AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎನ್‌ಎಲ್‌ಡಿ ನಾಯಕ ಹಾಗೂ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ

ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಐಎನ್‌ಎಲ್‌ಡಿ (ಇಂಡಿಯನ್ ನ್ಯಾಷನಲ್ ಲೋಕ ದಳ) ನಾಯಕ ಓಂ ಪ್ರಕಾಶ್ ಚೌತಾಲಾ ದೀರ್ಘಕಾಲದ ಅನಾರೋಗ್ಯದ ಕಾರಣದಿಂದ 89ನೇ ವಯಸ್ಸಿನಲ್ಲಿ ಇಂದು ನಿಧನರಾಗಿದ್ದಾರೆ. ಹರಿಯಾಣದ ರಾಜಕೀಯ ಪರಂಪರೆಗೆ ಅವರ ಕೊಡುಗೆ ಅಪಾರ. ಅವರು ಗುರುಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರು 87ನೇ ವಯಸ್ಸಿನಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು ಎಂಬುದು ವಿಶೇಷ.

ಐಎನ್‌ಎಲ್‌ಡಿ ನಾಯಕ ಹಾಗೂ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ
Om Prakash Chautala
ಸುಷ್ಮಾ ಚಕ್ರೆ
|

Updated on: Dec 20, 2024 | 4:20 PM

Share

ಗುರುಗ್ರಾಮ: ಹಿರಿಯ ಭಾರತೀಯ ರಾಷ್ಟ್ರೀಯ ಲೋಕದಳ (INLD) ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ಇಂದು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಗುರುಗ್ರಾಮದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು.

ಹರಿಯಾಣ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿರುವ ಓಂ ಪ್ರಕಾಶ್ ಚೌಟಾಲಾ ಡಿಸೆಂಬರ್ 1989ರಿಂದ 4 ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಕೊನೆಯ ಬಾರಿ 1999 ರಿಂದ 2005ರವರೆಗೆ ಸಿಎಂ ಆಗಿದ್ದರು. ಅವರು ಹರಿಯಾಣದ ಶಾಸಕರಾಗಿ ಸುದೀರ್ಘ ಸೇವೆ ಸಲ್ಲಿಸಿದ ನಾಯಕರು ಎಂಬ ಹೆಗ್ಗಳಿಕೆಯನ್ನು ಹೊಂದಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ; ಉತ್ತರ ಪ್ರದೇಶ, ಹರಿಯಾಣದಲ್ಲಿ ಪಟಾಕಿ ಸಂಪೂರ್ಣ ಬ್ಯಾನ್

ಜನವರಿ 1935ರಲ್ಲಿ ಪ್ರಮುಖ ರಾಜಕೀಯ ಕುಟುಂಬದಲ್ಲಿ ಜನಿಸಿದ ಚೌಧರಿ ದೇವಿ ಲಾಲ್ ಅವರ ಮಗ, 2 ಬಾರಿ ಹರಿಯಾಣದ ಮುಖ್ಯಮಂತ್ರಿ ಮತ್ತು ಭಾರತದ ಆರನೇ ಉಪಪ್ರಧಾನಿ, ಚೌಟಾಲಾ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿದರು. ಅವರ ಅಧಿಕಾರಾವಧಿಯಲ್ಲಿ ಚೌಟಾಲಾ ರಾಜ್ಯ ಮತ್ತು ರಾಷ್ಟ್ರೀಯ ವೇದಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಅವರು 1987ರಲ್ಲಿ ರಾಜ್ಯಸಭಾ ಸದಸ್ಯರಾಗಿ ಚುನಾಯಿತರಾದರು ಮತ್ತು 1990ರವರೆಗೆ ಸೇವೆ ಸಲ್ಲಿಸಿದರು.

2013ರಲ್ಲಿ 1999-2000ರಲ್ಲಿ ಹರಿಯಾಣದಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿಯನ್ನು ಒಳಗೊಂಡ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅವರನ್ನು ಒಂಬತ್ತೂವರೆ ವರ್ಷಗಳ ನಂತರ ಜುಲೈ 2021ರಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು. ವಿವಾದಗಳ ಹೊರತಾಗಿಯೂ ಚೌಟಾಲಾ ಹರಿಯಾಣದ ಬಹಳ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡವರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!