AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಕೋಸ್ಟ್​ ಗಾರ್ಡ್​ ಹೆಲಿಕಾಪ್ಟರ್​ ಪತನ ಪ್ರಕರಣ, ಪೈಲಟ್ ಶವ ಪತ್ತೆ

ಸೆಪ್ಟೆಂಬರ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡು ನಾಪತ್ತೆಯಾಗಿದ್ದ ಭಾರತೀಯ ಕೋಸ್ಟ್ ಗಾರ್ಡ್ ಪೈಲಟ್ ಅವರ ಮೃತದೇಹ ಗುಜರಾತ್ ಕರಾವಳಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್‌ನ ಹೆಲಿಕಾಪ್ಟರ್ ತಡರಾತ್ರಿ ಗುಜರಾತ್ ಬಳಿ ಅರಬ್ಬಿ ಸಮುದ್ರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಮೂವರು ಸಿಬ್ಬಂದಿ ನಾಪತ್ತೆಯಾಗಿದ್ದರು. ರಾತ್ರಿ 11 ಗಂಟೆಯ ನಂತರ ಸಂಭವಿಸಿದ ಘಟನೆಯ ನಂತರ ಒಬ್ಬ ಸದಸ್ಯನನ್ನು ರಕ್ಷಿಸಲಾಗಿತ್ತು.

ಭಾರತೀಯ ಕೋಸ್ಟ್​ ಗಾರ್ಡ್​ ಹೆಲಿಕಾಪ್ಟರ್​ ಪತನ ಪ್ರಕರಣ, ಪೈಲಟ್ ಶವ ಪತ್ತೆ
ಹೆಲಿಕಾಪ್ಟರ್​
ನಯನಾ ರಾಜೀವ್
|

Updated on: Oct 11, 2024 | 1:24 PM

Share

ಸೆಪ್ಟೆಂಬರ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡು ನಾಪತ್ತೆಯಾಗಿದ್ದ ಭಾರತೀಯ ಕೋಸ್ಟ್ ಗಾರ್ಡ್ ಪೈಲಟ್ ಅವರ ಮೃತದೇಹ ಗುಜರಾತ್ ಕರಾವಳಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್‌ನ ಹೆಲಿಕಾಪ್ಟರ್ ತಡರಾತ್ರಿ ಗುಜರಾತ್ ಬಳಿ ಅರಬ್ಬಿ ಸಮುದ್ರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಮೂವರು ಸಿಬ್ಬಂದಿ ನಾಪತ್ತೆಯಾಗಿದ್ದರು. ರಾತ್ರಿ 11 ಗಂಟೆಯ ನಂತರ ಸಂಭವಿಸಿದ ಘಟನೆಯ ನಂತರ ಒಬ್ಬ ಸದಸ್ಯನನ್ನು ರಕ್ಷಿಸಲಾಗಿತ್ತು.

ತುರ್ತು ಲ್ಯಾಂಡಿಂಗ್​ ಮಾಡಿದ್ದು, ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ALH) ಎಂದು ಕೋಸ್ಟ್ ಗಾರ್ಡ್ ಹೇಳಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಪೋರಬಂದರ್‌ನ ಮೋಟಾರು ಟ್ಯಾಂಕರ್ ಹರಿ ಲೀಲಾದಿಂದ ಸ್ಥಳಾಂತರಿಸಲಾಗಿದೆ.

ನಾಪತ್ತೆಯಾಗಿರುವ ಸಿಬ್ಬಂದಿ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿತ್ತು. ಇದೀಗ ನಾಪತ್ತೆಯಾಗಿರುವ ಮೂವರ ಪೈಕಿ ಒಬ್ಬರ ಮೃತದೇಹ ಗುಜರಾತ್​ನ ಕರಾವಳಿಯಲ್ಲಿ ಪತ್ತೆಯಾಗಿದೆ.

ಮತ್ತಷ್ಟು ಓದಿ: ಪುಣೆಯಲ್ಲಿ ಮೂವರಿದ್ದ ಹೆಲಿಕಾಪ್ಟರ್​ ಪತನ, ಎಲ್ಲರೂ ಸಾವು

ಅಪಘಾತದ ನಂತರ ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆಯು ಬೃಹತ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಆದರೆ ಅವರು ಒಂದು ತಿಂಗಳ ಕಾಲ ರಾಣಾನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

ಗುಜರಾತ್‌ನ ಪೋರಬಂದರ್‌ನಿಂದ ನೈಋತ್ಯಕ್ಕೆ 55 ಕಿಲೋಮೀಟರ್ ದೂರದಲ್ಲಿ ರಾಣಾ ಅವರ ಅವಶೇಷಗಳು ಗುರುವಾರ ಪತ್ತೆಯಾಗಿವೆ. ಸಂಪೂರ್ಣ ಸೇನಾ ಗೌರವಗಳೊಂದಿಗೆ ಶವಸಂಸ್ಕಾರ ಮಾಡಲಾಗುವುದು ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ