AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..

ಆಕ್ಸಿಜನ್​ ಘಟಕ ಕಳೆದ ನಾಲ್ಕು ವರ್ಷಗಳಿಂದಲೂ ನಿಷ್ಕ್ರಿಯಗೊಂಡಿತ್ತು. ಅದನ್ನೀಗ ಪ್ರತಿದಿನಕ್ಕೆ 700 ಸಿಲಿಂಡರ್​​ಗಳನ್ನು ಮರುಪೂರಣ ಮಾಡುವಷ್ಟು ಸರಿಪಡಿಸಲಾಗಿದೆ. ಕೊವಿಡ್​ 19 ಉಲ್ಬಣಗೊಂಡಿದ್ದರಿಂದ ಆಕ್ಸಿಜನ್​ ಬೇಡಿಕೆ ಹೆಚ್ಚಾಯಿತು. ಹೀಗಾಗಿ ಈ ಆಕ್ಸಿಜನ್ ಘಟಕ ಮರುಪ್ರಾರಂಭ ಮಾಡುವ ಅಗತ್ಯತೆಯೂ ಇತ್ತು.

ನಾಲ್ಕು ವರ್ಷಗಳಿಂದ ನಿಷ್ಕ್ರಿಯಗೊಂಡಿದ್ದ ಆಕ್ಸಿಜನ್​ ಘಟಕವನ್ನು ನಾಲ್ಕೇ ದಿನಗಳಲ್ಲಿ ದುರಸ್ತಿ ಮಾಡಿದ ಇಂಡಿಯನ್ ಆರ್ಮಿ..
ಆಕ್ಸಿಜನ್​ ಘಟಕ
Lakshmi Hegde
|

Updated on: May 20, 2021 | 6:00 PM

Share

ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಸಿಕ್ಕಾಪಟೆ ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಕಾಶ್ಮೀರದ ಆಸ್ಪತ್ರೆಗಳಲ್ಲಿ ಆಕ್ಸಿಜನ್​ಗೆ ಬೇಡಿಕೆ ಹೆಚ್ಚಾಗಿದೆ. ಹೀಗೆ ಆಮ್ಲಜನಕ ಕೊರತೆ ಉಂಟಾದ ಆಸ್ಪತ್ರೆಗಳ ಸಹಾಯಕ್ಕೆ ಭಾರತೀಯ ಸೇನೆ ನಿಂತಿದೆ. ಅಗತ್ಯ ಇರುವ ಆಕ್ಸಿಜನ್​ನ್ನು ಪೂರೈಸುವ ಮೂಲಕ ಸ್ಥಳೀಯ ಆಡಳಿತದ ನೆರವಿಗೆ ನಿಂತಿದೆ.

ಶ್ರೀನಗರದ ರಂಗ್ರೆತ್​ ಪ್ರದೇಶದಲ್ಲಿರುವ ಆಮ್ಲಜನಕದ ಘಟಕ ನಿಷ್ಕ್ರಿಯಗೊಂಡಿತ್ತು. ಅದನ್ನೀಗ ಭಾರತೀಯ ಸೇನೆಯ ಸಹಾಯದಿಂದ ಮರು ಆರಂಭಿಸಲಾಗಿದೆ. ಪ್ರತಿದಿನವೂ ಸುಮಾರು 700 ಸಿಲಿಂಡರ್​​ಗಳನ್ನು ತುಂಬುವಷ್ಟು ಸಾಮರ್ಥ್ಯವನ್ನು ಈ ಆಕ್ಸಿಜನ್​ ಘಟಕ ಹೊಂದಿದೆ.

ಆಕ್ಸಿಜನ್​ ಘಟಕ ಕಳೆದ ನಾಲ್ಕು ವರ್ಷಗಳಿಂದಲೂ ನಿಷ್ಕ್ರಿಯಗೊಂಡಿತ್ತು. ಅದನ್ನೀಗ ಪ್ರತಿದಿನಕ್ಕೆ 700 ಸಿಲಿಂಡರ್​​ಗಳನ್ನು ಮರುಪೂರಣ ಮಾಡುವಷ್ಟು ಸರಿಪಡಿಸಲಾಗಿದೆ. ಕೊವಿಡ್​ 19 ಉಲ್ಬಣಗೊಂಡಿದ್ದರಿಂದ ಆಕ್ಸಿಜನ್​ ಬೇಡಿಕೆ ಹೆಚ್ಚಾಯಿತು. ಹೀಗಾಗಿ ಈ ಆಕ್ಸಿಜನ್ ಘಟಕ ಮರುಪ್ರಾರಂಭ ಮಾಡುವ ಅಗತ್ಯತೆಯೂ ಇತ್ತು. ಹೀಗಾಗಿ ಸ್ಥಳೀಯ ಆಡಳಿತದಿಂದ ಭಾರತೀಯ ಸೇನೆಯ ಚಿನಾರ್​ ಕಾರ್ಪ್​​​ನ್ನು ಸಂಪರ್ಕಿಸಿ ಈ ಬಗ್ಗೆ ಚರ್ಚಿಸಲಾಯಿತು. ಆಮ್ಲಜನಕ ಘಟಕ ದುರಸ್ತಿಯಾಗಬೇಕಾದರೆ ಅಗತ್ಯವಾಗಿ ಬೇಕಾದ ಅದರ ಬಿಡಿಭಾಗಗಳನ್ನೆಲ್ಲ ಮುಂಬೈನಿಂದ ತರಲಾಗಿದ್ದು, ಇದಕ್ಕಾಗಿ ಭಾರತೀಯ ವಾಯುಸೇನೆಯ ಸಹಾಯ ಪಡೆಯಲಾಗಿದೆ. ನಂತರ ಎಂಜಿನಿಯರ್​ಗಳ ಸಹಾಯದಿಂದ ಕೇವಲ ನಾಲ್ಕೇ ದಿನಗಳಲ್ಲಿ ದುರಸ್ತಿಗೊಳಿಸಲಾಯಿತು ಎಂದು ಇಂಡಿಯನ್ ಆರ್ಮಿ ಲೆಫ್ಟಿನೆಂಟ್ ಕರ್ನಲ್​ ನೀಲದಿರಿ ರಾಯ್​ ತಿಳಿಸಿದ್ದಾರೆ.

ಆಮ್ಲಜನಕ ಘಟಕ ಕಳೆದ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರಲಿಲ್ಲ. ಅದರಲ್ಲಿ ಅನೇಕ ಸಮಸ್ಯೆಗಳು ಇದ್ದವು. ಆದರೆ ಭಾರತೀಯ ಸೇನೆಯ ಎಂಜಿನಿಯರ್​​ಗಳು ಹಗಲು-ರಾತ್ರಿ ಕೆಲಸ ಮಾಡಿ ಕೇವಲ ನಾಲ್ಕೇ ದಿನಗಳಲ್ಲಿ ಇದನ್ನು ಸರಿಪಡಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀನಗರದ ರಂಗ್ರೀತ್​ ಪ್ರದೇಶದಲ್ಲಿ 200 ಬೆಡ್​ಗಳಿರುವ ಕೊವಿಡ್ ಆಸ್ಪತ್ರೆಯನ್ನು ಭಾರತೀಯ ಸೇನೆ ಸಿದ್ಧಪಡಿಸಿತ್ತು. ಹಾಗೇ ಗಡಿ ನಿಯಂತ್ರಣ ರೇಖೆ ಬಳಿ ಉರಿ ವಲಯದಲ್ಲೂ ಒಂದು ಕೊವಿಡ್​ 19 ಆಸ್ಪತ್ರೆಯನ್ನು ಸೇನೆ ಸಿದ್ಧಗೊಳಿಸಿದೆ.

ಇದನ್ನೂ ಓದಿ: ದೇಶದಲ್ಲಿ ಈಗಲೂ ಶೇ.50ರಷ್ಟು ಜನರು ಮಾಸ್ಕ್ ಧರಿಸುತ್ತಿಲ್ಲ, ಜೂನ್ ಅಂತ್ಯದೊಳಗೆ ಪ್ರತಿದಿನ 45 ಲಕ್ಷ ಕೊವಿಡ್ ಟೆಸ್ಟ್

ನಾರದ ಲಂಚ ಪ್ರಕರಣ: ‘ಅನಿವಾರ್ಯ ಕಾರಣ’ ಹಿನ್ನೆಲೆಯಲ್ಲಿ ಬಂಧಿತ ಟಿಎಮ್​ಸಿ ನಾಯಕರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲ್ಪಟ್ಟಿತು!

Indian army restored a defunct oxygen plant in Shrinagar to fight agains oxygen shortage

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು