AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

Sputnik Light: ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ
ಸ್ಪುಟ್ನಿಕ್ ಲೈಟ್​
TV9 Web
| Edited By: |

Updated on: Jul 01, 2021 | 12:22 PM

Share

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಮೊದಲ ಡೋಸ್​​ನ ಪರಿಷ್ಕೃತ ಲಸಿಕೆಯಾದ ಸ್ಪುಟ್ನಿಕ್​ ಲೈಟ್​ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. ಸ್ಪುಟ್ನಿಕ್​ ಲೈಟ್​ ಒಂದೇ ಡೋಸ್​​​ನ ಲಸಿಕೆಯಾಗಿದ್ದು, ಇದನ್ನು ಪಡೆದವರು ಎರಡನೇ ಡೋಸ್​ ಪಡೆಯಬೇಕಿಲ್ಲ. ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಹೈದರಾಬಾದ್​​ನ ಡಾ. ರೆಡ್ಡಿ ಪ್ರಯೋಗಾಲಯ ಅನುಮತಿ ಕೇಳಿತ್ತು. ಆದರೆ ಕೇಂದ್ರದ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಡಿಸಿಜಿಐ ನಿರಾಕರಿಸಿದೆ.

ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳೊಂದಿಗೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಎರಡು ಡೋಸ್​ಗಳನ್ನು ನೀಡಲಾಗುತ್ತಿದೆ. ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರದ ಡಿಸಿಜಿಐ ಏಪ್ರಿಲ್​​ನಲ್ಲೇ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್​ನ ಡಾ. ರೆಡ್ಡೀಸ್​ ಲ್ಯಾಬೋರೇಟರೀಸ್​ ಉತ್ಪಾದನೆ ಮಾಡುತ್ತಿದೆ.

ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆ ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿದ್ದು, ಅದನ್ನು ಭಾರತಕ್ಕೆ ತರಲು ನಮ್ಮ ರೆಡ್ಡೀಸ್ ಪ್ರಯೋಗಾಲಯ ಡಿಸಿಐಜಿನೊಂದಿಗೆ ಸೇರಿ ಪ್ರಯತ್ನ ಮಾಡುತ್ತಿದೆ ಎಂದು ಲ್ಯಾಬೋರೇಟರಿಯ ಸಿಇಒ ದೀಪಕ್​ ಸಪ್ರಾ ಇಂಡಿಯಾ ಟುಡೆಗೆ ತಿಳಿಸಿದ್ದಾರೆ. ಹೇಗಾದರೂ ಈ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾದರೆ ದೇಶದ ಕೊರೊನಾ ಲಸಿಕೆ ಅಭಿಯಾನ ತುಂಬ ವೇಗವಾಗಿ ಸಾಗುತ್ತದೆ. ಇದು ಒಂದೇ ಡೋಸ್ ಆಗಿರುವುದಿಂರ ಒಂದೇ ಬಾರಿಗೆ ಮುಕ್ತಾಯವಾಗಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ