ಟಿದವನನ್ನೇ ಕಚ್ಚಿ ಕೊಂದ ಹಾವುಗಳು!; ಈ ವಿಡಿಯೋ ನೋಡಿದರೆ ಬೆಚ್ಚಿ ಬೀಳ್ತೀರಿ

Published On - 5:15 pm, Mon, 23 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ