AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಸಿದ್ಧತೆ: ಪ್ರವಾಸೋದ್ಯಮ, ವಿಮಾನಯಾನ, ಎಂಎಸ್‌ಎಂಇ ಕ್ಷೇತ್ರಕ್ಕೆ ನೆರವು ಸಾಧ್ಯತೆ

ಈ ಬಾರಿ ಕೇಂದ್ರ ಸರ್ಕಾರವು ಯಾವುದೇ ಆರ್ಥಿಕ ರೀಲೀಫ್ ನೀಡುವ ಪ್ಯಾಕೇಜ್ ಘೋಷಿಸಲ್ಲ ಎನ್ನುವ ಮಾತುಗಳಿದ್ದವು. ಆದರೆ ಈ ಲೆಕ್ಕಾಚಾರ ಸುಳ್ಳಾಗಿಸುವಂತೆ ಇದೀಗ ಕೇಂದ್ರ ಸರ್ಕಾರವು ಆರ್ಥಿಕ ಪ್ಯಾಕೇಜ್ ಘೋಷಣೆಗೆ ಸಿದ್ದತೆ ನಡೆಸಿದೆ.

ಕೇಂದ್ರದಿಂದ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಸಿದ್ಧತೆ: ಪ್ರವಾಸೋದ್ಯಮ, ವಿಮಾನಯಾನ, ಎಂಎಸ್‌ಎಂಇ ಕ್ಷೇತ್ರಕ್ಕೆ ನೆರವು ಸಾಧ್ಯತೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on: May 25, 2021 | 8:09 PM

Share

ದೆಹಲಿ: ಕೇಂದ್ರ ಸರ್ಕಾರವು ಈ ಬಾರಿ ದೇಶಾದ್ಯಂತ ಏಕರೂಪದ ಲಾಕ್​ಡೌನ್ ಜಾರಿಗೊಳಿಸಿಲ್ಲ. ಆದರೆ, ಕಳೆದ ತಿಂಗಳಿನಿಂದ ರಾಜ್ಯ ಸರ್ಕಾರಗಳೇ ತಮ್ಮ ರಾಜ್ಯಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಘೋಷಿಸಿಕೊಂಡಿವೆ. ಹೀಗಾಗಿ ಈ ಬಾರಿ ಕೇಂದ್ರ ಸರ್ಕಾರವು ಯಾವುದೇ ಆರ್ಥಿಕ ರೀಲೀಫ್ ನೀಡುವ ಪ್ಯಾಕೇಜ್ ಘೋಷಿಸಲ್ಲ ಎನ್ನುವ ಮಾತುಗಳಿದ್ದವು. ಆದರೆ ಈ ಲೆಕ್ಕಾಚಾರ ಸುಳ್ಳಾಗಿಸುವಂತೆ ಇದೀಗ ಕೇಂದ್ರ ಸರ್ಕಾರವು ಆರ್ಥಿಕ ಪ್ಯಾಕೇಜ್ ಘೋಷಣೆಗೆ ಸಿದ್ದತೆ ನಡೆಸಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರೇ ದೇಶಾದ್ಯಂತ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್​ಡೌನ್ ಘೋಷಿಸಿದ್ದರು. ದೀಢೀರನೇ ಎದುರಾದ ಲಾಕ್​ಡೌನ್​ನಿಂದ ಸಂಕಷ್ಟಕ್ಕೀಡಾದ ಕ್ಷೇತ್ರಗಳಿಗೆ ಕಳೆದ ವರ್ಷ ಕೇಂದ್ರ ಸರ್ಕಾರವೇ ಬರೋಬ್ಬರಿ ₹ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿತ್ತು. ರೈತರು, ಕೈಗಾರಿಕೆ, ಕಾರ್ಮಿಕರು, ಸಣ್ಣ, ಮಧ್ಯಮ ಕೈಗಾರಿಕೆಗಳು, ಬ್ಯಾಂಕ್​ಗಳು, ಮೀನುಗಾರರು, ಹೈನುಗಾರರು ಸೇರಿದಂತೆ ವಿವಿಧ ವಲಯಗಳಿಗೆ ಪ್ಯಾಕೇಜ್ ಘೋಷಿಸಲಾಗಿತ್ತು. ಆದರೆ, ಕಳೆದ ವರ್ಷದ ಆರ್ಥಿಕ ಪ್ಯಾಕೇಜ್ ನಲ್ಲಿ ಎಷ್ಟು ಹೊಸ ಯೋಜನೆಗಳು, ಎಷ್ಟು ಅದರ ಹಿಂದಿನ ಬಜೆಟ್​ನಲ್ಲಿ ಘೋಷಿಸಿದ್ದ ಯೋಜನೆಗಳು ಎಂಬುದು ಬೇರೆ ಚರ್ಚೆಯ ವಿಷಯ.

ಈ ವರ್ಷ ಕೇಂದ್ರ ಸರ್ಕಾರವು ದೇಶಾದ್ಯಂತ ಏಕರೂಪದ ಲಾಕ್​ಡೌನ್ ಘೋಷಿಸಿಲ್ಲ. ಈ ಬಾರಿ ರಾಜ್ಯ ಸರ್ಕಾರಗಳೇ ಕೊರೊನಾ ತಡೆಗೆ ಸ್ಥಳೀಯ ಕಾರ್ಯತಂತ್ರ ಜಾರಿಗೊಳಿಸಿ, ಕರ್ಪ್ಯೂ ಜಾರಿಗೊಳಿಸಿ ಎಂದು ಹೇಳಿ ಪ್ರಧಾನಿ ಮೋದಿ ಕೈ ತೊಳೆದುಕೊಂಡು ಬಿಟ್ಟರು. ತಮ್ಮ ರಾಜ್ಯಗಳಲ್ಲಿ ಕೊರೊನಾ ಹೆಚ್ಚಳ ತಡೆಯಲು ರಾಜ್ಯ ಸರ್ಕಾರಗಳೇ ಮುಂದಾಗಿ ಲಾಕ್​ಡೌನ್ ಘೋಷಿಸಿದ್ದವು. ಕಳೆದ ತಿಂಗಳೇ ದೆಹಲಿ, ಮಹಾರಾಷ್ಟ್ರ ಲಾಕ್​ಡೌನ್ ಘೋಷಿಸಿದ್ದವು. ಇದರ ಫಲವಾಗಿಯೇ ದೆಹಲಿ, ಮಹಾರಾಷ್ಟ್ರದಲ್ಲಿ ಈಗ ಕೊರೊನಾ ಪ್ರಕರಣಗಳು ನಿಯಂತ್ರಣಕ್ಕೆ ಬಂದಿವೆ. ದೆಹಲಿ, ಮಹಾರಾಷ್ಟ್ರದ ಬಳಿಕ ದೇಶದ ಎಲ್ಲ ರಾಜ್ಯ ಸರ್ಕಾರಗಳು ತಮ್ಮ ರಾಜ್ಯಗಳ ವ್ಯಾಪ್ತಿಯಲ್ಲಿ ಲಾಕ್​ಡೌನ್ ಜಾರಿಗೆ ತಂದಿವೆ. ಹೀಗಾಗಿ ಈ ಬಾರಿ ಕೇಂದ್ರ ಸರ್ಕಾರ ಕಳೆದ ವರ್ಷದಂತೆ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಿಸಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ಕೇಂದ್ರ ಸರ್ಕಾರ ಈ ಬಾರಿಯೂ ಆರ್ಥಿಕ ಪುನಶ್ಚೇತನ ಪ್ಯಾಕೇಜ್ ಘೋಷಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ. ಆರ್ಥಿಕ ಪ್ಯಾಕೇಜ್ ಘೋಷಿಸಲು ಕೇಂದ್ರ ಹಣಕಾಸು ಇಲಾಖೆಯು ಈಗಾಗಲೇ ಚರ್ಚೆ ಆರಂಭಿಸಿದೆ. ಈ ಸಂಬಂಧ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸದ್ಯದಲ್ಲೇ ಹಣಕಾಸು ತಜ್ಞರೊಂದಿಗೆ ಚರ್ಚೆ ನಡೆಸಲಿದ್ದಾರೆ. ಮುಖ್ಯವಾಗಿ ಪ್ರವಾಸೋದ್ಯಮ, ಟ್ರಾವೆಲ್ಸ್ ಮತ್ತು ವಿಮಾನಯಾನ ಕ್ಷೇತ್ರಗಳಿಗೆ ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಜೊತೆಗೆ ಲಾಕ್​ಡೌನ್​ನಿಂದ ಬಾಗಿಲು ಮುಚ್ಚಿರುವ ಸಣ್ಣ ಮತ್ತು ಅತಿಸಣ್ಣ ಉದ್ಯಮಗಳ ಕ್ಷೇತ್ರಕ್ಕೂ ಹಣಕಾಸಿನ ನೆರವು ಸಿಗುವ ಸಾಧ್ಯತೆ ಇದೆ. ಲಾಕ್​ಡೌನ್​ನಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಇತರ ಕ್ಷೇತ್ರಗಳು ಮತ್ತು ವಲಯಗಳಿಗೂ ನೆರವಿನ ಪ್ಯಾಕೇಜ್ ಸಿಗುವ ಸಾಧ್ಯತೆ ಇದೆ. ಕೇಂದ್ರದ ಹಣಕಾಸು ಇಲಾಖೆಯಲ್ಲಿ ಪ್ಯಾಕೇಜ್ ಘೋಷಣೆ ಬಗ್ಗೆ ಪ್ರಾಥಮಿಕ ಹಂತದ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ಯಾವಾಗ ಪ್ಯಾಕೇಜ್ ಘೋಷಿಸಲಾಗುತ್ತೆ ಎಂದು ನಿಖರವಾಗಿ ಹೇಳಲು ಆಗುವುದಿಲ್ಲ. ಈ ಬಾರಿಯ ಪ್ಯಾಕೇಜ್ ಗಾತ್ರ ಎಷ್ಟು ಎಂಬುದನ್ನು ಇನ್ನೂ ಕೇಂದ್ರ ಹಣಕಾಸು ಇಲಾಖೆ ಅಂತಿಮಗೊಳಿಸಿಲ್ಲ.

ನೆರವಿಗೆ ಕೈಗಾರಿಕಾ ವಲಯ ಆಗ್ರಹ ಈ ವರ್ಷವೂ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕೆಂದು ಕೈಗಾರಿಕಾ ವಲಯ ಆಗ್ರಹಿಸಿದೆ. ಎಂಎಸ್‌ಎಂಇಗಳಿಗೆ ಸಾಲದ ಮೊರಟೋರಿಯಂ (ಸಾಲ ಪಾವತಿ ಅವಧಿ ವಿಸ್ತರಣೆ) ನೀಡಿಕೆ, ಸಾಲದ ಬಡ್ಡಿ ಕಡಿತ ಸೇರಿದಂತೆ 17 ಶಿಫಾರಸ್ಸುಗಳನ್ನು ಪಿಎಚ್‌ಡಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಸರ್ಕಾರಕ್ಕೆ ಮಾಡಿದೆ. ಕೊರೊನಾದ ಎರಡನೇ ಅಲೆಯು ಮೊದಲ ಅಲೆಗಿಂತ ವೇಗವಾಗಿ ಹರಡುತ್ತಿದೆ. ಭಾರತದ ಎಲ್ಲ ಮನೆಗಳಲ್ಲೂ ತೊಂದರೆಯನ್ನು ಉಂಟು ಮಾಡುತ್ತಿದೆ. ಇಂಥ ಸಂಕಷ್ಟ ಸಮಯದಲ್ಲಿ ಆರ್ಥಿಕತೆ, ವ್ಯಾಪಾರ, ಕೈಗಾರಿಕೆಯನ್ನು ಬೆಂಬಲಿಸಲು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಣೆಗೆ ಶಿಫಾರಸ್ಸು ಮಾಡಿದ್ದೇವೆ ಎಂದು ಪಿಎಚ್‌ಡಿ ಚೇಂಬರ್ ಆಫ್ ಕಾಮರ್ಸ್ ಹೇಳಿದೆ.

ಕೊರೊನಾದ ಎರಡನೇ ಅಲೆಯ ಲಾಕ್​ಡೌನ್​ನಿಂದ ದೇಶದ ಜಿಡಿಪಿಯು 2021-22ರಲ್ಲಿ ಶೇ 10.5ರ ದರದಲ್ಲಿ ಬೆಳವಣಿಗೆ ಆಗಬಹುದು ಎಂದು ರಿಸರ್ವ್ ಬ್ಯಾಂಕ್ ಅಂದಾಜಿಸಿದೆ. ಆರ್ಥಿಕ ಬೆಳವಣಿಗೆಗೆ ವೇಗ ನೀಡಲು ಈಗ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಿಗೆ ಆರ್ಥಿಕ ನೆರವಿನ ಪ್ಯಾಕೇಜ್ ಅಗತ್ಯ ಇದೆ ಎಂದು ಆರ್ಥಿಕ ತಜ್ಞರು ಕೂಡ ಹೇಳುತ್ತಿದ್ದಾರೆ.

(Indian government preparing economic stimulus package aid to tourism aviation msme expected)

ಇದನ್ನೂ ಓದಿ: ಲಾಕ್​ಡೌನ್ ಪರಿಹಾರ ಧನ: ಮುಂದಿನ 10ರಿಂದ 12 ದಿನಗಳಲ್ಲಿ ಇನ್ನೊಂದು ಲಾಕ್​ಡೌನ್ ಪ್ಯಾಕೇಜ್ ಘೋಷಿಸಲು ಪ್ರಯತ್ನಿಸುವೆ: ಸಿಎಂ ಯಡಿಯೂರಪ್ಪ

ಇದನ್ನೂ ಓದಿ: ಪ್ಯಾಕೇಜ್ ಘೋಷಣೆ ಮಾಡದ ಸರ್ಕಾರ, ಕಣ್ಣೀರಿಡುತ್ತಿರೋ ಕುಶಲಕರ್ಮಿಗಳು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ