AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

Sputnik Light: ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ.

ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ
ಸ್ಪುಟ್ನಿಕ್ ಲೈಟ್​
TV9 Web
| Edited By: |

Updated on: Jul 01, 2021 | 12:22 PM

Share

ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಮೊದಲ ಡೋಸ್​​ನ ಪರಿಷ್ಕೃತ ಲಸಿಕೆಯಾದ ಸ್ಪುಟ್ನಿಕ್​ ಲೈಟ್​ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. ಸ್ಪುಟ್ನಿಕ್​ ಲೈಟ್​ ಒಂದೇ ಡೋಸ್​​​ನ ಲಸಿಕೆಯಾಗಿದ್ದು, ಇದನ್ನು ಪಡೆದವರು ಎರಡನೇ ಡೋಸ್​ ಪಡೆಯಬೇಕಿಲ್ಲ. ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಹೈದರಾಬಾದ್​​ನ ಡಾ. ರೆಡ್ಡಿ ಪ್ರಯೋಗಾಲಯ ಅನುಮತಿ ಕೇಳಿತ್ತು. ಆದರೆ ಕೇಂದ್ರದ ತಜ್ಞರ ಸಮಿತಿ ಶಿಫಾರಸ್ಸಿನ ಅನ್ವಯ ಡಿಸಿಜಿಐ ನಿರಾಕರಿಸಿದೆ.

ಕೇಂದ್ರ ಸರ್ಕಾರ ರಚಿಸಿರುವ ಕೊವಿಡ್​ 19 ಸಂಬಂಧಿತ ವಿಷಯ ತಜ್ಞರ ಸಮಿತಿ ಡಾ.ರೆಡ್ಡಿ ಲ್ಯಾಬೋರೇಟರೀಸ್​ ಸಲ್ಲಿಸಿದ್ದ ಅರ್ಜಿಯ ಪರಿಶೀಲನೆ ಮಾಡಿತ್ತು. ಈ ಸ್ಪುಟ್ನಿಕ್​​​ ಲೈಟ್​ ಲಸಿಕೆಗೆ ಭಾರತದಲ್ಲಿ ಇನ್ನೂ ಅನುಮೋದನೆ ಸಿಕ್ಕಿಲ್ಲ. ಒಂದೊಮ್ಮೆ ಈ ಲಸಿಕೆಗೆ ಭಾರತದಲ್ಲಿ ಬಳಕೆಗೆ ಅನುಮೋದನೆ ಸಿಕ್ಕರೆ ಒಂದು ಡೋಸ್​ಗೆ 730 ರೂ.ಇರಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳೊಂದಿಗೆ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆಯ ಎರಡು ಡೋಸ್​ಗಳನ್ನು ನೀಡಲಾಗುತ್ತಿದೆ. ಸ್ಪುಟ್ನಿಕ್ ವಿ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರದ ಡಿಸಿಜಿಐ ಏಪ್ರಿಲ್​​ನಲ್ಲೇ ಅನುಮೋದನೆ ನೀಡಿದೆ. ಈ ಲಸಿಕೆಯನ್ನು ಭಾರತದಲ್ಲಿ ಹೈದರಾಬಾದ್​ನ ಡಾ. ರೆಡ್ಡೀಸ್​ ಲ್ಯಾಬೋರೇಟರೀಸ್​ ಉತ್ಪಾದನೆ ಮಾಡುತ್ತಿದೆ.

ರಷ್ಯಾದ ಸ್ಪುಟ್ನಿಕ್​ ಲೈಟ್​ ಲಸಿಕೆ ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿದ್ದು, ಅದನ್ನು ಭಾರತಕ್ಕೆ ತರಲು ನಮ್ಮ ರೆಡ್ಡೀಸ್ ಪ್ರಯೋಗಾಲಯ ಡಿಸಿಐಜಿನೊಂದಿಗೆ ಸೇರಿ ಪ್ರಯತ್ನ ಮಾಡುತ್ತಿದೆ ಎಂದು ಲ್ಯಾಬೋರೇಟರಿಯ ಸಿಇಒ ದೀಪಕ್​ ಸಪ್ರಾ ಇಂಡಿಯಾ ಟುಡೆಗೆ ತಿಳಿಸಿದ್ದಾರೆ. ಹೇಗಾದರೂ ಈ ಸ್ಪುಟ್ನಿಕ್​ ಲೈಟ್​ ಭಾರತದಲ್ಲಿ ಬಳಕೆಗೆ ಲಭ್ಯವಾದರೆ ದೇಶದ ಕೊರೊನಾ ಲಸಿಕೆ ಅಭಿಯಾನ ತುಂಬ ವೇಗವಾಗಿ ಸಾಗುತ್ತದೆ. ಇದು ಒಂದೇ ಡೋಸ್ ಆಗಿರುವುದಿಂರ ಒಂದೇ ಬಾರಿಗೆ ಮುಕ್ತಾಯವಾಗಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಕೆಎಸ್​ಆರ್​ ರೈಲ್ವೆ ನಿಲ್ದಾಣದಲ್ಲಿ ಭಾರತದ ಮೊದಲ ಸುರಂಗ ಅಕ್ವೇರಿಯಂ ಆರಂಭ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ