AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರಾನ್​​ನಲ್ಲಿರುವ ಕನ್ನಡಿಗರೆ ಗಮನಿಸಿ… ಭಾರತೀಯ ದೂತಾವಾಸದ ಸಲಹೆಗಳಿವು; ಇಲ್ಲಿದೆ ವಾಟ್ಸಾಪ್, ಟೆಲಿಗ್ರಾಮ್ ಲಿಂಕ್

Israel Iran conflict: ಮಧ್ಯ ಪ್ರಾಚ್ಯದಲ್ಲಿ ಬಿಕ್ಕಟ್ಟು ಉದ್ಭವಿಸಿರುವುದರಿಂದ ಇರಾನ್​​ನಲ್ಲಿರುವ ಭಾರತೀಯರ ಸುರಕ್ಷತೆಗೆ ಭಾರತ ಕ್ರಮ ಕೈಗೊಂಡಿದೆ. ಅನಗತ್ಯವಾಗಿ ಓಡಾಟ ನಡೆಸಬಾರದು, ದೂತಾವಾಸ ಕಚೇರಿಯೊಂದಿಗೆ ಸದಾ ಸಂಪರ್ಕದಲ್ಲಿರಬೇಕು ಎಂಬಿತ್ಯಾದಿ ಅಂಶಗಳಿರುವ ಅಡ್ವೈಸರಿಯನ್ನು ಬಿಡುಗಡೆ ಮಾಡಲಾಗಿದೆ. ಇರಾನ್ ದೇಶದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಾರತೀಯರಿದ್ದಾರೆ. ಕನ್ನಡಿಗರೂ ಇದ್ದಾರೆ.

ಇರಾನ್​​ನಲ್ಲಿರುವ ಕನ್ನಡಿಗರೆ ಗಮನಿಸಿ... ಭಾರತೀಯ ದೂತಾವಾಸದ ಸಲಹೆಗಳಿವು; ಇಲ್ಲಿದೆ ವಾಟ್ಸಾಪ್, ಟೆಲಿಗ್ರಾಮ್ ಲಿಂಕ್
ಇಸ್ರೇಲ್ ಮತ್ತು ಇರಾನ್ ಮಧ್ಯೆ ಸಂಘರ್ಷ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 15, 2025 | 6:51 PM

Share

ನವದೆಹಲಿ, ಜೂನ್ 15: ಇಸ್ರೇಲ್ ಮತ್ತು ಇರಾನ್ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಬಗ್ಗೆ ಭಾರತ ಚಿಂತಾಕ್ರಾಂತವಾಗಿದೆ. ಇರಾನ್ ಮೇಲೆ ಇಸ್ರೇಲ್ ವ್ಯಾಪಕ ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇರಾನ್​​ನಲ್ಲಿರುವ ಭಾರತೀಯರನ್ನು ರಕ್ಷಿಸಲು ಮತ್ತು ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಇರಾನ್​​ನಲ್ಲಿರುವ ಭಾರತೀಯ ದೂತಾವಾಸ ಕಚೇರಿಯು ವಿವಿಧ ಸಹಾಯವಾಣಿಗಳನ್ನು ಬಿಡುಗಡೆ ಮಾಡಿದೆ.

ಇರಾನ್​​ನಲ್ಲಿ ಬಹಳಷ್ಟು ಭಾರತೀಯರಿದ್ದಾರೆ. ಕನ್ನಡಿಗರೂ ಕೂಡ ಸಾಕಷ್ಟಿದ್ದಾರೆ. ಅಲ್ಲಿರುವ ಭಾರತೀಯರು ಆತಂಕ ಪಡದೆ ತಾವು ನೀಡುವ ಸೂಚನೆ ಪ್ರಕಾರ ನಡೆದುಕೊಳ್ಳಬೇಕೆಂದು ಇಂಡಿಯನ್ ಎಂಬಸಿ ತಿಳಿಸಿದೆ. ಎಕ್ಸ್ ಪ್ಲಾಟ್​​ಫಾರ್ಮ್​​ನಲ್ಲಿ ಸರಣಿ ಟ್ವೀಟ್ ಮಾಡಿರುವ ದೂತಾವಾಸ ಕಚೇರಿಯ ಅಕೌಂಟ್, ವಿವಿಧ ಸಹಾಯವಾಣಿ ನಂಬರ್ ಹಾಗೂ ಟೆಲಿಗ್ರಾಮ್ ಲಿಂಕ್ ಅನ್ನು ಒದಗಿಸಿದೆ.

ಇದನ್ನೂ ಓದಿ: ಪಾಕಿಸ್ತಾನ 3 ರಫೇಲ್ ಹೊಡೆದಿಲ್ಲ; ವಾಸ್ತವ ಗೊತ್ತಾದರೆ ಅಚ್ಚರಿ ಆಗಬಹುದು: ಡಸ್ಸೋ ಏವಿಯೇಶನ್ ಸಿಇಒ

‘ಇರಾನ್​​ನಲ್ಲಿರುವ ಈಗಿನ ಸಂದರ್ಭವನ್ನು ಗಮನಿಸಿ, ಇರಾನ್​ನಲ್ಲಿರುವ ಭಾರತೀಯ ನಾಗರಿಕರು ಹಾಗೂ ಭಾರ ಮೂಲದ ವ್ಯಕ್ತಿಗಳು ದೂತಾವಾಸ ಕಚೇರಿಯೊಂದಿಗೆ ಸಂಪರ್ಕದಲ್ಲಿ ಇರಬೇಕು. ಇರಾನ್​​ನಲ್ಲಿ ಅನಗತ್ಯವಾಗಿ ಓಡಾಡುವುದು ಇತ್ಯಾದಿಯನ್ನು ಮಾಡಬಾರದು. ಎಂಬಸಿಯ ಸೋಷಿಯಲ್ ಮೀಡಿಯಾ ಪೇಜ್​​ಗಳಲ್ಲಿ ಪ್ರಕಟವಾಗುವ ಮಾಹಿತಿಯನ್ನು ಗಮನಿಸುತ್ತಿರಬೇಕು’ ಎಂದು ಅಡ್ವೈಸರಿಯನ್ನು ಬಿಡುಗಡೆ ಮಾಡಲಾಗಿದೆ.

ಇರಾನ್​​ನಲ್ಲಿರುವ ಭಾರತೀಯ ನಾಗರಿಕರಿಗೆ ತುರ್ತು ಸಂಪರ್ಕ ಸಂಖ್ಯೆ:

ಫೋನ್ ಕರೆ ಸಂಪರ್ಕ:

  • +98 9128109115
  • +98 9128109109

ವಾಟ್ಸಾಪ್ ಸಂಪರ್ಕ:

  • +98 9010144557
  • +98 9015993320
  • +91 8086871709

ಅಗತ್ಯ ಮಾಹಿತಿಗೆ ಟೆಲಿಗ್ರಾಮ್ ಚಾನಲ್

ಪರಿಸ್ಥಿತಿ ಬಗ್ಗೆ ಕಾಲಕಾಲಕ್ಕೆ ಅಪ್​ಡೇಟ್ ಮಾಡುವ ಮತ್ತು ಸಲಹೆ ನೀಡುವ ಕಾರ್ಯಕ್ಕಾಗಿ ಭಾರತೀಯ ದೂತಾವಾಸ ಕಚೇರಿಯು ಟೆಲಿಗ್ರಾಮ್ ಲಿಂಕ್​ವೊಂದನ್ನು ರಚಿಸಿದೆ. ಎಲ್ಲರೂ ಕೂಡ ಈ ಲಿಂಕ್ ಅನ್ನು ಫಾಲೋ ಮಾಡಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಇರಾನ್- ಇಸ್ರೇಲ್ ವಾರ್​: ಇಸ್ರೇಲ್​ನಲ್ಲಿ ಸಿಲುಕಿದ ಕಾಂಗ್ರೆಸ್, ಬಿಜೆಪಿ ಮತ್ತು JDS ನಿಯೋಗ

ಇರಾನ್​​ನಿಂದ ಸಂಭಾವ್ಯ ದಾಳಿ ಆಗಬಹುದು ಎಂದು ಮುನ್ನೆಚ್ಚರಿಕೆಯಾಗಿ ಭಾರತವು ಇರಾನ್​ನ ಮಿಲಿಟರಿ ಮತ್ತು ಪರಮಾಣು ಘಟಕಗಳ ಮೇಲೆ ವಾಯುದಾಳಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ದೇಶವು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಇಸ್ರೇಲ್​ನ ವಿವಿಧ ನಗರಗಳ ಮೇಲೆ ಹಾರಿಸಿತ್ತು. ಇದಕ್ಕೆ ಇಸ್ರೇಲ್ ಮತ್ತೆ ಪ್ರತಿದಾಳಿ ನಡೆಸುವ ಸಾಧ್ಯತೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ರೊಮಾರಿಯೊ ಶೆಫರ್ಡ್​ಗೆ ಹ್ಯಾಟ್ರಿಕ್ ವಿಕೆಟ್; ವಿಂಡೀಸ್​ಗೆ ಜಯ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು