AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​​ನಲ್ಲಿರುವ ಕನ್ನಡಿಗರೆ ಗಮನಿಸಿ… ಭಾರತೀಯ ದೂತಾವಾಸದ ಸಲಹೆಗಳಿವು; ಇಲ್ಲಿದೆ ವಾಟ್ಸಾಪ್, ಟೆಲಿಗ್ರಾಮ್ ಲಿಂಕ್

Israel Iran conflict: ಮಧ್ಯ ಪ್ರಾಚ್ಯದಲ್ಲಿ ಬಿಕ್ಕಟ್ಟು ಉದ್ಭವಿಸಿರುವುದರಿಂದ ಇರಾನ್​​ನಲ್ಲಿರುವ ಭಾರತೀಯರ ಸುರಕ್ಷತೆಗೆ ಭಾರತ ಕ್ರಮ ಕೈಗೊಂಡಿದೆ. ಅನಗತ್ಯವಾಗಿ ಓಡಾಟ ನಡೆಸಬಾರದು, ದೂತಾವಾಸ ಕಚೇರಿಯೊಂದಿಗೆ ಸದಾ ಸಂಪರ್ಕದಲ್ಲಿರಬೇಕು ಎಂಬಿತ್ಯಾದಿ ಅಂಶಗಳಿರುವ ಅಡ್ವೈಸರಿಯನ್ನು ಬಿಡುಗಡೆ ಮಾಡಲಾಗಿದೆ. ಇರಾನ್ ದೇಶದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಾರತೀಯರಿದ್ದಾರೆ. ಕನ್ನಡಿಗರೂ ಇದ್ದಾರೆ.

ಇರಾನ್​​ನಲ್ಲಿರುವ ಕನ್ನಡಿಗರೆ ಗಮನಿಸಿ... ಭಾರತೀಯ ದೂತಾವಾಸದ ಸಲಹೆಗಳಿವು; ಇಲ್ಲಿದೆ ವಾಟ್ಸಾಪ್, ಟೆಲಿಗ್ರಾಮ್ ಲಿಂಕ್
ಇಸ್ರೇಲ್ ಮತ್ತು ಇರಾನ್ ಮಧ್ಯೆ ಸಂಘರ್ಷ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 15, 2025 | 6:51 PM

Share

ನವದೆಹಲಿ, ಜೂನ್ 15: ಇಸ್ರೇಲ್ ಮತ್ತು ಇರಾನ್ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಭಾರತ ಚಿಂತಾಕ್ರಾಂತವಾಗಿದೆ. ಇರಾನ್ ಮೇಲೆ ಇಸ್ರೇಲ್ ವ್ಯಾಪಕ ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇರಾನ್​​ನಲ್ಲಿರುವ ಭಾರತೀಯರನ್ನು ರಕ್ಷಿಸಲು ಮತ್ತು ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಇರಾನ್​​ನಲ್ಲಿರುವ ಭಾರತೀಯ ದೂತಾವಾಸ ಕಚೇರಿಯು ವಿವಿಧ ಸಹಾಯವಾಣಿಗಳನ್ನು ಬಿಡುಗಡೆ ಮಾಡಿದೆ.

ಇರಾನ್​​ನಲ್ಲಿ ಬಹಳಷ್ಟು ಭಾರತೀಯರಿದ್ದಾರೆ. ಕನ್ನಡಿಗರೂ ಕೂಡ ಸಾಕಷ್ಟಿದ್ದಾರೆ. ಅಲ್ಲಿರುವ ಭಾರತೀಯರು ಆತಂಕ ಪಡದೆ ತಾವು ನೀಡುವ ಸೂಚನೆ ಪ್ರಕಾರ ನಡೆದುಕೊಳ್ಳಬೇಕೆಂದು ಇಂಡಿಯನ್ ಎಂಬಸಿ ತಿಳಿಸಿದೆ. ಎಕ್ಸ್ ಪ್ಲಾಟ್​​ಫಾರ್ಮ್​​ನಲ್ಲಿ ಸರಣಿ ಟ್ವೀಟ್ ಮಾಡಿರುವ ದೂತಾವಾಸ ಕಚೇರಿಯ ಅಕೌಂಟ್, ವಿವಿಧ ಸಹಾಯವಾಣಿ ನಂಬರ್ ಹಾಗೂ ಟೆಲಿಗ್ರಾಮ್ ಲಿಂಕ್ ಅನ್ನು ಒದಗಿಸಿದೆ.

ಇದನ್ನೂ ಓದಿ: ಪಾಕಿಸ್ತಾನ 3 ರಫೇಲ್ ಹೊಡೆದಿಲ್ಲ; ವಾಸ್ತವ ಗೊತ್ತಾದರೆ ಅಚ್ಚರಿ ಆಗಬಹುದು: ಡಸ್ಸೋ ಏವಿಯೇಶನ್ ಸಿಇಒ

‘ಇರಾನ್​​ನಲ್ಲಿರುವ ಈಗಿನ ಸಂದರ್ಭವನ್ನು ಗಮನಿಸಿ, ಇರಾನ್​ನಲ್ಲಿರುವ ಭಾರತೀಯ ನಾಗರಿಕರು ಹಾಗೂ ಭಾರ ಮೂಲದ ವ್ಯಕ್ತಿಗಳು ದೂತಾವಾಸ ಕಚೇರಿಯೊಂದಿಗೆ ಸಂಪರ್ಕದಲ್ಲಿ ಇರಬೇಕು. ಇರಾನ್​​ನಲ್ಲಿ ಅನಗತ್ಯವಾಗಿ ಓಡಾಡುವುದು ಇತ್ಯಾದಿಯನ್ನು ಮಾಡಬಾರದು. ಎಂಬಸಿಯ ಸೋಷಿಯಲ್ ಮೀಡಿಯಾ ಪೇಜ್​​ಗಳಲ್ಲಿ ಪ್ರಕಟವಾಗುವ ಮಾಹಿತಿಯನ್ನು ಗಮನಿಸುತ್ತಿರಬೇಕು’ ಎಂದು ಅಡ್ವೈಸರಿಯನ್ನು ಬಿಡುಗಡೆ ಮಾಡಲಾಗಿದೆ.

ಇರಾನ್​​ನಲ್ಲಿರುವ ಭಾರತೀಯ ನಾಗರಿಕರಿಗೆ ತುರ್ತು ಸಂಪರ್ಕ ಸಂಖ್ಯೆ:

ಫೋನ್ ಕರೆ ಸಂಪರ್ಕ:

  • +98 9128109115
  • +98 9128109109

ವಾಟ್ಸಾಪ್ ಸಂಪರ್ಕ:

  • +98 9010144557
  • +98 9015993320
  • +91 8086871709

ಅಗತ್ಯ ಮಾಹಿತಿಗೆ ಟೆಲಿಗ್ರಾಮ್ ಚಾನಲ್

ಪರಿಸ್ಥಿತಿ ಬಗ್ಗೆ ಕಾಲಕಾಲಕ್ಕೆ ಅಪ್​ಡೇಟ್ ಮಾಡುವ ಮತ್ತು ಸಲಹೆ ನೀಡುವ ಕಾರ್ಯಕ್ಕಾಗಿ ಭಾರತೀಯ ದೂತಾವಾಸ ಕಚೇರಿಯು ಟೆಲಿಗ್ರಾಮ್ ಲಿಂಕ್​ವೊಂದನ್ನು ರಚಿಸಿದೆ. ಎಲ್ಲರೂ ಕೂಡ ಈ ಲಿಂಕ್ ಅನ್ನು ಫಾಲೋ ಮಾಡಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಇರಾನ್- ಇಸ್ರೇಲ್ ವಾರ್​: ಇಸ್ರೇಲ್​ನಲ್ಲಿ ಸಿಲುಕಿದ ಕಾಂಗ್ರೆಸ್, ಬಿಜೆಪಿ ಮತ್ತು JDS ನಿಯೋಗ

ಇರಾನ್​​ನಿಂದ ಸಂಭಾವ್ಯ ದಾಳಿ ಆಗಬಹುದು ಎಂದು ಮುನ್ನೆಚ್ಚರಿಕೆಯಾಗಿ ಭಾರತವು ಇರಾನ್​ನ ಮಿಲಿಟರಿ ಮತ್ತು ಪರಮಾಣು ಘಟಕಗಳ ಮೇಲೆ ವಾಯುದಾಳಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ದೇಶವು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇಸ್ರೇಲ್​ನ ವಿವಿಧ ನಗರಗಳ ಮೇಲೆ ಹಾರಿಸಿತ್ತು. ಇದಕ್ಕೆ ಇಸ್ರೇಲ್ ಮತ್ತೆ ಪ್ರತಿದಾಳಿ ನಡೆಸುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ