AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ದಾಳಿಯಿಂದ ಹಾನಿಗೊಳಗಾದ ಮಸೀದಿ ಸರಿಪಡಿಸಲು ಭಾರತೀಯ ಸೇನೆಯ ಸಹಾಯ

Jammu and Kashmir Mosque: ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾಗಿದ್ದ ಮಸೀದಿಯನ್ನು ಸರಿಪಡಿಸಲು ಭಾರತೀಯ ಸೇನೆ ಸಹಾಯ ಮಾಡಿದೆ.ಜಮ್ಮು ಮತ್ತು ಕಾಶ್ಮೀರದ ಇಬ್ಕೋಟ್ ಗ್ರಾಮದ ಛೋಟಗಾಂವ್ ಪ್ರದೇಶದಲ್ಲಿರುವ ಮಸೀದಿಯೊಂದು ಪಾಕಿಸ್ತಾನದ ಗುಂಡಿನ ದಾಳಿಯಿಂದ ಹಾನಿಗೊಳಗಾಗಿದ್ದು, ಭಾರತೀಯ ಸೇನೆಯು ಅದನ್ನು ದುರಸ್ತಿ ಮಾಡಲು ಸಹಾಯ ಮಾಡಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆಯಲ್ಲಿ ಮಸೀದಿಗೆ ಹಾನಿಯಾಗಿತ್ತು.

ಪಾಕಿಸ್ತಾನ ದಾಳಿಯಿಂದ ಹಾನಿಗೊಳಗಾದ ಮಸೀದಿ ಸರಿಪಡಿಸಲು ಭಾರತೀಯ ಸೇನೆಯ ಸಹಾಯ
ಭಾರತೀಯ ಸೇನೆ Image Credit source: India Today
ನಯನಾ ರಾಜೀವ್
|

Updated on: May 21, 2025 | 9:55 AM

Share

ಶ್ರೀನಗರ, ಮೇ 21: ಪಾಕಿಸ್ತಾನ(Pakistan)ವು ಭಾರತದ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಮಸೀದಿಯೊಂದಕ್ಕೆ ಹಾನಿಯುಂಟಾಗಿದ್ದು, ಅದನ್ನು ಸರಿಪಡಿಸಲು ಭಾರತೀಯ ಸೇನೆಯು ಸಹಾಯ ಮಾಡಿದೆ. ಏಪ್ರಿಲ್ 22ರಂದು ಜಮ್ಮ ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಅಮಾಯಕರನ್ನು ಹತ್ಯೆ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ತಕ್ಕ ಪಾಠ ಕಲಿಸಿತ್ತು. 9 ಕಡೆ ಉಗ್ರರ ನೆಲೆಗಳನ್ನು ನಾಶಪಡಿಸಿತ್ತು.

ಜಮ್ಮು ಮತ್ತು ಕಾಶ್ಮೀರದ ಇಬ್ಕೋಟ್ ಗ್ರಾಮದ ಛೋಟಗಾಂವ್ ಪ್ರದೇಶದಲ್ಲಿರುವ ಮಸೀದಿಯೊಂದು ಪಾಕಿಸ್ತಾನದ ಗುಂಡಿನ ದಾಳಿಯಿಂದ ಹಾನಿಗೊಳಗಾಗಿದ್ದು, ಭಾರತೀಯ ಸೇನೆಯು ಅದನ್ನು ದುರಸ್ತಿ ಮಾಡಲು ಸಹಾಯ ಮಾಡಿದೆ. ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಘರ್ಷಣೆಯಲ್ಲಿ ಮಸೀದಿಗೆ ಹಾನಿಯಾಗಿತ್ತು.

ಗಡಿಯಾಚೆಯಿಂದ ಶೆಲ್ ದಾಳಿ ನಡೆದಾಗ ಮಸೀದಿಯ ಮೇಲ್ಛಾವಣಿ ಹಾನಿಗೊಳಗಾಯಿತು ಮತ್ತು ಸೌರ ಫಲಕ ವ್ಯವಸ್ಥೆಗಳು ಸಹ ನಾಶವಾದವು. ಈ ಅವಧಿಯಲ್ಲಿ ನಮಾಜ್ ಮಾಡುವ ಸ್ಥಳದಲ್ಲಿದ್ದ ಮ್ಯಾಟ್​ಗಳು ಕೂಡ ಸುಟ್ಟು ಹೋಗಿದ್ದವು. ಮಸೀದಿಗೆ ಆದ ಹಾನಿಯಿಂದ ಸ್ಥಳೀಯ ಸಮುದಾಯವು ಅಸಮಾಧಾನಗೊಂಡಿತ್ತು.

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
Image
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
Image
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
Image
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಮತ್ತಷ್ಟು ಓದಿ: ಲಾಹೋರ್: ಉಗ್ರ ಹಫೀಜ್ ಸಯೀದ್ ಆಪ್ತ ಆಮಿರ್ ಹಮ್ಜಾಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನಮಾಜ್ ಮಾಡುವಲ್ಲಿ ಮತ್ತು ಧಾರ್ಮಿಕ ಸಭೆಗಳಿಗೆ ಹಾಜರಾಗುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದರು. ಇದನ್ನು ನೋಡಿದ ಭಾರತೀಯ ಸೇನೆ ಸಹಾಯ ಮಾಡಲು ಮುಂದೆ ಬಂದಿತ್ತು. ಸೇನೆಯು ಛಾವಣಿಯನ್ನು ದುರಸ್ತಿ ಮಾಡಿಸಿ, ಸೌರಶಕ್ತಿ ಫಲಕಗಳನ್ನು ಪುನಃ ಅಳವಡಿಸಿ, ದಾಳಿಯಲ್ಲಿ ನಾಶವಾದ ಮ್ಯಾಟ್‌ಗಳನ್ನು ಹೊಸದರೊಂದಿಗೆ ಬದಲಾಯಿಸಿತು.

ಈಗ ಮಸೀದಿ ಮೊದಲಿನಂತೆಯೇ ಸಿದ್ಧವಾಗಿದೆ. ಈ ನೆರವು ಗಡಿ ಪ್ರದೇಶಗಳಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು ಮತ್ತು ಮಾನವೀಯ ನೆರವು ನೀಡಲು ಭಾರತೀಯ ಸೇನೆಯ ಪ್ರಯತ್ನಗಳ ಭಾಗವಾಗಿದೆ.

ಇಬ್ಕೋಟ್‌ನ ಗ್ರಾಮಸ್ಥರು ಸೇನೆಯ ತ್ವರಿತ ಕ್ರಮ ಮತ್ತು ಸಹಾನುಭೂತಿಗೆ ಧನ್ಯವಾದ ಅರ್ಪಿಸಿದರು. ಸಮುದಾಯದ ಹಿರಿಯರು ಸೇನೆಯು ಪ್ರದೇಶದಲ್ಲಿ ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ಮಾತ್ರವಲ್ಲದೆ ಕಷ್ಟದ ಸಮಯದಲ್ಲಿ ಜನರೊಂದಿಗೆ ನಿಲ್ಲುವಲ್ಲಿಯೂ ವಹಿಸಿದ ಪಾತ್ರವನ್ನು ಶ್ಲಾಘಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​