AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

Sputnik Light: ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ
ಸ್ಪುಟ್ನಿಕ್ ಲೈಟ್​
TV9 Web
| Edited By: |

Updated on: Jul 01, 2021 | 12:22 PM

Share

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಮೊದಲ ಡೋಸ್​​ನ ಪರಿಷ್ಕೃತ ಲಸಿಕೆಯಾದ ಸ್ಪುಟ್ನಿಕ್​ ಲೈಟ್​ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. ಸ್ಪುಟ್ನಿಕ್​ ಲೈಟ್​ ಒಂದೇ ಡೋಸ್​​​ನ ಲಸಿಕೆಯಾಗಿದ್ದು, ಇದನ್ನು ಪಡೆದವರು ಎರಡನೇ ಡೋಸ್​ ಪಡೆಯಬೇಕಿಲ್ಲ. ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಹೈದರಾಬಾದ್​​ನ ಡಾ. ರೆಡ್ಡಿ ಪ್ರಯೋಗಾಲಯ ಅನುಮತಿ ಕೇಳಿತ್ತು. ಆದರೆ ಕೇಂದ್ರದ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಡಿಸಿಜಿಐ ನಿರಾಕರಿಸಿದೆ.

ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳೊಂದಿಗೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಎರಡು ಡೋಸ್​ಗಳನ್ನು ನೀಡಲಾಗುತ್ತಿದೆ. ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರದ ಡಿಸಿಜಿಐ ಏಪ್ರಿಲ್​​ನಲ್ಲೇ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್​ನ ಡಾ. ರೆಡ್ಡೀಸ್​ ಲ್ಯಾಬೋರೇಟರೀಸ್​ ಉತ್ಪಾದನೆ ಮಾಡುತ್ತಿದೆ.

ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆ ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿದ್ದು, ಅದನ್ನು ಭಾರತಕ್ಕೆ ತರಲು ನಮ್ಮ ರೆಡ್ಡೀಸ್ ಪ್ರಯೋಗಾಲಯ ಡಿಸಿಐಜಿನೊಂದಿಗೆ ಸೇರಿ ಪ್ರಯತ್ನ ಮಾಡುತ್ತಿದೆ ಎಂದು ಲ್ಯಾಬೋರೇಟರಿಯ ಸಿಇಒ ದೀಪಕ್​ ಸಪ್ರಾ ಇಂಡಿಯಾ ಟುಡೆಗೆ ತಿಳಿಸಿದ್ದಾರೆ. ಹೇಗಾದರೂ ಈ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾದರೆ ದೇಶದ ಕೊರೊನಾ ಲಸಿಕೆ ಅಭಿಯಾನ ತುಂಬ ವೇಗವಾಗಿ ಸಾಗುತ್ತದೆ. ಇದು ಒಂದೇ ಡೋಸ್ ಆಗಿರುವುದಿಂರ ಒಂದೇ ಬಾರಿಗೆ ಮುಕ್ತಾಯವಾಗಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?