AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್​ ಸಿಂಧೂರ್​: ವಾರ್​ ರೂಂನಿಂದ ಪಾಕ್​ ಮೇಲೆ ಕಣ್ಣಿಟ್ಟಿದ್ದ ಮೂರು ಸೇನಾ ಮುಖ್ಯಸ್ಥರು, ಫೋಟೋ ಬಿಡುಗಡೆ

ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದ್ದಾಗ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಯುದ್ಧ ಕೋಣೆಯಲ್ಲಿ ಉಪಸ್ಥಿತರಿದ್ದರು.ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಅಮಾಯಕರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು.

ಆಪರೇಷನ್​ ಸಿಂಧೂರ್​: ವಾರ್​ ರೂಂನಿಂದ ಪಾಕ್​ ಮೇಲೆ ಕಣ್ಣಿಟ್ಟಿದ್ದ ಮೂರು ಸೇನಾ ಮುಖ್ಯಸ್ಥರು, ಫೋಟೋ ಬಿಡುಗಡೆ
ಭಾರತೀಯ ಸೇನೆ
ನಯನಾ ರಾಜೀವ್
|

Updated on:May 27, 2025 | 10:08 AM

Share

ನವದೆಹಲಿ, ಮೇ 27: ಆಪರೇಷನ್ ಸಿಂಧೂರ್(Operation Sindoor) ನಡೆದು 20 ದಿನಗಳು ಕಳೆದಿವೆ.  ಅದಕ್ಕೆ ಸಂಬಂಧಿಸಿದ ಚಿತ್ರಗಳು ಇನ್ನೂ ಬಿಡುಗಡೆಯಾಗುತ್ತಲೇ ಇವೆ. ಇಲ್ಲಿಯವರೆಗೆ ಈ ಕಾರ್ಯಾಚರಣೆಯ ಹಲವು ಚಿತ್ರಗಳು ದೇಶದ ಜನರಲ್ಲಿ ಮತ್ತಷ್ಟು ಉತ್ಸಾಹ ಮೂಡುವಂತೆ,  ದೇಶದ ಮೇಲೆ ಹೆಮ್ಮೆ ಬರುವಂತೆ ಮಾಡಿವೆ. ವಾರ್​ ರೂಂನಲ್ಲಿ ಮೂರು ಸೇನೆಗಳ ಮುಖ್ಯಸ್ಥರು ‘ಆಪರೇಷನ್ ಸಿಂಧೂರ್’ ಅನ್ನು ಒಟ್ಟಿಗೆ ವೀಕ್ಷಿಸುವುದನ್ನು ಕಾಣಬಹುದು.

ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸುತ್ತಿದ್ದಾಗ, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಯುದ್ಧ ಕೋಣೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಅಮಾಯಕರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ 26 ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿತ್ತು. ಭಾರತೀಯ ಸೇನೆಯು ಮೇ 7 ರಂದು ಭಯೋತ್ಪಾದಕರ ವಿರುದ್ಧ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿತು.

ಪಹಲ್ಗಾಮ್ ದಾಳಿಯ ಮರುದಿನವೇ, ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತು. ಏಪ್ರಿಲ್ 23 ರಂದು ಎನ್‌ಐಎ ತಂಡವು ಈ ಭಯೋತ್ಪಾದಕ ದಾಳಿಯ ತನಿಖೆಯನ್ನು ಪ್ರಾರಂಭಿಸಿತ್ತು. ತನಿಖಾ ತಂಡವು ಬೈಸರನ್ ಕಣಿವೆಯನ್ನು ತಲುಪಿ ಅಪರಾಧದ ಸ್ಥಳವನ್ನು ಪರಿಶೀಲಿಸಿತು ಮತ್ತು ವಿಚಾರಣೆ ನಡೆಸಿತು.

ಮತ್ತಷ್ಟು ಓದಿ: ಪಹಲ್ಗಾಮ್​ ದಾಳಿಗೆ ಒಂದು ತಿಂಗಳು, ಆಪರೇಷನ್​ ಸಿಂಧೂರ್​ನಿಂದ ಸರ್ವಪಕ್ಷ ಸಂಸದರ ನಿಯೋಗ ರಚನೆವರೆಗೆ ಇಲ್ಲಿದೆ ಮಾಹಿತಿ

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ಮತ್ತು ಪಾಕಿಸ್ತಾನದಲ್ಲಿರುವ ಅವರ ಕಮಾಂಡರ್​ಗಳ ನಡುವಿನ ಸಂಪರ್ಕಗಳು ಸಂಬಂಧ ಹೊಂದಿವೆ ಎಂದು ವಿದೇಶಾಂಗ ಸಚಿವಾಲಯವು ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿದೆ.

ಹಲ್ಗಾಮ್ ಭಯೋತ್ಪಾದಕ ದಾಳಿಯ ಮರುದಿನವೇ, ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು. ಏಪ್ರಿಲ್ 23 ರಂದು ನಡೆದ ಈ ಸಭೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದದ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿತು. ಈ ಮಾಹಿತಿಯನ್ನು ಪಾಕಿಸ್ತಾನಕ್ಕೂ ನೀಡಲಾಗಿತ್ತು.

ಸಿಸಿಎಸ್ ಸಭೆಯಲ್ಲಿಯೇ ಭಾರತ ಮತ್ತೊಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿತ್ತು. ಅಟ್ಟಾರಿ ಗಡಿಯನ್ನು ಮುಚ್ಚುವುದಾಗಿ ಭಾರತದ ಕಡೆಯಿಂದ ಘೋಷಿಸಲಾಯಿತು. ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚುವುದಾಗಿ ಘೋಷಿಸಿದ ಭಾರತ, ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೀಸಾಗಳನ್ನು ರದ್ದುಗೊಳಿಸಿತು.

ಪಾಕ್ ರಾಯಭಾರಿಗಳಿಗೆ ಏಳು ದಿನಗಳಲ್ಲಿ ಭಾರತವನ್ನು ತೊರೆಯುವಂತೆ ಸುಚಿಸಲಾಗಿತ್ತು. ಪಾಕಿಸ್ತಾನಿ ರಾಯಭಾರ ಕಚೇರಿ ಅಧಿಕಾರಿ ಅಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಅವರನ್ನು ಮೇ 13 ರಂದು ಭಾರತವನ್ನು ತೊರೆಯುವಂತೆ ಕೇಳಿಕೊಂಡಿತು. ಮೇ 21 ರಂದು, ಪಹಲ್ಗಾಮ್ ದಾಳಿಯ ಒಂದು ತಿಂಗಳು ಪೂರ್ಣಗೊಳ್ಳುವ ಕೇವಲ ಒಂದು ದಿನ ಮೊದಲು, ಭಾರತವು ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು 24 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ಕೇಳಿಕೊಂಡಿತ್ತು.

ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಸರ್ಕಾರ ಸೇನೆಗೆ ಸ್ವಾತಂತ್ರ್ಯ ನೀಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರೊಂದಿಗೆ ನಿರಂತರ ಸಭೆಗಳನ್ನು ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:03 am, Tue, 27 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ