AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ

700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು ಎಂದು ಹೇಳಿದೆ.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ
ಹರ್ಜೋತ್​ ಸಿಂಗ್​ರನ್ನು 700 ಕಿಮೀ ಕರೆದುಕೊಂಡು ಹೋದ ಚಾಲಕ
TV9 Web
| Updated By: Lakshmi Hegde|

Updated on:Mar 08, 2022 | 5:08 PM

Share

ಉಕ್ರೇನ್​ ರಾಜಧಾನಿ ಕೀವ್​ನಲ್ಲಿ ರಷ್ಯಾ ಸೇನೆಯ ಗುಂಡಿನ ದಾಳಿಯಿಂದ ಗಾಯಗೊಂಡಿರುವ ಬಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಈಗಾಗಲೇ ಪೋಲ್ಯಾಂಡ್​ ಗಡಿಯವರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಭಾರತದ ವಿಮಾನ ಹತ್ತಿಸಲಾಗಿದೆ.  ಸ್ಟ್ರೆಚರ್​ ಮೇಲೆ ಮಲಗಿದ್ದ ಅವರನ್ನು ಆಂಬುಲೆನ್ಸ್ ಮೂಲಕ ಪೋಲ್ಯಾಂಡ್​ ಗಡಿಗೆ ಕರೆದುಕೊಂಡು ಬರಲಾಗಿದೆ. ಕೀವ್​​ನಿಂದ ಪೋಲ್ಯಾಂಡ್​ ಬರೋಬ್ಬರಿ 700 ಕಿಮೀಗಳಷ್ಟು ದೂರ ಇದ್ದು, ಆಂಬುಲೆನ್ಸ್​​ನಲ್ಲಿ ಕರೆದುಕೊಂಡು ಬರುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಹೀಗಿದ್ದಾಗ್ಯೂ ಚಾಲಕ ತುಂಬ ಜಾಗರೂಕತೆಯಿಂದ ವಾಹನ ಚಾಲನೆ ಮಾಡಿ, ಹರ್ಜೋತ್​ ಸಿಂಗ್​ರಿಗೆ ಯಾವುದೇ ತೊಂದರೆಯಾಗದಂತೆ ನೆರೆರಾಷ್ಟ್ರದ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದಾನೆ. ಆ ಚಾಲಕನನ್ನು ಉಕ್ರೇನ್​ನಲ್ಲಿರುವ ಭಾರತೀಯರ ರಾಯಭಾರಿ ಕಚೇರಿ ಪ್ರಶಂಸಿಸಿದೆ.

ಹೀಗೆ 700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು. ರಸ್ತೆಗಳು ಬ್ಲಾಕ್​ ಆಗಿದ್ದವು. ಅಷ್ಟೇ ಅಲ್ಲ, ಟ್ರಾಫಿಕ್​ ಜಾಮ್​ ಸಮಸ್ಯೆಯೂ ಇತ್ತು. ಇನ್ನೂ  ಹಲವು ರೀತಿಯ ನಿರ್ಬಂಧಗಳನ್ನು ಹೇರಲಾಗಿದೆ. ಅದೆಲ್ಲದರ ಮಧ್ಯೆ ಹರ್ಜೋತ್​ ಸಿಂಗ್​ರನ್ನು 700 ಕಿಮೀ ದೂರದ ಪೋಲ್ಯಾಂಡ್​ ಗಡಿಯಾದ ಬೊಡೊಮಿಯರ್ಜ್​ಗೆ ಸ್ಥಳಾಂತರ ಮಾಡಲಾಯಿತು.  ಎಲ್ಲ ಅಡೆತಡೆಗಳನ್ನೂ ಮೀರಿ ಹರ್ಜೋತ್​ರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋದ ಭಾರತೀಯ ರಾಯಭಾರಿ ಕಚೇರಿಯ ಉಕ್ರೇನ್​ ಚಾಲಕನಿಗೆ ಧನ್ಯವಾದಗಳು ಎಂದು ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.

ಸದ್ಯ ಹರ್ಜೋತ್​ ಸಿಂಗ್​(31) ಅವರು ಸಿ-17 ವಾಯು ಪಡೆ ವಿಮಾನದ ಮೂಲಕ ದೆಹಲಿ ಬಳಿಯ ಹಿಂಡನ್​ ಏರ್​ಫೋರ್ಸ್​ ಸ್ಟೇಶನ್​​ಗೆ ತಲುಪಿದ್ದಾರೆ. ನಿನ್ನೆ ಪೋಲ್ಯಾಂಡ್ ಏರ್​ಪೋರ್ಟ್ ತಲುಪಿದ್ದ ಅವರನ್ನು ಕೇಂದ್ರ ಸಚಿವ ವಿ.ಕೆ.ಸಿಂಗ್ ಭೇಟಿಯಾಗಿದ್ದರು.  ಯುದ್ಧ ಪೀಡಿತ ಉಕ್ರೇನ್​ನಿಂದ ಆಪರೇಷನ್​ ಗಂಗಾ ಮೂಲಕ ಈಗಾಗಲೇ 83 ವಿಮಾನಗಳಿಂದ 17,100 ಭಾರತೀಯರನ್ನು ಕರೆ ತಂದಿದೆ. ಉಕ್ರೇನ್​ ವಾಯು ಮಾರ್ಗ ಬಂದ್​ ಆಗಿರುವ ಕಾರಣ, ಅಲ್ಲಿರುವ ಭಾರತೀಯರನ್ನು ನೆರೆ ರಾಷ್ಟ್ರಗಳಾದ ರೊಮೇನಿಯಾ, ಪೋಲ್ಯಾಂಡ್, ಹಂಗೇರಿ, ಸ್ಲೊವಾಕಿಯಾ, ಮೊಲ್ಡೊವಾಗಳಿಗೆ ತಲುಪುವಂತೆ ಮಾಡಿ, ಅಲ್ಲಿಂದ ವಿಮಾನ ವ್ಯವಸ್ಥೆ ಮಾಡಿದೆ. ಭಾರತೀಯ ವಾಯುಪಡೆಯ ವಿಮಾನಗಳೂ ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿವೆ.

ಇದನ್ನೂ ಓದಿ: ಗೋವಾದಲ್ಲಿ ಪಕ್ಷಾಂತರ ಭೀತಿ: ತಮ್ಮ ಅಭ್ಯರ್ಥಿಗಳನ್ನು ರೆಸಾರ್ಟ್​​ಗೆ ಕರೆದೊಯ್ದ ಕಾಂಗ್ರೆಸ್

Published On - 5:07 pm, Tue, 8 March 22

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ