AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎನ್‌ಎಲ್‌ಡಿ ನಾಯಕ ಹಾಗೂ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ

ಹರಿಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಐಎನ್‌ಎಲ್‌ಡಿ (ಇಂಡಿಯನ್ ನ್ಯಾಷನಲ್ ಲೋಕ ದಳ) ನಾಯಕ ಓಂ ಪ್ರಕಾಶ್ ಚೌತಾಲಾ ದೀರ್ಘಕಾಲದ ಅನಾರೋಗ್ಯದ ಕಾರಣದಿಂದ 89ನೇ ವಯಸ್ಸಿನಲ್ಲಿ ಇಂದು ನಿಧನರಾಗಿದ್ದಾರೆ. ಹರಿಯಾಣದ ರಾಜಕೀಯ ಪರಂಪರೆಗೆ ಅವರ ಕೊಡುಗೆ ಅಪಾರ. ಅವರು ಗುರುಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರು 87ನೇ ವಯಸ್ಸಿನಲ್ಲಿ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು ಎಂಬುದು ವಿಶೇಷ.

ಐಎನ್‌ಎಲ್‌ಡಿ ನಾಯಕ ಹಾಗೂ ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಾ ನಿಧನ
Om Prakash Chautala
ಸುಷ್ಮಾ ಚಕ್ರೆ
|

Updated on: Dec 20, 2024 | 4:20 PM

Share

ಗುರುಗ್ರಾಮ: ಹಿರಿಯ ಭಾರತೀಯ ರಾಷ್ಟ್ರೀಯ ಲೋಕದಳ (INLD) ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರು ಇಂದು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಗುರುಗ್ರಾಮದ ನಿವಾಸದಲ್ಲಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಯಿತು.

ಹರಿಯಾಣ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿರುವ ಓಂ ಪ್ರಕಾಶ್ ಚೌಟಾಲಾ ಡಿಸೆಂಬರ್ 1989ರಿಂದ 4 ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಕೊನೆಯ ಬಾರಿ 1999 ರಿಂದ 2005ರವರೆಗೆ ಸಿಎಂ ಆಗಿದ್ದರು. ಅವರು ಹರಿಯಾಣದ ಶಾಸಕರಾಗಿ ಸುದೀರ್ಘ ಸೇವೆ ಸಲ್ಲಿಸಿದ ನಾಯಕರು ಎಂಬ ಹೆಗ್ಗಳಿಕೆಯನ್ನು ಹೊಂದಿದ್ದರು.

ಇದನ್ನೂ ಓದಿ: ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ; ಉತ್ತರ ಪ್ರದೇಶ, ಹರಿಯಾಣದಲ್ಲಿ ಪಟಾಕಿ ಸಂಪೂರ್ಣ ಬ್ಯಾನ್

ಜನವರಿ 1935ರಲ್ಲಿ ಪ್ರಮುಖ ರಾಜಕೀಯ ಕುಟುಂಬದಲ್ಲಿ ಜನಿಸಿದ ಚೌಧರಿ ದೇವಿ ಲಾಲ್ ಅವರ ಮಗ, 2 ಬಾರಿ ಹರಿಯಾಣದ ಮುಖ್ಯಮಂತ್ರಿ ಮತ್ತು ಭಾರತದ ಆರನೇ ಉಪಪ್ರಧಾನಿ, ಚೌಟಾಲಾ ಅವರು ತಮ್ಮ ತಂದೆಯ ಹಾದಿಯನ್ನು ಅನುಸರಿಸಿದರು. ಅವರ ಅಧಿಕಾರಾವಧಿಯಲ್ಲಿ ಚೌಟಾಲಾ ರಾಜ್ಯ ಮತ್ತು ರಾಷ್ಟ್ರೀಯ ವೇದಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಅವರು 1987ರಲ್ಲಿ ರಾಜ್ಯಸಭಾ ಸದಸ್ಯರಾಗಿ ಚುನಾಯಿತರಾದರು ಮತ್ತು 1990ರವರೆಗೆ ಸೇವೆ ಸಲ್ಲಿಸಿದರು.

2013ರಲ್ಲಿ 1999-2000ರಲ್ಲಿ ಹರಿಯಾಣದಲ್ಲಿ ಕಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿಯನ್ನು ಒಳಗೊಂಡ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅವರನ್ನು ಒಂಬತ್ತೂವರೆ ವರ್ಷಗಳ ನಂತರ ಜುಲೈ 2021ರಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಯಿತು. ವಿವಾದಗಳ ಹೊರತಾಗಿಯೂ ಚೌಟಾಲಾ ಹರಿಯಾಣದ ಬಹಳ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡವರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More