AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್ ಜೈಲಿನಲ್ಲಿ ಆಯುರ್ವೇದ ಚಿಕಿತ್ಸೆಗೆ ಬೇಡಿಕೆ ಇಟ್ಟ ಉಗ್ರ ಯಾಸಿನ್ ಭಟ್ಕಳ್

Yasin Bhatkal: ಯಾಸಿನ್ ಭಟ್ಕಳ್​ಗೆ ಗಂಟು ನೋವಿನ ಸಮಸ್ಯೆ ಇದೆ. ಆ ಬಗ್ಗೆ ಅವರು ಆಯುರ್ವೇದಿಕ್ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕೇಳಿಕೊಂಡಿದ್ದಾರೆ. ಅದನ್ನು ನಾವು ನೀಡುತ್ತೇವೆ ಎಂದು ಜೈಲು ಡಿಜಿ ಸಂದೀಪ್ ಗೋಯೆಲ್ ಹೇಳಿಕೆ ನೀಡಿದ್ದಾರೆ.

ತಿಹಾರ್ ಜೈಲಿನಲ್ಲಿ ಆಯುರ್ವೇದ ಚಿಕಿತ್ಸೆಗೆ ಬೇಡಿಕೆ ಇಟ್ಟ ಉಗ್ರ ಯಾಸಿನ್ ಭಟ್ಕಳ್
ಯಾಸಿನ್ ಭಟ್ಕಳ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 10, 2021 | 1:51 PM

Share

ದೆಹಲ: ಇಂಡಿಯನ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಯಾಸಿನ್ ಭಟ್ಕಳ್ ತಿಹಾರ್ ಜೈಲು ಆಡಳಿತ ಮಂಡಳಿ ಬಳಿಯಲ್ಲಿ ಆಯುರ್ವೇದ ವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು ಎಂದು ಕೇಳಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗೂ ಜೈಲು ಆಡಳಿತ ಆಯುರ್ವೇದ ಚಿಕಿತ್ಸೆ ಕೊಡಿಸಬೇಕು ಎಂಬ ಯಾಸಿನ್ ಭಟ್ಕಳ್ ಕೋರಿಕೆಯನ್ನು ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

ಯಾಸಿನ್ ಭಟ್ಕಳ್​ಗೆ ಗಂಟು ನೋವಿನ ಸಮಸ್ಯೆ ಇದೆ. ಆ ಬಗ್ಗೆ ಅವರು ಆಯುರ್ವೇದಿಕ್ ವೈದ್ಯರ ಮೂಲಕ ಚಿಕಿತ್ಸೆ ಕೊಡಿಸಲು ಕೇಳಿಕೊಂಡಿದ್ದಾರೆ. ಅದನ್ನು ನಾವು ನೀಡುತ್ತೇವೆ ಎಂದು ಜೈಲು ಡಿಜಿ ಸಂದೀಪ್ ಗೋಯೆಲ್ ಹೇಳಿಕೆ ನೀಡಿದ್ದಾರೆ.

ಯಾಸಿನ್ ಭಟ್ಕಳ್ ಇಂಡಿಯನ್ ಮುಜಾಹಿದೀನ್ ಸಂಘಟನೆ ಮಾಡಿರುವ ಆರೋಪ ಹೊತ್ತುಕೊಂಡಿದ್ದಾರೆ. ಹಾಗೂ ಭಾರತದ ಕೆಲವು ಕಡೆಗಳಲ್ಲಿ ನಡೆದ ಬಾಂಬ್ ದಾಳಿಯ ಆರೋಪ ಹೊಂದಿದ್ದಾರೆ. ಜರ್ಮನಿ ಬೇಕರಿ ಬ್ಲಾಸ್ಟ್, ದೆಹಲಿಯ ಜಾಮಿಯಾ ಮಸೀದಿ ಶೂಟಿಂಗ್, ವಾರಣಾಸಿ ಬ್ಲಾಸ್ಟ್, ಹೈದರಾಬಾದ್ ಬ್ಲಾಸ್ಟ್ ಹಾಗೂ ಮುಂಬೈ ಬಾಂಬ್ ದಾಳಿಯ ಆರೋಪ ಯಾಸಿನ್ ಮೇಲಿದೆ.

ಭಯೋತ್ಪಾದಕ, ಉಗ್ರಗಾಮಿ ಯಾಸಿನ್​ನನ್ನು 2013 ರಲ್ಲಿ ನೇಪಾಳದಲ್ಲಿ ಬಂಧಿಸಲಾಗಿತ್ತು. ಇಂಡಿಯನ್ ಮುಜಾಹಿದೀನ್​ನ ಮತ್ತೊಬ್ಬ ಅಸಾದುಲ್ಲಾ ಅಖ್ತರ್ ಜೊತೆಗೆ ಯಾಸಿನ್​ನನ್ನು ಬಂಧಿಸಲಾಗಿತ್ತು. ಆ ಮೂಲಕ ಇಂಡಿಯನ್ ಮುಜಾಹಿದೀನ್ ಸಂಘಟನೆಯ ಹಲವರ ಹೆಸರು ಬಯಲಾಗಿತ್ತು.

ಜೈಲು ಅಧಿಕಾರಿಗಳು ನೀಡಿರುವ ಮಾಹಿತಿಯಂತೆ, ಯಾಸಿನ್ ಭಟ್ಕಳ್ ತಿಹಾರ್ ಜೈಲಿನ, ಜೈಲು ಸಂಖ್ಯೆ 2 ರಲ್ಲಿ ಬಂಧಿತರಾಗಿದ್ದಾರೆ. ಗ್ಯಾಂಗ್​ಸ್ಟರ್ ಛೋಟಾ ರಾಜನ್ ಹಾಗೂ ಇಂಡಿಯನ್ ಮುಜಾಹಿದೀನ್​ನ ತೆಹ್​ಸೀನ್ ಅಖ್ತರ್ ಕೂಡ ಅದೇ ಜೈಲಿನಲ್ಲಿ ಇದ್ದಾರೆ.

ಮುಂಬೈನ ಮುಕೇಶ್ ಅಂಬಾನಿ ಮನೆಯ ಮುಂದೆ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಎಸ್​ಯುವಿ ಕಾರ್ ನಿಲ್ಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದ ಜೈಶ್ ಉಲ್ ಹಿಂದ್ ಸಂಘಟನೆಯ ಜೊತೆಗೆ ಟೆಲಿಗ್ರಾಂ ಚಾನಲ್​​ ಮೂಲಕ ಸಂವಹನ ನಡೆಸಿದ್ದ ತೆಹ್​ಸೀನ್ ಅಖ್ತರ್ ಇದೀಗ ಹಲವು ತನಿಖಾ ಕಾರ್ಯಗಳ ಸುಳಿಯಲ್ಲಿ ಇದ್ದಾನೆ.

ಇದನ್ನೂ ಓದಿ: Viral Video: ಚಮಚದಿಂದ ಜೈಲಿನ ಟಾಯ್ಲೆಟ್​ ನೆಲ ಕೊರೆದು ಹಾಲಿವುಡ್​ ಸ್ಟೈಲಲ್ಲಿ ಉಗ್ರರು ಪರಾರಿ!

ಇದನ್ನೂ ಓದಿ: ಇರಾಕ್​​ನಲ್ಲಿ ಐಸಿಸ್​ ಉಗ್ರರಿಂದ ಭೀಕರ ದಾಳಿ; 13 ಪೊಲೀಸರು ಸಾವು, ಮೂವರಿಗೆ ಗಾಯ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು