AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

Sputnik Light: ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ
ಸ್ಪುಟ್ನಿಕ್ ಲೈಟ್​
TV9 Web
| Edited By: |

Updated on: Jul 01, 2021 | 12:22 PM

Share

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಮೊದಲ ಡೋಸ್​​ನ ಪರಿಷ್ಕೃತ ಲಸಿಕೆಯಾದ ಸ್ಪುಟ್ನಿಕ್​ ಲೈಟ್​ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. ಸ್ಪುಟ್ನಿಕ್​ ಲೈಟ್​ ಒಂದೇ ಡೋಸ್​​​ನ ಲಸಿಕೆಯಾಗಿದ್ದು, ಇದನ್ನು ಪಡೆದವರು ಎರಡನೇ ಡೋಸ್​ ಪಡೆಯಬೇಕಿಲ್ಲ. ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಹೈದರಾಬಾದ್​​ನ ಡಾ. ರೆಡ್ಡಿ ಪ್ರಯೋಗಾಲಯ ಅನುಮತಿ ಕೇಳಿತ್ತು. ಆದರೆ ಕೇಂದ್ರದ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಡಿಸಿಜಿಐ ನಿರಾಕರಿಸಿದೆ.

ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳೊಂದಿಗೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಎರಡು ಡೋಸ್​ಗಳನ್ನು ನೀಡಲಾಗುತ್ತಿದೆ. ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರದ ಡಿಸಿಜಿಐ ಏಪ್ರಿಲ್​​ನಲ್ಲೇ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್​ನ ಡಾ. ರೆಡ್ಡೀಸ್​ ಲ್ಯಾಬೋರೇಟರೀಸ್​ ಉತ್ಪಾದನೆ ಮಾಡುತ್ತಿದೆ.

ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆ ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿದ್ದು, ಅದನ್ನು ಭಾರತಕ್ಕೆ ತರಲು ನಮ್ಮ ರೆಡ್ಡೀಸ್ ಪ್ರಯೋಗಾಲಯ ಡಿಸಿಐಜಿನೊಂದಿಗೆ ಸೇರಿ ಪ್ರಯತ್ನ ಮಾಡುತ್ತಿದೆ ಎಂದು ಲ್ಯಾಬೋರೇಟರಿಯ ಸಿಇಒ ದೀಪಕ್​ ಸಪ್ರಾ ಇಂಡಿಯಾ ಟುಡೆಗೆ ತಿಳಿಸಿದ್ದಾರೆ. ಹೇಗಾದರೂ ಈ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾದರೆ ದೇಶದ ಕೊರೊನಾ ಲಸಿಕೆ ಅಭಿಯಾನ ತುಂಬ ವೇಗವಾಗಿ ಸಾಗುತ್ತದೆ. ಇದು ಒಂದೇ ಡೋಸ್ ಆಗಿರುವುದಿಂರ ಒಂದೇ ಬಾರಿಗೆ ಮುಕ್ತಾಯವಾಗಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ