AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಭಾರತೀಯ ಕೋಸ್ಟ್​ಗಾರ್ಡ್​ ಹೆಲಿಕಾಪ್ಟರ್​ , ಮೂವರು ಸಿಬ್ಬಂದಿ ನಾಪತ್ತೆ

ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಈ ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರಲ್ಲಿ ಮೂವರು ನಾಪತ್ತೆಯಾಗಿದ್ದು, ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ. ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಹೆಲಿಕಾಪ್ಟರ್​ ಸಮುದ್ರದ ಸೆಳೆತಕ್ಕೆ ಮುಳುಗಿದ್ದು, ಹಲವು ಅವಶೇಷಗಳು ಪತ್ತೆಯಾಗಿವೆ.

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ  ಭಾರತೀಯ ಕೋಸ್ಟ್​ಗಾರ್ಡ್​ ಹೆಲಿಕಾಪ್ಟರ್​ , ಮೂವರು ಸಿಬ್ಬಂದಿ ನಾಪತ್ತೆ
ಇಂಡಿಯನ್ ಕೋಸ್ಟ್​ಗಾರ್ಡ್​Image Credit source: India TV
ನಯನಾ ರಾಜೀವ್
|

Updated on:Sep 03, 2024 | 12:02 PM

Share

ಗುಜರಾತ್‌ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಇಬ್ಬರು ಪೈಲಟ್‌ಗಳು ಮತ್ತು ಡೈವರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್​ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸಮಯದಲ್ಲಿ ಮುಳುಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೆಲಿಕಾಪ್ಟರ್‌ನಲ್ಲಿ ನಾಲ್ವರು ಜನರಿದ್ದು, ಒಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಹೆಲಿಕಾಪ್ಟರ್ ಅವಶೇಷಗಳೂ ಪತ್ತೆಯಾಗಿವೆ. ರಕ್ಷಿಸಲ್ಪಟ್ಟ ವ್ಯಕ್ತಿಯೂ ಡೈವರ್​ ಆಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ.

ಅರಬ್ಬಿ ಸಮುದ್ರದಲ್ಲಿ ಸಿಲುಕಿರುವ ಹಡಗಿನಿಂದ ಸಹಾಯಕ್ಕಾಗಿ ಸಂದೇಶ ಕಳುಹಿಸಿದಾಗ ಈ ಅವಘಡ ಸಂಭವಿಸಿದೆ ಎಂದು ಕೋಸ್ಟ್ ಗಾರ್ಡ್ ಹೇಳಿದೆ. ಹಡಗಿನಿಂದ ಜನರನ್ನು ಸ್ಥಳಾಂತರಿಸಬೇಕಾಗಿತ್ತು ಮತ್ತು ಈ ಸಮಯದಲ್ಲಿ, ಹೆಲಿಕಾಪ್ಟರ್ ಅಲ್ಲಿಗೆ ತಲುಪಿದಾಗ, ಪತನವಾಗಿದೆ.

ಮತ್ತಷ್ಟು ಓದಿ: ಬಾಂಬ್​ ಬೆದರಿಕೆ: ಹೈದರಾಬಾದ್​ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಸದ್ಯ ನಾಪತ್ತೆಯಾಗಿರುವ ಇಬ್ಬರು ಪೈಲಟ್‌ಗಳು ಮತ್ತು ಡೈವರ್‌ಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಕೋಸ್ಟ್ ಗಾರ್ಡ್ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಿದೆ. ಮೂವರೂ ಶೀಘ್ರದಲ್ಲೇ ಪತ್ತೆಯಾಗುವ ನಿರೀಕ್ಷೆಯಿದೆ.

ಸದ್ಯ ಗುಜರಾತ್ ನಲ್ಲಿ ಭಾರೀ ಮಳೆ ಅನಾಹುತ ಸೃಷ್ಟಿಸಿದೆ. ಇದರಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಪೋರಬಂದರ್ ಮತ್ತು ದ್ವಾರಕಾದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಇಲ್ಲಿ 33 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ.

ಸ್ಥಳಾಂತರಿಸಲು ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ. ಕೋಟ್ ಗಾರ್ಡ್ ಶೋಧ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳನ್ನು ನಿಯೋಜಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:46 am, Tue, 3 September 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?