AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಬ್ಯಾಂಕುಗಳು ವಿಶ್ವದ ಟಾಪ್ 10 ಸ್ಥಾನ ಗಳಿಸುವ ಗುರಿ ಹೊಂದಬೇಕು; ಅಮಿತ್ ಶಾ

'ಕಳೆದ 10 ವರ್ಷಗಳಲ್ಲಿ 53 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದ್ದು, ಬಡವರಿಗೆ ಬ್ಯಾಂಕಿಂಗ್ ಸೌಲಭ್ಯ ಒದಗಿಸಲು ಈ ಯೋಜನೆ ರೂಪಿಸಲಾಗಿದೆ. ಭಾರತದ ಬ್ಯಾಂಕ್​ಗಳು ಜಗತ್ತಿನ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆಯಬೇಕು' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಬ್ಯಾಂಕಿಂಗ್ ಕುರಿತಾದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು.

ಭಾರತೀಯ ಬ್ಯಾಂಕುಗಳು ವಿಶ್ವದ ಟಾಪ್ 10 ಸ್ಥಾನ ಗಳಿಸುವ ಗುರಿ ಹೊಂದಬೇಕು; ಅಮಿತ್ ಶಾ
Amit Shah
ಸುಷ್ಮಾ ಚಕ್ರೆ
|

Updated on: Sep 25, 2025 | 10:09 PM

Share

ಮುಂಬೈ, ಸೆಪ್ಟೆಂಬರ್ 25: ಭಾರತೀಯ ಬ್ಯಾಂಕುಗಳು ಕೇವಲ ಬೆಳವಣಿಗೆಗೆ ಮಾತ್ರ ಯೋಜನೆ ರೂಪಿಸಬಾರದು. ಅದರ ಜೊತೆಗೆ ತಮ್ಮ ಸ್ಕೇಲ್ ಬದಲಿಸಿಕೊಳ್ಳಬೇಕು, ವಿಶ್ವದ ಟಾಪ್ ಟೆನ್ ಪಟ್ಟಿಯಲ್ಲಿ ಸ್ಥಾನ ಪಡೆಯಲು ಗುರಿ ಹೊಂದಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 2047ರ ವೇಳೆಗೆ ಭಾರತವನ್ನು ‘ವಿಶ್ವಗುರು’ವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದಾರೆ. “ಸಂವಿಧಾನವು ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ಸೇರ್ಪಡೆ ಎಂಬ ಮೂರು ರೀತಿಯ ಒಳಗೊಳ್ಳುವಿಕೆಯ ಬಗ್ಗೆ ಮಾತನಾಡುತ್ತದೆ. ಇವು ಭಾರತದ ಬೆಳವಣಿಗೆಯ ಕಥೆಗೆ ಮಾರ್ಗದರ್ಶನ ನೀಡುತ್ತವೆ” ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ: ಒಳನುಸುಳುಕೋರರನ್ನು ರಕ್ಷಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ

ದೇಶದ ಆರ್ಥಿಕ ಬೆಳವಣಿಗೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (MSME) ಬೆಂಬಲಿಸುವುದು ನಿರ್ಣಾಯಕವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್, ಅದಾನಿ ಗ್ರೂಪ್ ಮತ್ತು ಟೊರೆಂಟ್ ಗ್ರೂಪ್‌ನಂತಹ ದೈತ್ಯರು ಒಂದು ಹಂತದಲ್ಲಿ MSMEಗಳಾಗಿದ್ದವು ಎಂಬುದನ್ನು ಮರೆಯಬಾರದು ಎಂದು ಅಮಿತ್ ಶಾ ಹೇಳಿದರು.

“ಒಂದು ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಅದರಲ್ಲೂ ವಿಶೇಷವಾಗಿ ಭಾರತದಂತಹ ದೇಶದಲ್ಲಿ MSMEಗಳಿಗೆ ಪ್ರಾಮುಖ್ಯತೆ ನೀಡದಿದ್ದರೆ ಅದು ದೇಶದ ಬೆಳವಣಿಗೆಯ ಕಥೆಯನ್ನು ನಿಲ್ಲಿಸುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು. ಈ ಸಂಘಟಿತ ಸಂಸ್ಥೆಗಳಿಗೆ ಯಾರೂ ಸಾಲ ನೀಡದಿದ್ದರೆ, ಭಾರತಕ್ಕೆ ಇಷ್ಟೊಂದು ಕೈಗಾರಿಕಾ ಸಂಸ್ಥೆಗಳು ಇರುತ್ತಿರಲಿಲ್ಲ ಎಂದು ಅಮಿತ್ ಶಾ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ