AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಆಪರೇಷನ್ ಸಿಂಧೂರ್ ಸಮಯದಲ್ಲಾದ ಹಾನಿ ಎಷ್ಟು? ವಾಯುಪಡೆ ಅಧಿಕಾರಿ ಹೇಳಿದ್ದೇನು?

Operation Sindoor: ಆಪರೇಷನ್‌ ಸಿಂಧೂರ್ ಕಾರ್ಯಾಚರಣೆ ವೇಳೆ ಭಾರತೀಯ ವಾಯು ಸೇನೆಯ ಯುದ್ಧ ವಿಮಾನಗಳನ್ನು ಪಾಕಿಸ್ತಾನವು ಹೊಡೆದುರುಳಿಸಿದೆ. ರಾಜಕೀಯ ನಾಯಕತ್ವವು ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ವಾಯು ಸೇನೆ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಭಾನುವಾರ ವಾಗ್ದಾಳಿ ನಡೆಸಿದೆ.

ಭಾರತಕ್ಕೆ ಆಪರೇಷನ್ ಸಿಂಧೂರ್ ಸಮಯದಲ್ಲಾದ ಹಾನಿ ಎಷ್ಟು? ವಾಯುಪಡೆ ಅಧಿಕಾರಿ ಹೇಳಿದ್ದೇನು?
ಆಪರೇಷನ್ ಸಿಂಧೂರ್
ನಯನಾ ರಾಜೀವ್
|

Updated on:Jun 30, 2025 | 10:13 AM

Share

ನವದೆಹಲಿ, ಜೂನ್ 30: ಪಹಲ್ಗಾಮ್ ಭಯೋತ್ಪಾದನಾ ದಾಳಿ(Pahalgam Terror Attack)ಯ ಬಳಿಕ ಭಾರತವು ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್ ಪ್ರಾರಂಭಿಸಿತು. ಮೇ 7ರ ಮಧ್ಯರಾತ್ರಿ ಭಾರತವು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳುಮತ್ತು ಉಡಾವಣಾ ಪ್ಯಾಡ್​ಗಳನ್ನು ನಾಶಪಡಿಸಿತು. ನಂತರ ಪಾಕಿಸ್ತಾನವು ಪ್ರತೀಕಾರ ತೀರಿಸಿಕೊಂಡಿತು.

ಕೆಲವು ದಿನಗಳ ಹಿಂದಷ್ಟೇ ಸಿಡಿಎಸ್ ಅನಿಲ್ ಚೌಹಾಣ್ ಆಪರೇಷನ್ ಸಿಂಧೂರ್‌ನ ಆರಂಭಿಕ ಹಂತದಲ್ಲಿ ಭಾರತವು ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂದು ಹೇಳಿಕೆ ನೀಡಿದ್ದರು. ಈಗ ಭಾರತೀಯ ವಾಯುಪಡೆ ಅಧಿಕಾರಿಯೊಬ್ಬರು ಸಹ ಇದೇ ರೀತಿಯ ಹೇಳಿಕೆ ನೀಡಿದ್ದಾರೆ.

ಭಾರತದ ರಾಜಕೀಯ ನಾಯಕತ್ವವು ಪಾಕಿಸ್ತಾನದಲ್ಲಿರುವ ಮಿಲಿಟರಿ ಸ್ಥಾಪನೆಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಬಾರದು ಎಂದು ಹೇಳಿತ್ತು. ಆದ್ದರಿಂದ, ಭಾರತವು ಆರಂಭಿಕ ಹಂತದಲ್ಲಿ ಕೆಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿತು ಎಂದು ಕ್ಯಾಪ್ಟನ್ ಶಿವ ಕುಮಾರ್ ಇಂಡೋನೇಷ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು. ಜೂನ್ ಆರಂಭದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದರು.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಕ್ಯಾಪ್ಟನ್ ಶಿವ ಕುಮಾರ್  ಕರ್ನಲ್ ಶ್ರೇಣಿಯ ಅಧಿಕಾರಿ. ಮೇ 31 ರಂದು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಸಿಂಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಇದೇ ರೀತಿಯ ಹೇಳಿಕೆ ನೀಡಿದ್ದರು. ಭಾರತೀಯ ವಾಯುಪಡೆಯು ನಷ್ಟ ಅನುಭವಿಸಿದೆ ಎಂದು ಚೌಹಾಣ್ ಆರಂಭದಲ್ಲಿ ಒಪ್ಪಿಕೊಂಡಿದ್ದರು. ಆದರೆ ಅನಿಲ್ ಚೌಹಾಣ್ ಹೊಡೆದುರುಳಿಸಿದ ಯುದ್ಧ ವಿಮಾನಗಳ ಸಂಖ್ಯೆಯನ್ನು ನೀಡಿರಲಿಲ್ಲ.

ಮತ್ತಷ್ಟು ಓದಿ: ಪಹಲ್ಗಾಮ್​ ದಾಳಿಗೆ ಒಂದು ತಿಂಗಳು, ಆಪರೇಷನ್​ ಸಿಂಧೂರ್​ನಿಂದ ಸರ್ವಪಕ್ಷ ಸಂಸದರ ನಿಯೋಗ ರಚನೆವರೆಗೆ ಇಲ್ಲಿದೆ ಮಾಹಿತಿ

ಆಪರೇಷನ್ ಸಿಂಧೂರ್ ಸಮಯದಲ್ಲಿ ಐಎಎಫ್ ಎಷ್ಟು ನಷ್ಟ ಅನುಭವಿಸಿದೆ ಎಂದು ಕೇಂದ್ರ ಸರ್ಕಾರ ಇನ್ನೂ ಹೇಳಿಲ್ಲ. ಮೇ 7 ರಂದು ಮೂರು ರಫೇಲ್ ಸೇರಿದಂತೆ ಆರು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಆದರೆ ಪಾಕಿಸ್ತಾನದ ಈ ಹೇಳಿಕೆ ಸಂಪೂರ್ಣವಾಗಿ ತಪ್ಪು ಎಂದು ಸಿಡಿಎಸ್ ಅನಿಲ್ ಚೌಹಾಣ್ ಸಿಂಗಾಪುರ ಕಾರ್ಯಕ್ರಮದಲ್ಲಿ ಸ್ಪಷ್ಟಪಡಿಸಿದ್ದರು.

ಕ್ಯಾಪ್ಟನ್ ಶಿವಕುಮಾರ್ ಅವರ ಹೇಳಿಕೆಯು ಕಾಂಗ್ರೆಸ್‌ಗೆ ಮತ್ತೊಮ್ಮೆ ಮೋದಿ ಸರ್ಕಾರವನ್ನು ಗುರಿಯಾಗಿಸಲು ಅವಕಾಶವನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು  ಏನು ಮರೆಮಾಡುತ್ತಿದ್ದಾರೆ? ಎಂದು ಕಾಂಗ್ರೆಸ್ ಕೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷಗಳ ಸಭೆಯನ್ನು ಕರೆದು ಅದರ ನೇತೃತ್ವ ವಹಿಸಿಕೊಳ್ಳಲು ಯಾಕೆ ನಿರಾಕರಿಸುತ್ತಿದ್ದಾರೆ. ಪಹಲ್ಗಾಮ್‌ ದಾಳಿ ಮತ್ತು ‘ಪರೇಷನ್‌ ಸಿಂಧೂರದ ಕುರಿತು ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಬೇಕು ಎನ್ನುವ ವಿರೋಧ ಪಕ್ಷಗಳ ಆಗ್ರಹವನ್ನು ಯಾಕಾಗಿ ಒಪ್ಪಿಕೊಳ್ಳುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಪ್ರಶ್ನಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಏನು ವಿವರಣೆ ನೀಡಿತು?

ಕ್ಯಾಪ್ಟನ್ ಶಿವಕುಮಾರ್ ಅವರ ಹೇಳಿಕೆ ಬೆಳಕಿಗೆ ಬಂದ ಬಳಿಕ, ಕಾಂಗ್ರೆಸ್ ಈಗ ಸರ್ಕಾರದ ಮೇಲೆ ದಾಳಿ ಮಾಡಿದೆ. ಇಂಡೋನೇಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಕ್ಯಾಪ್ಟನ್ ಶಿವಕುಮಾರ್ ಅವರ ಹೇಳಿಕೆಗೆ ಸ್ಪಷ್ಟನೆ ನೀಡಿದೆ. ಕ್ಯಾಪ್ಟನ್ ಶಿವಕುಮಾರ್ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮಾಧ್ಯಮ ವರದಿಗಳು ಅವರ ಹೇಳಿಕೆಯ ಉದ್ದೇಶ ಮತ್ತು ಮಹತ್ವವನ್ನು ತಪ್ಪಾಗಿ ಪ್ರಸ್ತುತಪಡಿಸಿವೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಕ್ಯಾಪ್ಟನ್‌ ಶಿವಕುಮಾರ್‌ ಅವರು ಹೇಳಿದ್ದಾರೆ ಎನ್ನಲಾದ ಹೇಳಿಕೆ ಕುರಿತು ಕೇಂದ್ರ ಸರ್ಕಾರವು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:06 am, Mon, 30 June 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ