AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ

700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು ಎಂದು ಹೇಳಿದೆ.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ
ಹರ್ಜೋತ್​ ಸಿಂಗ್​ರನ್ನು 700 ಕಿಮೀ ಕರೆದುಕೊಂಡು ಹೋದ ಚಾಲಕ
TV9 Web
| Edited By: |

Updated on:Mar 08, 2022 | 5:08 PM

Share

ಉಕ್ರೇನ್​ ರಾಜಧಾನಿ ಕೀವ್​ನಲ್ಲಿ ರಷ್ಯಾ ಸೇನೆಯ ಗುಂಡಿನ ದಾಳಿಯಿಂದ ಗಾಯಗೊಂಡಿರುವ ಬಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಈಗಾಗಲೇ ಪೋಲ್ಯಾಂಡ್​ ಗಡಿಯವರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಭಾರತದ ವಿಮಾನ ಹತ್ತಿಸಲಾಗಿದೆ.  ಸ್ಟ್ರೆಚರ್​ ಮೇಲೆ ಮಲಗಿದ್ದ ಅವರನ್ನು ಆಂಬುಲೆನ್ಸ್ ಮೂಲಕ ಪೋಲ್ಯಾಂಡ್​ ಗಡಿಗೆ ಕರೆದುಕೊಂಡು ಬರಲಾಗಿದೆ. ಕೀವ್​​ನಿಂದ ಪೋಲ್ಯಾಂಡ್​ ಬರೋಬ್ಬರಿ 700 ಕಿಮೀಗಳಷ್ಟು ದೂರ ಇದ್ದು, ಆಂಬುಲೆನ್ಸ್​​ನಲ್ಲಿ ಕರೆದುಕೊಂಡು ಬರುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಹೀಗಿದ್ದಾಗ್ಯೂ ಚಾಲಕ ತುಂಬ ಜಾಗರೂಕತೆಯಿಂದ ವಾಹನ ಚಾಲನೆ ಮಾಡಿ, ಹರ್ಜೋತ್​ ಸಿಂಗ್​ರಿಗೆ ಯಾವುದೇ ತೊಂದರೆಯಾಗದಂತೆ ನೆರೆರಾಷ್ಟ್ರದ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದಾನೆ. ಆ ಚಾಲಕನನ್ನು ಉಕ್ರೇನ್​ನಲ್ಲಿರುವ ಭಾರತೀಯರ ರಾಯಭಾರಿ ಕಚೇರಿ ಪ್ರಶಂಸಿಸಿದೆ.

ಹೀಗೆ 700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು. ರಸ್ತೆಗಳು ಬ್ಲಾಕ್​ ಆಗಿದ್ದವು. ಅಷ್ಟೇ ಅಲ್ಲ, ಟ್ರಾಫಿಕ್​ ಜಾಮ್​ ಸಮಸ್ಯೆಯೂ ಇತ್ತು. ಇನ್ನೂ  ಹಲವು ರೀತಿಯ ನಿರ್ಬಂಧಗಳನ್ನು ಹೇರಲಾಗಿದೆ. ಅದೆಲ್ಲದರ ಮಧ್ಯೆ ಹರ್ಜೋತ್​ ಸಿಂಗ್​ರನ್ನು 700 ಕಿಮೀ ದೂರದ ಪೋಲ್ಯಾಂಡ್​ ಗಡಿಯಾದ ಬೊಡೊಮಿಯರ್ಜ್​ಗೆ ಸ್ಥಳಾಂತರ ಮಾಡಲಾಯಿತು.  ಎಲ್ಲ ಅಡೆತಡೆಗಳನ್ನೂ ಮೀರಿ ಹರ್ಜೋತ್​ರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋದ ಭಾರತೀಯ ರಾಯಭಾರಿ ಕಚೇರಿಯ ಉಕ್ರೇನ್​ ಚಾಲಕನಿಗೆ ಧನ್ಯವಾದಗಳು ಎಂದು ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.

ಸದ್ಯ ಹರ್ಜೋತ್​ ಸಿಂಗ್​(31) ಅವರು ಸಿ-17 ವಾಯು ಪಡೆ ವಿಮಾನದ ಮೂಲಕ ದೆಹಲಿ ಬಳಿಯ ಹಿಂಡನ್​ ಏರ್​ಫೋರ್ಸ್​ ಸ್ಟೇಶನ್​​ಗೆ ತಲುಪಿದ್ದಾರೆ. ನಿನ್ನೆ ಪೋಲ್ಯಾಂಡ್ ಏರ್​ಪೋರ್ಟ್ ತಲುಪಿದ್ದ ಅವರನ್ನು ಕೇಂದ್ರ ಸಚಿವ ವಿ.ಕೆ.ಸಿಂಗ್ ಭೇಟಿಯಾಗಿದ್ದರು.  ಯುದ್ಧ ಪೀಡಿತ ಉಕ್ರೇನ್​ನಿಂದ ಆಪರೇಷನ್​ ಗಂಗಾ ಮೂಲಕ ಈಗಾಗಲೇ 83 ವಿಮಾನಗಳಿಂದ 17,100 ಭಾರತೀಯರನ್ನು ಕರೆ ತಂದಿದೆ. ಉಕ್ರೇನ್​ ವಾಯು ಮಾರ್ಗ ಬಂದ್​ ಆಗಿರುವ ಕಾರಣ, ಅಲ್ಲಿರುವ ಭಾರತೀಯರನ್ನು ನೆರೆ ರಾಷ್ಟ್ರಗಳಾದ ರೊಮೇನಿಯಾ, ಪೋಲ್ಯಾಂಡ್, ಹಂಗೇರಿ, ಸ್ಲೊವಾಕಿಯಾ, ಮೊಲ್ಡೊವಾಗಳಿಗೆ ತಲುಪುವಂತೆ ಮಾಡಿ, ಅಲ್ಲಿಂದ ವಿಮಾನ ವ್ಯವಸ್ಥೆ ಮಾಡಿದೆ. ಭಾರತೀಯ ವಾಯುಪಡೆಯ ವಿಮಾನಗಳೂ ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿವೆ.

ಇದನ್ನೂ ಓದಿ: ಗೋವಾದಲ್ಲಿ ಪಕ್ಷಾಂತರ ಭೀತಿ: ತಮ್ಮ ಅಭ್ಯರ್ಥಿಗಳನ್ನು ರೆಸಾರ್ಟ್​​ಗೆ ಕರೆದೊಯ್ದ ಕಾಂಗ್ರೆಸ್

Published On - 5:07 pm, Tue, 8 March 22

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ