ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ

700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು ಎಂದು ಹೇಳಿದೆ.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ
ಹರ್ಜೋತ್​ ಸಿಂಗ್​ರನ್ನು 700 ಕಿಮೀ ಕರೆದುಕೊಂಡು ಹೋದ ಚಾಲಕ
Follow us
| Updated By: Lakshmi Hegde

Updated on:Mar 08, 2022 | 5:08 PM

ಉಕ್ರೇನ್​ ರಾಜಧಾನಿ ಕೀವ್​ನಲ್ಲಿ ರಷ್ಯಾ ಸೇನೆಯ ಗುಂಡಿನ ದಾಳಿಯಿಂದ ಗಾಯಗೊಂಡಿರುವ ಬಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಈಗಾಗಲೇ ಪೋಲ್ಯಾಂಡ್​ ಗಡಿಯವರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಭಾರತದ ವಿಮಾನ ಹತ್ತಿಸಲಾಗಿದೆ.  ಸ್ಟ್ರೆಚರ್​ ಮೇಲೆ ಮಲಗಿದ್ದ ಅವರನ್ನು ಆಂಬುಲೆನ್ಸ್ ಮೂಲಕ ಪೋಲ್ಯಾಂಡ್​ ಗಡಿಗೆ ಕರೆದುಕೊಂಡು ಬರಲಾಗಿದೆ. ಕೀವ್​​ನಿಂದ ಪೋಲ್ಯಾಂಡ್​ ಬರೋಬ್ಬರಿ 700 ಕಿಮೀಗಳಷ್ಟು ದೂರ ಇದ್ದು, ಆಂಬುಲೆನ್ಸ್​​ನಲ್ಲಿ ಕರೆದುಕೊಂಡು ಬರುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಹೀಗಿದ್ದಾಗ್ಯೂ ಚಾಲಕ ತುಂಬ ಜಾಗರೂಕತೆಯಿಂದ ವಾಹನ ಚಾಲನೆ ಮಾಡಿ, ಹರ್ಜೋತ್​ ಸಿಂಗ್​ರಿಗೆ ಯಾವುದೇ ತೊಂದರೆಯಾಗದಂತೆ ನೆರೆರಾಷ್ಟ್ರದ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದಾನೆ. ಆ ಚಾಲಕನನ್ನು ಉಕ್ರೇನ್​ನಲ್ಲಿರುವ ಭಾರತೀಯರ ರಾಯಭಾರಿ ಕಚೇರಿ ಪ್ರಶಂಸಿಸಿದೆ.

ಹೀಗೆ 700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು. ರಸ್ತೆಗಳು ಬ್ಲಾಕ್​ ಆಗಿದ್ದವು. ಅಷ್ಟೇ ಅಲ್ಲ, ಟ್ರಾಫಿಕ್​ ಜಾಮ್​ ಸಮಸ್ಯೆಯೂ ಇತ್ತು. ಇನ್ನೂ  ಹಲವು ರೀತಿಯ ನಿರ್ಬಂಧಗಳನ್ನು ಹೇರಲಾಗಿದೆ. ಅದೆಲ್ಲದರ ಮಧ್ಯೆ ಹರ್ಜೋತ್​ ಸಿಂಗ್​ರನ್ನು 700 ಕಿಮೀ ದೂರದ ಪೋಲ್ಯಾಂಡ್​ ಗಡಿಯಾದ ಬೊಡೊಮಿಯರ್ಜ್​ಗೆ ಸ್ಥಳಾಂತರ ಮಾಡಲಾಯಿತು.  ಎಲ್ಲ ಅಡೆತಡೆಗಳನ್ನೂ ಮೀರಿ ಹರ್ಜೋತ್​ರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋದ ಭಾರತೀಯ ರಾಯಭಾರಿ ಕಚೇರಿಯ ಉಕ್ರೇನ್​ ಚಾಲಕನಿಗೆ ಧನ್ಯವಾದಗಳು ಎಂದು ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.

ಸದ್ಯ ಹರ್ಜೋತ್​ ಸಿಂಗ್​(31) ಅವರು ಸಿ-17 ವಾಯು ಪಡೆ ವಿಮಾನದ ಮೂಲಕ ದೆಹಲಿ ಬಳಿಯ ಹಿಂಡನ್​ ಏರ್​ಫೋರ್ಸ್​ ಸ್ಟೇಶನ್​​ಗೆ ತಲುಪಿದ್ದಾರೆ. ನಿನ್ನೆ ಪೋಲ್ಯಾಂಡ್ ಏರ್​ಪೋರ್ಟ್ ತಲುಪಿದ್ದ ಅವರನ್ನು ಕೇಂದ್ರ ಸಚಿವ ವಿ.ಕೆ.ಸಿಂಗ್ ಭೇಟಿಯಾಗಿದ್ದರು.  ಯುದ್ಧ ಪೀಡಿತ ಉಕ್ರೇನ್​ನಿಂದ ಆಪರೇಷನ್​ ಗಂಗಾ ಮೂಲಕ ಈಗಾಗಲೇ 83 ವಿಮಾನಗಳಿಂದ 17,100 ಭಾರತೀಯರನ್ನು ಕರೆ ತಂದಿದೆ. ಉಕ್ರೇನ್​ ವಾಯು ಮಾರ್ಗ ಬಂದ್​ ಆಗಿರುವ ಕಾರಣ, ಅಲ್ಲಿರುವ ಭಾರತೀಯರನ್ನು ನೆರೆ ರಾಷ್ಟ್ರಗಳಾದ ರೊಮೇನಿಯಾ, ಪೋಲ್ಯಾಂಡ್, ಹಂಗೇರಿ, ಸ್ಲೊವಾಕಿಯಾ, ಮೊಲ್ಡೊವಾಗಳಿಗೆ ತಲುಪುವಂತೆ ಮಾಡಿ, ಅಲ್ಲಿಂದ ವಿಮಾನ ವ್ಯವಸ್ಥೆ ಮಾಡಿದೆ. ಭಾರತೀಯ ವಾಯುಪಡೆಯ ವಿಮಾನಗಳೂ ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿವೆ.

ಇದನ್ನೂ ಓದಿ: ಗೋವಾದಲ್ಲಿ ಪಕ್ಷಾಂತರ ಭೀತಿ: ತಮ್ಮ ಅಭ್ಯರ್ಥಿಗಳನ್ನು ರೆಸಾರ್ಟ್​​ಗೆ ಕರೆದೊಯ್ದ ಕಾಂಗ್ರೆಸ್

Published On - 5:07 pm, Tue, 8 March 22

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ