AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಲೆಸ್ತೀನ್​​ನ ಭಾರತದ ರಾಯಭಾರಿ ಮುಕುಲ್​ ಆರ್ಯಾ ಸಾವು; ರಾಯಭಾರಿ ಕಚೇರಿಯಲ್ಲೇ ಸಿಕ್ಕ ಮೃತದೇಹ, ತನಿಖೆಗೆ ಆದೇಶ

ಪ್ಯಾಲಿಸ್ತೀನ್​ ಸರ್ಕಾರ ಕೂಡ ಮುಕುಲ್​ ಆರ್ಯ ನಿಧನಕ್ಕೆ ಸಂತಾಪ ಸೂಚಿಸಿದೆ. ಅಲ್ಲಿನ ಕೇಂದ್ರ ವಿದೇಶಾಂಗ ಇಲಾಖೆ ಸಚಿವ ಡಾ. ರಿಯಾದ್ ಅಲ್​ ಮಲಿಕಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

ಪ್ಯಾಲೆಸ್ತೀನ್​​ನ ಭಾರತದ ರಾಯಭಾರಿ ಮುಕುಲ್​ ಆರ್ಯಾ ಸಾವು; ರಾಯಭಾರಿ ಕಚೇರಿಯಲ್ಲೇ ಸಿಕ್ಕ ಮೃತದೇಹ, ತನಿಖೆಗೆ ಆದೇಶ
ಮುಕುಲ್ ಆರ್ಯಾ
Follow us
TV9 Web
| Updated By: Lakshmi Hegde

Updated on: Mar 07, 2022 | 9:08 AM

ಪ್ಯಾಲೆಸ್ತೀನ್​ ದೇಶಕ್ಕೆ ಭಾರತದ ರಾಯಭಾರಿಯಾಗಿದ್ದ ಮುಕುಲ್ ಆರ್ಯಾ ( ಮೃತಪಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಎಸ್.ಜೈಶಂಕರ್​ ಟ್ವೀಟ್ ಮಾಡಿದ್ದು, ಪ್ಯಾಲೆಸ್ತೀನ್​​ನ ರಾಮಲ್ಲಾದಲ್ಲಿದ್ದ ಭಾರತದ ರಾಯಭಾರಿ ಮುಕುಲ್​ ಆರ್ಯಾ ನಿಧನದ ವಾರ್ತೆ ಕೇಳಿ ತುಂಬ ಶಾಕ್​ ಆಗಿದೆ.  ಪ್ರತಿಭಾವಂತ ಅಧಿಕಾರಿಯಾಗಿದ್ದರು.  ಮುಕುಲ್​ ನಿಧನದ ದುಃಖ ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಹೇಳಿದ್ದಾರೆ. ಮುಕುಲ್ ಆರ್ಯಾ ಮೃತದೇಹ ರಾಯಭಾರಿ ಕಚೇರಿಯಲ್ಲಿ ಪತ್ತೆಯಾಗಿದ್ದು, ಅವರ ಸಾವಿನ ಬಗ್ಗೆ ಕೆಲವು ಅನುಮಾನ ವ್ಯಕ್ತವಾಗಿದೆ. ಮುಕುಲ್ ಆರ್ಯ ಸಾವಿಗೆ ಸಂಬಂಧಪಟ್ಟು ತನಿಖೆ ನಡೆಸಲು ಪ್ಯಾಲಿಸ್ತೀನ್​ ಆಡಳಿತ ಆದೇಶ ನೀಡಿದೆ.

ಅತ್ತ ಪ್ಯಾಲಿಸ್ತೀನ್​ ಸರ್ಕಾರ ಕೂಡ ಮುಕುಲ್​ ಆರ್ಯ ನಿಧನಕ್ಕೆ ಸಂತಾಪ ಸೂಚಿಸಿದೆ. ಅಲ್ಲಿನ ಕೇಂದ್ರ ವಿದೇಶಾಂಗ ಇಲಾಖೆ ಸಚಿವ ಡಾ. ರಿಯಾದ್ ಅಲ್​ ಮಲಿಕಿ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರಿ ಆರ್ಯಾ ನಿಧನದಿಂದ ದುಃಖವಾಗಿದೆ. ಮೃತದೇಹವನ್ನು ಭಾರತಕ್ಕೆ ಕಳಿಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನೂ ನಡೆಸಲಾಗುವುದು. ಈ ಸಂಬಂಧ ಭಾರತದ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂ ಹೇಳಿದ್ದಾರೆ. ಪ್ಯಾಲಿಸ್ತೀನ್​ ಅಧ್ಯಕ್ಷ ಮೊಹಮದ್​ ಅಬ್ಬಾಸ್​ ಮತ್ತು ಪ್ರಧಾನಮಂತ್ರಿ ಡಾ. ಮುಹಮ್ಮದ್​ ಷ್ಟಯೇ ಅವರಿಗೂ ಈ ವಿಚಾರ ತಿಳಿಸಲಾಗಿದೆ. ಅವರೂ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಭಾರತದ ರಾಯಭಾರಿ ನಿಧನದ ವಿಷಯವನ್ನು ಭದ್ರತಾ ಸಿಬ್ಬಂದಿ, ಪೊಲೀಸ್​, ಸಾರ್ವಜನಿಕ ಆಡಳಿತಗಳಿಗೆ ತಿಳಿಸಲು ಸೂಚಿಸಿದ್ದಾರೆ ಎಂದೂ ಕೂಡ ಪ್ಯಾಲಿಸ್ತೀನ್​ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಮುಕುಲ್ ಆರ್ಯಾ ಇವರು ವೃತ್ತಿಯಲ್ಲಿ ರಾಜತಾಂತ್ರಿಕರು. ಈ ಹಿಂದೆ ದೆಹಲಿಯಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಯಲ್ಲಿ ಕೂಡ ಕೆಲಸ ಮಾಡಿದ್ದಾರೆ. ಪ್ಯಾರಿಸ್​​ನಲ್ಲಿರುವ ಯುನೆಸ್ಕೋದಲ್ಲಿ ಭಾರತದ ಶಾಶ್ವತ ನಿಯೋಗದ ಪ್ರತಿನಿಧಿಯಾಗಿದ್ದರು. ಅಷ್ಟೇ ಅಲ್ಲ, ಕಾಬೂಲ್​ ಮತ್ತು ಮಾಸ್ಕೋದಲ್ಲಿ ಕೂಡ ಭಾರತದ ರಾಯಭಾರಿಯಾಗಿದ್ದರು. ದೆಹಲಿಯಲ್ಲಿಯೇ ಬೆಳೆದು ಶಿಕ್ಷಣ ಪಡೆದ ಮುಕುಲ್ ಆರ್ಯಾ, ಜೆಎನ್​ಯು ಮತ್ತು ದೆಹಲಿ ಯೂನಿವರ್ಸಿಟಿಯಲ್ಲಿ ಆರ್ಥಿಕತೆ ಅಧ್ಯಯನ ಮಾಡಿದ್ದಾರೆ. 2008ರಲ್ಲಿ ಇಂಡಿಯನ್ ಫಾರಿನ್​ ಸರ್ವೀಸ್​ ಸೇರಿದ್ದರು.

ಇದನ್ನೂ ಓದಿ: ಸೋನಾಕ್ಷಿ ಸಿನ್ಹಾಗೆ ಬಂಧನ ಭೀತಿ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​: ಏನಿದು ಕೇಸ್​?

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ