AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ತೀನ್​​ನ ಭಾರತದ ರಾಯಭಾರಿ ಮುಕುಲ್​ ಆರ್ಯಾ ಸಾವು; ರಾಯಭಾರಿ ಕಚೇರಿಯಲ್ಲೇ ಸಿಕ್ಕ ಮೃತದೇಹ, ತನಿಖೆಗೆ ಆದೇಶ

ಪ್ಯಾಲಿಸ್ತೀನ್​ ಸರ್ಕಾರ ಕೂಡ ಮುಕುಲ್​ ಆರ್ಯ ನಿಧನಕ್ಕೆ ಸಂತಾಪ ಸೂಚಿಸಿದೆ. ಅಲ್ಲಿನ ಕೇಂದ್ರ ವಿದೇಶಾಂಗ ಇಲಾಖೆ ಸಚಿವ ಡಾ. ರಿಯಾದ್ ಅಲ್​ ಮಲಿಕಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್​​ನ ಭಾರತದ ರಾಯಭಾರಿ ಮುಕುಲ್​ ಆರ್ಯಾ ಸಾವು; ರಾಯಭಾರಿ ಕಚೇರಿಯಲ್ಲೇ ಸಿಕ್ಕ ಮೃತದೇಹ, ತನಿಖೆಗೆ ಆದೇಶ
ಮುಕುಲ್ ಆರ್ಯಾ
TV9 Web
| Edited By: |

Updated on: Mar 07, 2022 | 9:08 AM

Share

ಪ್ಯಾಲೆಸ್ತೀನ್​ ದೇಶಕ್ಕೆ ಭಾರತದ ರಾಯಭಾರಿಯಾಗಿದ್ದ ಮುಕುಲ್ ಆರ್ಯಾ ( ಮೃತಪಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್.ಜೈಶಂಕರ್​ ಟ್ವೀಟ್ ಮಾಡಿದ್ದು, ಪ್ಯಾಲೆಸ್ತೀನ್​​ನ ರಾಮಲ್ಲಾದಲ್ಲಿದ್ದ ಭಾರತದ ರಾಯಭಾರಿ ಮುಕುಲ್​ ಆರ್ಯಾ ನಿಧನದ ವಾರ್ತೆ ಕೇಳಿ ತುಂಬ ಶಾಕ್​ ಆಗಿದೆ.  ಪ್ರತಿಭಾವಂತ ಅಧಿಕಾರಿಯಾಗಿದ್ದರು.  ಮುಕುಲ್​ ನಿಧನದ ದುಃಖ ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಹೇಳಿದ್ದಾರೆ. ಮುಕುಲ್ ಆರ್ಯಾ ಮೃತದೇಹ ರಾಯಭಾರಿ ಕಚೇರಿಯಲ್ಲಿ ಪತ್ತೆಯಾಗಿದ್ದು, ಅವರ ಸಾವಿನ ಬಗ್ಗೆ ಕೆಲವು ಅನುಮಾನ ವ್ಯಕ್ತವಾಗಿದೆ. ಮುಕುಲ್ ಆರ್ಯ ಸಾವಿಗೆ ಸಂಬಂಧಪಟ್ಟು ತನಿಖೆ ನಡೆಸಲು ಪ್ಯಾಲಿಸ್ತೀನ್​ ಆಡಳಿತ ಆದೇಶ ನೀಡಿದೆ.

ಅತ್ತ ಪ್ಯಾಲಿಸ್ತೀನ್​ ಸರ್ಕಾರ ಕೂಡ ಮುಕುಲ್​ ಆರ್ಯ ನಿಧನಕ್ಕೆ ಸಂತಾಪ ಸೂಚಿಸಿದೆ. ಅಲ್ಲಿನ ಕೇಂದ್ರ ವಿದೇಶಾಂಗ ಇಲಾಖೆ ಸಚಿವ ಡಾ. ರಿಯಾದ್ ಅಲ್​ ಮಲಿಕಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರಿ ಆರ್ಯಾ ನಿಧನದಿಂದ ದುಃಖವಾಗಿದೆ. ಮೃತದೇಹವನ್ನು ಭಾರತಕ್ಕೆ ಕಳಿಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನೂ ನಡೆಸಲಾಗುವುದು. ಈ ಸಂಬಂಧ ಭಾರತದ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂ ಹೇಳಿದ್ದಾರೆ. ಪ್ಯಾಲಿಸ್ತೀನ್​ ಅಧ್ಯಕ್ಷ ಮೊಹಮದ್​ ಅಬ್ಬಾಸ್​ ಮತ್ತು ಪ್ರಧಾನಮಂತ್ರಿ ಡಾ. ಮುಹಮ್ಮದ್​ ಷ್ಟಯೇ ಅವರಿಗೂ ಈ ವಿಚಾರ ತಿಳಿಸಲಾಗಿದೆ. ಅವರೂ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಭಾರತದ ರಾಯಭಾರಿ ನಿಧನದ ವಿಷಯವನ್ನು ಭದ್ರತಾ ಸಿಬ್ಬಂದಿ, ಪೊಲೀಸ್​, ಸಾರ್ವಜನಿಕ ಆಡಳಿತಗಳಿಗೆ ತಿಳಿಸಲು ಸೂಚಿಸಿದ್ದಾರೆ ಎಂದೂ ಕೂಡ ಪ್ಯಾಲಿಸ್ತೀನ್​ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಮುಕುಲ್ ಆರ್ಯಾ ಇವರು ವೃತ್ತಿಯಲ್ಲಿ ರಾಜತಾಂತ್ರಿಕರು. ಈ ಹಿಂದೆ ದೆಹಲಿಯಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಯಲ್ಲಿ ಕೂಡ ಕೆಲಸ ಮಾಡಿದ್ದಾರೆ. ಪ್ಯಾರಿಸ್​​ನಲ್ಲಿರುವ ಯುನೆಸ್ಕೋದಲ್ಲಿ ಭಾರತದ ಶಾಶ್ವತ ನಿಯೋಗದ ಪ್ರತಿನಿಧಿಯಾಗಿದ್ದರು. ಅಷ್ಟೇ ಅಲ್ಲ, ಕಾಬೂಲ್​ ಮತ್ತು ಮಾಸ್ಕೋದಲ್ಲಿ ಕೂಡ ಭಾರತದ ರಾಯಭಾರಿಯಾಗಿದ್ದರು. ದೆಹಲಿಯಲ್ಲಿಯೇ ಬೆಳೆದು ಶಿಕ್ಷಣ ಪಡೆದ ಮುಕುಲ್ ಆರ್ಯಾ, ಜೆಎನ್​ಯು ಮತ್ತು ದೆಹಲಿ ಯೂನಿವರ್ಸಿಟಿಯಲ್ಲಿ ಆರ್ಥಿಕತೆ ಅಧ್ಯಯನ ಮಾಡಿದ್ದಾರೆ. 2008ರಲ್ಲಿ ಇಂಡಿಯನ್ ಫಾರಿನ್​ ಸರ್ವೀಸ್​ ಸೇರಿದ್ದರು.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾಗೆ ಬಂಧನ ಭೀತಿ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​: ಏನಿದು ಕೇಸ್​?

Follow Us
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ