Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಮಹಾಸಾಗರಕ್ಕೆ ಬಂದ ಚೀನಾ ಹಡಗು, ಬಲ ಹೆಚ್ಚಿಸಿಕೊಳ್ಳಲು ಸರ್ಕಾರದ ಬಳಿ ಕೆಲವು ಬೇಡಿಕೆ ಇಟ್ಟ ಭಾರತೀಯ ನೌಕಾಪಡೆ

ಚೀನಾ ಹಡಗು ಹಿಂದೂಮಹಾಸಾಗರಕ್ಕೆ ಕಾಲಿಟ್ಟಿದೆ, ಇದನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನೌಕಾಪಡೆ ಕೂಡ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು  ಮುಂದಾಗಿದೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮುಂದೆ ಕೆಲವು ಬೇಡಿಕೆಗಳನ್ನಿಟ್ಟಿದೆ. ನೌಕಾಪಡೆಯು ಇನ್ನೂ ಒಂದು ವಿಮಾನವಾಹಕ ನೌಕೆ, ಮೂರು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳು ಮತ್ತು ಆರು ಡೀಸೆಲ್-ವಿದ್ಯುತ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಸರ್ಕಾರವನ್ನು ಕೇಳಿದೆ.

ಹಿಂದೂಮಹಾಸಾಗರಕ್ಕೆ ಬಂದ ಚೀನಾ ಹಡಗು, ಬಲ ಹೆಚ್ಚಿಸಿಕೊಳ್ಳಲು ಸರ್ಕಾರದ ಬಳಿ ಕೆಲವು ಬೇಡಿಕೆ ಇಟ್ಟ ಭಾರತೀಯ ನೌಕಾಪಡೆ
ಐಎನ್​ಎಸ್ ವಿಕ್ರಾಂತ್
Follow us
ನಯನಾ ರಾಜೀವ್
|

Updated on: Sep 28, 2023 | 12:25 PM

ಚೀನಾ ಹಡಗು ಹಿಂದೂಮಹಾಸಾಗರಕ್ಕೆ ಕಾಲಿಟ್ಟಿದೆ, ಇದನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನೌಕಾಪಡೆ ಕೂಡ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು  ಮುಂದಾಗಿದೆ, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮುಂದೆ ಕೆಲವು ಬೇಡಿಕೆಗಳನ್ನಿಟ್ಟಿದೆ. ನೌಕಾಪಡೆಯು ಇನ್ನೂ ಒಂದು ವಿಮಾನವಾಹಕ ನೌಕೆ, ಮೂರು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳು ಮತ್ತು ಆರು ಡೀಸೆಲ್-ವಿದ್ಯುತ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಸರ್ಕಾರವನ್ನು ಕೇಳಿದೆ.

ನೌಕಾಪಡೆಯು ಈ ಎಲ್ಲದರ ಮೂಲಕ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಬಯಸುತ್ತಿದೆ, ಇದರಿಂದ ಅದು ಚೀನಾದ ನೌಕಾಪಡೆಯೊಂದಿಗೆ ಸ್ಪರ್ಧಿಸಬಹುದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ್ ಭಾರತ್ ಅಡಿಯಲ್ಲಿ ಜಲಾಂತರ್ಗಾಮಿಗಳಿಗೆ ವಿಮಾನವಾಹಕ ನೌಕೆಗಳನ್ನು ದೇಶದಲ್ಲೇ ತಯಾರಿಸಲಾಗುವುದು .

ಚೀನಾವು ಮಲಕ್ಕಾ ಜಲಸಂಧಿ ಬಳಿಯ ಕಾಂಬೋಡಿಯಾದಲ್ಲಿ ರೀಮ್‌ನಲ್ಲಿ ಲಾಜಿಸ್ಟಿಕ್ಸ್ ನೆಲೆಯನ್ನು ಸ್ಥಾಪಿಸಿದೆ, ಬಂಗಾಳ ಕೊಲ್ಲಿಯ ಕೊಕೊ ದ್ವೀಪದಲ್ಲಿ ಲಿಸನಿಂಗ್ ಪೋಸ್ಟ್, ಶ್ರೀಲಂಕಾದ ಹಂಬನ್‌ಟೋಟ್ ಬೇಸ್, ಬಲೂಚಿಸ್ತಾನ್‌ನ ಗ್ವಾದರ್, ಇರಾನ್​ನ ಜಸ್ಕ್ ಮತ್ತು ರೆಡ್​ ಸೀನಲ್ಲಿ ನೌಕಾ ನೆಲೆ ನಿರ್ಮಿಸಲಾಗಿದೆ.

2025-2026ರ ವೇಳೆಗೆ ಚೀನಾದ ವಿಮಾನವಾಹಕ ನೌಕೆಗಳು ಹಿಂದೂ ಮಹಾಸಾಗರದಲ್ಲಿ ಗಸ್ತು ತಿರುಗಲಿವೆ ಎಂದು ಹೇಳಲಾಗುತ್ತಿದೆ. ಭಾರತದ ಮೊದಲ ವಿಮಾನವಾಹಕ ನೌಕೆ INS ವಿಕ್ರಮಾದಿತ್ಯ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಮುಂಬೈನ ಮಜಗಾನ್ ಡಾಕ್‌ಯಾರ್ಡ್‌ನಲ್ಲಿ ಮೂರು ಕ್ಯಾಲ್ವರಿ ದರ್ಜೆಯ ಜಲಾಂತರ್ಗಾಮಿ ನೌಕೆಗಳನ್ನು ನಿರ್ಮಿಸಲು ಭಾರತವು ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ. 5000 ಟನ್ ತೂಕದ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಗಳನ್ನು ವಿನ್ಯಾಸಗೊಳಿಸಲು ಮತ್ತು ನಿರ್ಮಿಸಲು ಫ್ರಾನ್ಸ್ ಸಿದ್ಧವಾಗಿದೆ.

ಮತ್ತಷ್ಟು ಓದಿ: ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನಾದ ಬೇಹುಗಾರಿಕಾ ಹಡಗು

ಇದರ ಹೊರತಾಗಿ, ಪ್ರಾಜೆಕ್ಟ್ 75 ರ ಮಾತುಕತೆಗಳು ಕಾರ್ಯರೂಪಕ್ಕೆ ಬರದಿದ್ದರೆ, ಪ್ರಾಜೆಕ್ಟ್ 76 ರ ಅಡಿಯಲ್ಲಿ ಜಲಾಂತರ್ಗಾಮಿ ನೌಕೆಗಳನ್ನು ವಿನ್ಯಾಸಗೊಳಿಸಲು ಮತ್ತು ನಿರ್ಮಿಸಲು ಫ್ರಾನ್ಸ್ ಸಿದ್ಧವಾಗಿದೆ. ಪ್ರಾಜೆಕ್ಟ್ 75ರ ಅಡಿಯಲ್ಲಿ ಆರು ಡೀಸೆಲ್-ಎಲೆಕ್ಟ್ರಿಕ್ ಜಲಾಂತರ್ಗಾಮಿ ನೌಕೆಗಳನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಇತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ