AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ

700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು ಎಂದು ಹೇಳಿದೆ.

ಗಾಯಾಳು ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಕೀವ್​​ನಿಂದ ಕರೆದುಕೊಂಡು ಹೋದ ಚಾಲಕನಿಗೆ ಧನ್ಯವಾದ ಸಲ್ಲಿಸಿದ ರಾಯಭಾರಿ ಕಚೇರಿ
ಹರ್ಜೋತ್​ ಸಿಂಗ್​ರನ್ನು 700 ಕಿಮೀ ಕರೆದುಕೊಂಡು ಹೋದ ಚಾಲಕ
TV9 Web
| Edited By: |

Updated on:Mar 08, 2022 | 5:08 PM

Share

ಉಕ್ರೇನ್​ ರಾಜಧಾನಿ ಕೀವ್​ನಲ್ಲಿ ರಷ್ಯಾ ಸೇನೆಯ ಗುಂಡಿನ ದಾಳಿಯಿಂದ ಗಾಯಗೊಂಡಿರುವ ಬಾರತದ ವಿದ್ಯಾರ್ಥಿ ಹರ್ಜೋತ್​ ಸಿಂಗ್​​ರನ್ನು ಈಗಾಗಲೇ ಪೋಲ್ಯಾಂಡ್​ ಗಡಿಯವರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಭಾರತದ ವಿಮಾನ ಹತ್ತಿಸಲಾಗಿದೆ.  ಸ್ಟ್ರೆಚರ್​ ಮೇಲೆ ಮಲಗಿದ್ದ ಅವರನ್ನು ಆಂಬುಲೆನ್ಸ್ ಮೂಲಕ ಪೋಲ್ಯಾಂಡ್​ ಗಡಿಗೆ ಕರೆದುಕೊಂಡು ಬರಲಾಗಿದೆ. ಕೀವ್​​ನಿಂದ ಪೋಲ್ಯಾಂಡ್​ ಬರೋಬ್ಬರಿ 700 ಕಿಮೀಗಳಷ್ಟು ದೂರ ಇದ್ದು, ಆಂಬುಲೆನ್ಸ್​​ನಲ್ಲಿ ಕರೆದುಕೊಂಡು ಬರುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಹೀಗಿದ್ದಾಗ್ಯೂ ಚಾಲಕ ತುಂಬ ಜಾಗರೂಕತೆಯಿಂದ ವಾಹನ ಚಾಲನೆ ಮಾಡಿ, ಹರ್ಜೋತ್​ ಸಿಂಗ್​ರಿಗೆ ಯಾವುದೇ ತೊಂದರೆಯಾಗದಂತೆ ನೆರೆರಾಷ್ಟ್ರದ ವಿಮಾನ ನಿಲ್ದಾಣಕ್ಕೆ ತಲುಪಿಸಿದ್ದಾನೆ. ಆ ಚಾಲಕನನ್ನು ಉಕ್ರೇನ್​ನಲ್ಲಿರುವ ಭಾರತೀಯರ ರಾಯಭಾರಿ ಕಚೇರಿ ಪ್ರಶಂಸಿಸಿದೆ.

ಹೀಗೆ 700 ಕಿಮೀ ಕ್ರಮಿಸುವಾಗ ಎದುರಾದ ಕಷ್ಟಗಳ ಬಗ್ಗೆಯೂ ಭಾರತೀಯ ರಾಯಭಾರಿ ಕಚೇರಿ ಟ್ವೀಟ್​ ಮೂಲಕ ತಿಳಿಸಿದೆ.  ಯುದ್ಧ ವಲಯದಲ್ಲೆಲ್ಲ ಬಾಂಬ್​ ದಾಳಿ, ಶೆಲ್ಲಿಂಗ್​ ದಾಳಿ ಆಗುತ್ತಿದೆ. ಇಂಧನ ಕೊರತೆಯ ಅಪಾಯ ಇತ್ತು. ರಸ್ತೆಗಳು ಬ್ಲಾಕ್​ ಆಗಿದ್ದವು. ಅಷ್ಟೇ ಅಲ್ಲ, ಟ್ರಾಫಿಕ್​ ಜಾಮ್​ ಸಮಸ್ಯೆಯೂ ಇತ್ತು. ಇನ್ನೂ  ಹಲವು ರೀತಿಯ ನಿರ್ಬಂಧಗಳನ್ನು ಹೇರಲಾಗಿದೆ. ಅದೆಲ್ಲದರ ಮಧ್ಯೆ ಹರ್ಜೋತ್​ ಸಿಂಗ್​ರನ್ನು 700 ಕಿಮೀ ದೂರದ ಪೋಲ್ಯಾಂಡ್​ ಗಡಿಯಾದ ಬೊಡೊಮಿಯರ್ಜ್​ಗೆ ಸ್ಥಳಾಂತರ ಮಾಡಲಾಯಿತು.  ಎಲ್ಲ ಅಡೆತಡೆಗಳನ್ನೂ ಮೀರಿ ಹರ್ಜೋತ್​ರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋದ ಭಾರತೀಯ ರಾಯಭಾರಿ ಕಚೇರಿಯ ಉಕ್ರೇನ್​ ಚಾಲಕನಿಗೆ ಧನ್ಯವಾದಗಳು ಎಂದು ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.

ಸದ್ಯ ಹರ್ಜೋತ್​ ಸಿಂಗ್​(31) ಅವರು ಸಿ-17 ವಾಯು ಪಡೆ ವಿಮಾನದ ಮೂಲಕ ದೆಹಲಿ ಬಳಿಯ ಹಿಂಡನ್​ ಏರ್​ಫೋರ್ಸ್​ ಸ್ಟೇಶನ್​​ಗೆ ತಲುಪಿದ್ದಾರೆ. ನಿನ್ನೆ ಪೋಲ್ಯಾಂಡ್ ಏರ್​ಪೋರ್ಟ್ ತಲುಪಿದ್ದ ಅವರನ್ನು ಕೇಂದ್ರ ಸಚಿವ ವಿ.ಕೆ.ಸಿಂಗ್ ಭೇಟಿಯಾಗಿದ್ದರು.  ಯುದ್ಧ ಪೀಡಿತ ಉಕ್ರೇನ್​ನಿಂದ ಆಪರೇಷನ್​ ಗಂಗಾ ಮೂಲಕ ಈಗಾಗಲೇ 83 ವಿಮಾನಗಳಿಂದ 17,100 ಭಾರತೀಯರನ್ನು ಕರೆ ತಂದಿದೆ. ಉಕ್ರೇನ್​ ವಾಯು ಮಾರ್ಗ ಬಂದ್​ ಆಗಿರುವ ಕಾರಣ, ಅಲ್ಲಿರುವ ಭಾರತೀಯರನ್ನು ನೆರೆ ರಾಷ್ಟ್ರಗಳಾದ ರೊಮೇನಿಯಾ, ಪೋಲ್ಯಾಂಡ್, ಹಂಗೇರಿ, ಸ್ಲೊವಾಕಿಯಾ, ಮೊಲ್ಡೊವಾಗಳಿಗೆ ತಲುಪುವಂತೆ ಮಾಡಿ, ಅಲ್ಲಿಂದ ವಿಮಾನ ವ್ಯವಸ್ಥೆ ಮಾಡಿದೆ. ಭಾರತೀಯ ವಾಯುಪಡೆಯ ವಿಮಾನಗಳೂ ಈ ಕಾರ್ಯಾಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿವೆ.

ಇದನ್ನೂ ಓದಿ: ಗೋವಾದಲ್ಲಿ ಪಕ್ಷಾಂತರ ಭೀತಿ: ತಮ್ಮ ಅಭ್ಯರ್ಥಿಗಳನ್ನು ರೆಸಾರ್ಟ್​​ಗೆ ಕರೆದೊಯ್ದ ಕಾಂಗ್ರೆಸ್

Published On - 5:07 pm, Tue, 8 March 22

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು