AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

Sputnik Light: ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ
ಸ್ಪುಟ್ನಿಕ್ ಲೈಟ್​
TV9 Web
| Edited By: |

Updated on: Jul 01, 2021 | 12:22 PM

Share

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಮೊದಲ ಡೋಸ್​​ನ ಪರಿಷ್ಕೃತ ಲಸಿಕೆಯಾದ ಸ್ಪುಟ್ನಿಕ್​ ಲೈಟ್​ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. ಸ್ಪುಟ್ನಿಕ್​ ಲೈಟ್​ ಒಂದೇ ಡೋಸ್​​​ನ ಲಸಿಕೆಯಾಗಿದ್ದು, ಇದನ್ನು ಪಡೆದವರು ಎರಡನೇ ಡೋಸ್​ ಪಡೆಯಬೇಕಿಲ್ಲ. ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಹೈದರಾಬಾದ್​​ನ ಡಾ. ರೆಡ್ಡಿ ಪ್ರಯೋಗಾಲಯ ಅನುಮತಿ ಕೇಳಿತ್ತು. ಆದರೆ ಕೇಂದ್ರದ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಡಿಸಿಜಿಐ ನಿರಾಕರಿಸಿದೆ.

ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳೊಂದಿಗೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಎರಡು ಡೋಸ್​ಗಳನ್ನು ನೀಡಲಾಗುತ್ತಿದೆ. ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರದ ಡಿಸಿಜಿಐ ಏಪ್ರಿಲ್​​ನಲ್ಲೇ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್​ನ ಡಾ. ರೆಡ್ಡೀಸ್​ ಲ್ಯಾಬೋರೇಟರೀಸ್​ ಉತ್ಪಾದನೆ ಮಾಡುತ್ತಿದೆ.

ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆ ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿದ್ದು, ಅದನ್ನು ಭಾರತಕ್ಕೆ ತರಲು ನಮ್ಮ ರೆಡ್ಡೀಸ್ ಪ್ರಯೋಗಾಲಯ ಡಿಸಿಐಜಿನೊಂದಿಗೆ ಸೇರಿ ಪ್ರಯತ್ನ ಮಾಡುತ್ತಿದೆ ಎಂದು ಲ್ಯಾಬೋರೇಟರಿಯ ಸಿಇಒ ದೀಪಕ್​ ಸಪ್ರಾ ಇಂಡಿಯಾ ಟುಡೆಗೆ ತಿಳಿಸಿದ್ದಾರೆ. ಹೇಗಾದರೂ ಈ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾದರೆ ದೇಶದ ಕೊರೊನಾ ಲಸಿಕೆ ಅಭಿಯಾನ ತುಂಬ ವೇಗವಾಗಿ ಸಾಗುತ್ತದೆ. ಇದು ಒಂದೇ ಡೋಸ್ ಆಗಿರುವುದಿಂರ ಒಂದೇ ಬಾರಿಗೆ ಮುಕ್ತಾಯವಾಗಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ